Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಬರ’ ಮುಕ್ತ ಭಾರತಕ್ಕಾಗಿ ಆ.16ರಿಂದ...

‘ಬರ’ ಮುಕ್ತ ಭಾರತಕ್ಕಾಗಿ ಆ.16ರಿಂದ ರಾಷ್ಟ್ರೀಯ ಜಲ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ9 Aug 2017 5:52 PM IST
share
‘ಬರ’ ಮುಕ್ತ ಭಾರತಕ್ಕಾಗಿ ಆ.16ರಿಂದ ರಾಷ್ಟ್ರೀಯ ಜಲ ಸಮಾವೇಶ

ಬೆಂಗಳೂರು, ಆ. 9: ‘ಬರ-ಪ್ರವಾಹ’ ಮುಕ್ತ ಭಾರತಕ್ಕಾಗಿ ಆ.16ರಿಂದ ಮೂರು ದಿನಗಳ ಕಾಲ ವಿಜಯಪುರದ ಬಿಎಲ್‌ಡಿಇಎ ವಿಶ್ವ ವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಜಲ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಜಲ ತಜ್ಞ, ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ಡಾ.ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯದಿಂದ ದೇಶದಲ್ಲಿ ಮಳೆಯ ಚಕ್ರವೇ ಸಂಪೂರ್ಣ ಬದಲಾಗಿದ್ದು, ಅಕಾಲಿಕ ಬರ ಹಾಗೂ ಪ್ರವಾಹ ಸ್ಥಿತಿ ಎದುರಿಸಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಳೆಯ ಚಕ್ರ ಸಂಪೂರ್ಣ ಬದಲಾಗಿದೆ. ಆದರೆ, ದೇಶದಲ್ಲಿನ ರೈತರ ಬೆಳೆ ಪದ್ಧತಿಯಲ್ಲಿ ಬದಲಾವಣೆ ಆಗಿಲ್ಲ. ಹೀಗಾಗಿ ರೈತರು ನಿರಂತರವಾಗಿ ನಷ್ಟ ಹಾಗೂ ಸಂಕಷ್ಟಕ್ಕೆ ಸಿಲುಕಬೇಕಾದ ದುಸ್ಥಿತಿ ಎದುರಾಗಿದೆ ಎಂದು ರಾಜೇಂದ್ರ ಸಿಂಗ್ ವಿವರಿಸಿದರು.

ಭ್ರಷ್ಟತೆಯ ಜೋಡೆ: ಕಳೆದಇಪ್ಪತ್ತು ವರ್ಷಗಳಿಂದ ನದಿ ಜೋಡಣೆ ವಿಷಯ ಕೇಳುತ್ತಿದ್ದೇವೆ. ಆದರೆ, ನದಿ ಜೋಡಣೆ ಜತೆಗೆ ಭ್ರಷ್ಟತೆಯ ಜೋಡಣೆಯೂ ಆಗಿದೆ ಎಂದು ಟೀಕಿಸಿದ ಅವರು, ಈ ಹಿಂದೆ ರಾಜರು ಕೆರೆ, ಕಟ್ಟೆಗಳನ್ನು ಹೇಗೆ ಭರ್ತಿ ಮಾಡುತ್ತಿದ್ದರು. ಮಳೆ ಆಧರಿಸಿ ಲಕ್ಷಾಂತರ ಜನರಿಗೆ ಕುಡಿಯಲು ಮತ್ತು ಕೃಷಿಗೆ ನೀರು ಒದಗಿಸುತ್ತಿದ್ದ ಎಂಬ ಬಗ್ಗೆ ಅಧ್ಯಯನ ನಡೆಸಬೇಕೆಂದು ಸಲಹೆ ನೀಡಿದರು.

