Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಟರಿ ಕ್ಲಬ್ ದೇರಳಕಟ್ಟೆ ವತಿಯಿಂದ...

ರೋಟರಿ ಕ್ಲಬ್ ದೇರಳಕಟ್ಟೆ ವತಿಯಿಂದ ‘ಆಟಿಡೊಂಜಿ ದಿನ ’

ವಾರ್ತಾಭಾರತಿವಾರ್ತಾಭಾರತಿ9 Aug 2017 5:44 PM IST
share
ರೋಟರಿ ಕ್ಲಬ್ ದೇರಳಕಟ್ಟೆ ವತಿಯಿಂದ ‘ಆಟಿಡೊಂಜಿ ದಿನ ’

 ಉಳ್ಳಾಲ, ಆ. 9: ಕೃಷಿ ಪ್ರಧಾನ ತುಳುನಾಡಿನಲ್ಲಿ ಆಟಿ ತಿಂಗಳಿಗೆ ಮಹತ್ವವಿದ್ದು, ಕಷ್ಟಗಳನ್ನು ಕಳೆಯುವ ಸಲುವಾಗಿ ವಿವಿಧ ಸಂಪ್ರದಾಯಗಳನ್ನು ಆನುಸರಿಸುವ ಕಾಲವಾಗಿದ್ದು, ಅದನ್ನು ಮುಂದುವರಿಸುವ ಕಾರ್ಯ ಶ್ಲಾಘನೀಯ ಎಂದು ಲಯನೆಸ್ ಕ್ಲಬ್ ಜಿಲ್ಲಾ ಮಾಜಿ ಸಂಯೋಜಕಿ ವಿಜಯಲಕ್ಷ್ಮೀ ರೈ ಕಲ್ಲಿಮಾರು ಅಭಿಪ್ರಾಯಪಟ್ಟರು.

ರೋಟರಿ ಕ್ಲಬ್ ದೇರಳಕಟ್ಟೆ ವತಿಯಿಂದ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ರವಿಂದ್ರ ಕಲಾ ವೇದಿಕೆಯಲ್ಲಿ ನಡೆದ ‘ಆಟಿಡೊಂಜಿ ದಿನ ’ ರೋಟರಿ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಆಟಿ ತಿಂಗಳಲ್ಲಿ ಕಷ್ಟ ಕೋಟೆಗಳನ್ನು ಕಳೆಯಲು ಆಟಿ ಕಳೆಂಜದ ಮೂಲಕ ದೇವರು ಬರುವ ಸಂಪ್ರದಾಯ, ಕಷ್ಟದ ಬದುಕನ್ನು ಸಾಗಿಸುವ ತಿಂಗಳಲ್ಲಿ ಪ್ರಕೃತಿಯಿಂದ ಸಿಗುವ ವಸ್ತುಗಳಿಂದ ಆಹಾರ ತಯಾರಿ. ಸೊಸೆಯನ್ನು ತವರು ಮನೆಗೆ ಕಳುಹಿಸುವ ಸಂಪ್ರದಾಯದಿಂದ ತಾಯಿ ಮಗಳ ಪ್ರೀತಿ ಮತ್ತೆ ನೆನಪಿಸುವುದರ ಜತೆಗೆ, ಸೊಸೆಗೂ ಅದೇ ರೀತಿಯ ಪ್ರೀತಿಯನ್ನು ಕೊಡಬೇಕಾದ ಜ್ಞಾನಾರ್ಜನೆಯೂ ಆಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ದೇರಳಕಟ್ಟೆಯ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ವಹಿಸಿ ಮಾತನಾಡಿ ಅಂತರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿ ಕ್ಲಬ್ ನಲ್ಲಿ ಇದೇ ಮೊದಲ ಬಾರಿಗೆ ಪ್ರಾದೇಶಿಕ ಆಚರಣೆಯನ್ನು ಮಾಡಲಾಗಿದೆ. ಸರೊಟೇರಿಯನ್ ಗಳು ಕೋಟು , ಸೂಟು ಬೂಟಿನಲ್ಲೇ ಉಳಿಯುತ್ತಾರೆ. ಆದರೆ ಆಟಿ ತಿಂಗಳ ಆಚರಣೆಯ ಮೂಲಕ ಎಲ್ಲರನ್ನು ತುಳುನಾಡಿನ ಸಂಸ್ಕೃತಿಯ ಲುಂಗಿಯನ್ನು ಉಡಿಸಲಾಗಿದೆ. ತುಳುನಾಡಿನ ವಿಶೀಷ್ಟ್ಯ ಖಾದ್ಯವನ್ನು ಎಲ್ಲರೂ ತಯಾರಿಸುವ ಜತೆಗೆ ಕುಟುಂಬ ಸಮ್ಮಿಲನದಲ್ಲಿ, ಎಲ್ಲಾ ಸದಸ್ಯರು ಸಂಭ್ರಮ ಆಚರಿಸಿದ್ದಾರೆ ಎಂದರು.

ಆಷಾಢದ ಆಹಾರದ ವಿವರಗಳನ್ನು ಸೌಮ್ಯ ಆರ್ ಶೆಟ್ಟಿ ನೀಡಿದರು. ಕ್ಲಬ್ ನ ಮಾಜಿ ಅಧ್ಯಕ್ಷ ಪಿ.ಡಿ.ಶೆಟ್ಟಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ ನಿರ್ದೇಶಕ ಡಾ.ರವಿಶಂಕರ್ ರಾವ್ ಸ್ವಾಗತಿಸಿದರು. ಜಯಪ್ರಕಾಶ್ ರೈ ವರದಿ ವಾಚಿಸಿದರು. ಕೋಶಾಧಿಕಾರಿ ವಿಕ್ರಂ ದತ್ತಾ ಕಾರ್ಯಕ್ರಮ ನಿರೂಪಿಸಿದರು. ಡಾ. ಅನಂತನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X