Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವರ್ಷ ಕೋಮು ಘಟನೆಗಳಲ್ಲಿ ಉತ್ತರ ಪ್ರದೇಶ...

ಈ ವರ್ಷ ಕೋಮು ಘಟನೆಗಳಲ್ಲಿ ಉತ್ತರ ಪ್ರದೇಶ ಮೊದಲನೆ ಸ್ಥಾನದಲ್ಲಿ

ವಾರ್ತಾಭಾರತಿವಾರ್ತಾಭಾರತಿ9 Aug 2017 7:39 PM IST
share
ಈ ವರ್ಷ ಕೋಮು ಘಟನೆಗಳಲ್ಲಿ ಉತ್ತರ ಪ್ರದೇಶ ಮೊದಲನೆ ಸ್ಥಾನದಲ್ಲಿ

ಹೊಸದಿಲ್ಲಿ,ಆ.9: ಈ ವರ್ಷದ ಜನವರಿಯಿಂದ ಮೇವರೆಗಿನ ಅವಧಿಯಲ್ಲಿ ದೇಶದಲ್ಲಿ ಅತಿಹೆಚ್ಚು ಕೋಮು ಘಟನೆಗಳು ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ನಡೆದಿವೆ ಎಂದು ಲೋಕಸಭೆಗೆ ಸಲ್ಲಿಸಲಾಗಿರುವ ಅಂಕಿಅಂಶಗಳು ಬೆಟ್ಟು ಮಾಡಿವೆ.

ಈ ಅವಧಿಯಲ್ಲಿ ದೇಶಾದ್ಯಂತ 296 ಕೋಮು ಘಟನೆಗಳು ಸಂಭವಿಸಿದ್ದು, ಇವುಗಳಲ್ಲಿ 44 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 892ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಉ.ಪ್ರದೇಶವೊಂದರಲ್ಲಿಯೇ 60 ಘಟನೆಗಳು ವರದಿಯಾಗಿದ್ದು, ಅಲ್ಲಿ 16 ಜೀವಗಳು ಬಲಿಯಾಗಿವೆ ಮತ್ತು 151 ಜನರು ಗಾಯಗೊಂಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 36 ಕೋಮುಘಟನೆಗಳಲ್ಲಿ ಮೂವರು ಕೊಲ್ಲಲ್ಪಟ್ಟಿದ್ದು, 93 ಜನರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ(29), ರಾಜಸ್ಥಾನ(27), ಪ.ಬಂಗಾಳ(26), ಬಿಹಾರ(23), ಗುಜರಾತ್ ಮತ್ತು ಮಹಾರಾಷ್ಟ್ರ(ತಲಾ 20) ಹೆಚ್ಚು ಸಂಖ್ಯೆಯಲ್ಲಿ ಕೋಮು ಘಟನೆಗಳು ಸಂಭವಿಸಿರುವ ಇತರ ರಾಜ್ಯಗಳಾಗಿವೆ.

ದೇಶದಲ್ಲಿ 2016ರಲ್ಲಿ 703 ಮತ್ತು 2015ರಲ್ಲಿ 751 ಕೋಮು ಘಟನೆಗಳು ನಡೆದಿದ್ದು, ಈ ಎರಡು ವರ್ಷಗಳಲ್ಲಿಯೂ ಉ.ಪ್ರದೇಶ ಮತ್ತು ಕರ್ನಾಟಕ ಅಗ್ರಸ್ಥಾನಗಳಲ್ಲಿದ್ದವು. 2016ರಲ್ಲಿ ಉ.ಪ್ರದೇಶದಲ್ಲಿ 162 ಮತ್ತು ಕರ್ನಾಟಕದಲ್ಲಿ 101 ಕೋಮು ಘಟನೆಗಳು ನಡೆದಿದ್ದರೆ, 2015ರಲ್ಲಿ ಇವು ಅನುಕ್ರಮವಾಗಿ 155 ಮತ್ತು 105 ಆಗಿದ್ದವು.

2015ರಲ್ಲಿ ಅತ್ಯಂತ ಹೆಚ್ಚಿನ(97) ಸಾವುಗಳು ಸಂಭವಿಸಿದ್ದರೆ, 2014ರಲ್ಲಿ 95 ಮತ್ತು 2016ರಲ್ಲಿ 86 ಸಾವುಗಳು ಸಂಭವಿಸಿವೆ. ಕಳೆದ ವರ್ಷ 2,321 ಜನರು ಗಾಯ ಗೊಂಡಿದ್ದು, ಇದು ಹಿಂದಿನೆರಡು ವರ್ಷಗಳಿಗೆ ಹೋಲಿಸಿದರೆ ಅತ್ಯಂತ ಹೆಚ್ಚಾಗಿದೆ ಎಂದೂ ಅಂಕಿಅಂಶಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X