ಹೊಸದಿಲ್ಲಿಯಲ್ಲಿ ರಾಷ್ಟ್ರೀಯ ಜಲ ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ವಿಜಯಪುರ ಜಿಲ್ಲೆಯಲ್ಲಿನ ನೀರು ಪೂರೈಕೆ ವ್ಯವಸ್ಥೆಯನ್ನು ನೋಡಿದ್ದು, ಅಲ್ಲಿಯೇ ರಾಷ್ಟ್ರೀಯ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ವಿವರ ನೀಡಿದರು. ಮಳೆ ಆಧರಿತ ಪ್ರದೇಶವಾಗಿದ್ದರೂ ಹಿಂದಿನ ಕಾಲದಲ್ಲಿ ಆದಿಲ್ ಷಾಹಿಗಳು 10 ಲಕ್ಷ ಜನರಿಗೆ ನೀರು ಪೂರೈಕೆ ಮಾಡುವ ವ್ಯವಸ್ಥಿತ ಜಾಲ ರೂಪಿಸಿದ್ದರು ಎಂದು ಸ್ಮರಿಸಿದ ಅವರು, ದೊಡ್ಡವರಿಗಾಗಿ ದೊಡ್ಡ ಯೋಜನೆಗಳು ಜಾರಿಯಾಗುತ್ತವೆ. ಆದರೆ, ಸಣ್ಣ-ಸಣ್ಣವರಿಗಾಗಿ ಸಣ್ಣ-ಸಣ್ಣ ಯೋಜನೆಗಳು ರೂಪಿಸುವುದು ಪರಿಣಾಮಕಾರಿ ಎಂಬುದಕ್ಕೆ ವಿಜಯಪುರ ಉದಾಹರಣೆಯಾಗಿದೆ ಎಂದು ಉಲ್ಲೇಖಿಸಿದರು.

ಸಮಾವೇಶದಲ್ಲಿ 500 ಮಂದಿ ಜಲ ತಜ್ಞರು ಭಾಗವಹಿಸಲಿದ್ದು, ಬರ ಪರಿಸ್ಥಿತಿ, ಲಭ್ಯ ಇರುವ ನೀರಿನ ನಿರ್ವಹಣೆ ಬಗ್ಗೆ ಚರ್ಚಿಸಲಾಗುವುದು ಎಂದ ಅವರು, ಆ.18ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದು, ನೀರಿನ ಮಹತ್ವ ಸಾರುವ ದೃಷ್ಟಿಯಿಂದ ‘ವಿಜಯಪುರ ಘೋಷಣೆ’ ಎಂಬ ನಿರ್ಣಯ ಅಂಗೀಕರಿಸಲಾಗುವುದು ಎಂದರು.

ಅಪಾಯ: ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ದೇಶದ ಮುದ್ದಿನ ಮಗನಂತೆ ಆಗಿದ್ದು, ಈ ನಗರದ ಬಗ್ಗೆ ಎಲ್ಲರಿಗೂ ಅಕ್ಕರೆ ಜಾಸ್ತಿ. ಹೀಗಾಗಿ ಹೆಚ್ಚು ಅಪಾಯವಿದೆ. ಕಾವೇರಿ ಮಾತ್ರವಲ್ಲ, ಎಲ್ಲ ನದಿಗಳ ನೀರನ್ನು ತಂದರೂ ಬೆಂಗಳೂರಿನ ದಾಹ ನೀಗುವುದಿಲ್ಲ ಎಂದು ಅವರು ಹೇಳಿದರು.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ನಾಗರಿಕರಿಗೆ ನೀರಿನ ಬಗ್ಗೆ ಜಾಗೃತಿ ಮೂಡಿಸಬೇಕು. ಅಲ್ಲದೆ, ಬೆಂಗಳೂರಿನ ತ್ಯಾಜ್ಯದ ನೀರಿನ ಸಂಸ್ಕರಣೆ, ಪುನರ್ ಬಳಕೆಯ ಬಗ್ಗೆಯೂ ಗಂಭೀರವಾಗಿ ಆಲೋಚಿಸಬೇಕಿದೆ. ನಗರದಲ್ಲಿನ ಕೆರೆ-ಕುಂಟೆಗಳನ್ನು ಸಂರಕ್ಷಿಸಲು ಕ್ರಮ ವಹಿಸಬೇಕೆಂದು ಅವರು ಸಲಹೆ ನೀಡಿದರು. ಗೋಷ್ಟಿಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

‘ವಿಜಯಪುರದಲಿದ್ದ ಕೆರೆ-ಬಾವಿಗಳನ್ನು ಪುನಶ್ವೇತನಗೊಳಿಸಲಾಗಿದೆ. ಅಲ್ಲಿ ಸಿಕ್ಕಿರುವ ನೀರು ಕುಡಿಯಲು ಯೋಗ್ಯವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗುವುದು. ದೇಶದಲ್ಲೆ ಹನಿ ನೀರಾವರಿ ಪದ್ಧತಿ ಅಳವಡಿಸಿದ ಮೊದಲ ರಾಜ್ಯ ಕರ್ನಾಟಕ. ಸೂಕ್ಷ್ಮ ನೀರಾವರಿ ಮೂಲಕ ನೀರಿನ ಬಳಕೆ ನಿಯಂತ್ರಣಕ್ಕೆ ಮುಂದಾಗಿದೆ’
-ಎಂ.ಬಿ.ಪಾಟೀಲ್, ಜಲಸಂಪನ್ಮೂಲ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X