Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನಪರ ಯುವಜನರ ಆಯ್ಕೆಗೆ ದೇವನೂರ ಮಹಾದೇವ...

ಜನಪರ ಯುವಜನರ ಆಯ್ಕೆಗೆ ದೇವನೂರ ಮಹಾದೇವ ಸಲಹೆ

ಪರ್ಯಾಯ ನಿರ್ಮಾಣ ದಿನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Aug 2017 9:11 PM IST
share
ಜನಪರ ಯುವಜನರ ಆಯ್ಕೆಗೆ ದೇವನೂರ ಮಹಾದೇವ ಸಲಹೆ

ಮದ್ದೂರು, ಆ.9: ಕೆಟ್ಟಿರುವ ಕ್ಷೇತ್ರಕ್ಕೆ ನಾವುಗಳು ಗಮನ ಕೊಡದೆ ಹೋದರೆ ಅವುಗಳು ನಮ್ಮನ್ನು ತಿಂದು ಹಾಕುತ್ತವೆ. ರಾಜಕೀಯ ಕೆಟ್ಟಿದೆ ಎಂದು ಕೈಕಟ್ಟಿ ಕುಳಿತರೆ ಅದಕ್ಕೆ ನಾವು ಭಾರೀ ಬೆಲೆ ತೆತ್ತಬೇಕಾಗುತ್ತದೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಎಚ್ಚರಿಕೆ ನೀಡಿದ್ದಾರೆ.

ಕ್ವಿಟ್ ಇಂಡಿಯಾ-75 ಹಿನ್ನೆಲೆಯಲ್ಲಿ ಜನಾಂದೋಲನಗಳ ಮಹಾಮೈತ್ರಿ ವತಿಯಿಂದ ಪರ್ಯಾಯ ನಿರ್ಮಾಣದ ಆರಂಭದ ದಿನವಾಗಿ ಬುಧವಾರ ಶಿವಪುರ ಧ್ವಜ ಸತ್ಯಾಗ್ರಹ ಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಟ್ಟಿರುವ ರಾಜಕೀಯ ಕ್ಷೇತ್ರವನ್ನು ಸರಿಪಡಿಸಬೇಕಾದರೆ ಪುಂಡಾಡಿಕೆ ಮಾಡುವವರನ್ನು ಬದಿಗಿರಿಸಿ ಜನಪರ ಕಾಳಜಿ ಇರುವ ಯುವಜನರನ್ನು ಸ್ಥಳೀಯ ಚುನಾವಣೆಯಿಂದ ಆಯ್ಕೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

ಯುವ ಜನರು ಕಾಳಜಿವಹಿಸಿದರೆ, ಉತ್ತಮ ರಾಜಕೀಯ ವ್ಯವಸ್ಥೆ ತರುವುದು ಕಷ್ಟವಾಗುವುದಿಲ್ಲ. ಪ್ರತಿ ಹಳ್ಳಿಯಲ್ಲೂ ಹತ್ತು ಯುವಕರ ಗುಂಪು ಉತ್ತಮವಾಗಿ ಕೆಲಸ ಮಾಡಿದರೆ, ರಾಜಕೀಯದಲ್ಲಿ ಬದಲಾವಣೆ ತರಬಹುದು ಎಂದು ಅವರು ಅಭಿಪ್ರಾಯಪಟ್ಟರು. ಬ್ರಿಟೀಷರೇ ಭಾರತವನ್ನು ಬಿಟ್ಟು ತೊಲಗಿಯೆಂದು 75 ವರ್ಷಗಳ ಹಿಂದೆ ಕ್ವಿಟ್ ಇಂಡಿಯ ಚಳಿವಳಿ ನಡೆಯಿತು. ಇಂದು ಕೆಟ್ಟ ರಾಜಕಾರಣ, ಜಾತಿ, ದ್ವೇಷ ತೊಲಗಬೇಕೆಂದು ಚಳವಳಿ ಮಾಡಬೇಕಾಗಿದೆ ಎಂದು ಅವರು ವಿಷಾದಿಸಿದರು.

ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ಎಸ್.ಆರ್.ಹಿರೇಮಠ ಮಾತನಾಡಿ, ಭ್ರಷ್ಟಾಚಾರ, ಭ್ರಷ್ಟ ರಾಜಕಾರಣ, ಇತರ ಜ್ವಲಂತ ಸಮಸ್ಯೆಗಳ ವಿರುದ್ಧ ಯುವಜನರು ದನಿ ಎತ್ತಿದರೆ ಮಾತ್ರ ದೇಶ ಉದ್ದಾರವಾಗುತ್ತದೆ ಎಂದರು. ರಾಜಕೀಯ ಲಾಭಕ್ಕಾಗಿ ಜನರಲ್ಲಿ ಜಾತಿಯ ವಿಷಬೀಜ ಬಿತ್ತಲಾಗುತ್ತಿದೆ. ಜ್ವಲಂತ ಸಮಸ್ಯೆಗಳು ಜನರನ್ನು ಕಿತ್ತು ತಿನ್ನುತ್ತಿವೆ. ಇಂತಹ ಸಮಸ್ಯೆಗಳ ವಿರುದ್ಧ ಯುವಜನರು ಹೋರಾಡಬೇಕು ಎಂದು ಅವರು ಕರೆ ನೀಡಿದರು.ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಡವರು, ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಾ, ಶ್ರೀಮಂತರ ಮತ್ತು ಬಂಡವಾಳಶಾಹಿಗಳ ಪರ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿವೈಓ ರಾಜ್ಯಾಧ್ಯಕ್ಷೆ ಉಮಾದೇವಿ, ರೈತಸಂಘ ರಾಜ್ಯ ಉಪಾಧ್ಯಕ್ಷ ಕೋಣಸಾಲೆ ನರಸರಾಜು, ಪ್ರ.ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ಕರ್ನಾಟಕ ಜನಶಕ್ತಿಯ ಡಾ.ವಾಸು, ಲಂಚಮುಕ್ತ ಕರ್ನಾಟಕ ವೇದಿಕೆಯ ಮುಖ್ಯಸ್ಥ ರವಿಕೃಷ್ಣಾ ರೆಡ್ಡಿ, ರೈತ ಸಂಘದ ಮುಖಂಡರಾದ ಯಧುಶೈಲ ಸಂಪತ್, ಮದ್ಯಪಾನ ನಿರ್ಮೂಲನ ವೇದಿಕೆಯ ನಿಂಗೇಗೌಡ, ರೈತ ಹೋರಾಟಗಾರ ನ.ಲಿ.ಕೃಷ್ಣ, ಶ್ರೀಧರ್, ರೇವಣ್ಣ, ಪೂರ್ಣಿಮ, ವಿಜಯಾ, ದಯಾನಂದ್, ಹುರುಗಲವಾಡಿ ರಾಮಯ್ಯ, ಪ್ರಗತಿಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಪಟ್ಟಣದ ಮಳವಳ್ಳಿ ರಸ್ತೆಯ ಪಕ್ಕದಲ್ಲಿರುವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಪ್ರತಿಮೆ ಆವರಣದಿಂದ ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಶಿವಪುರ ಧ್ವಜ ಸತ್ಯಾಗ್ರಹದವರೆಗೆ ಬೃಹತ್ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X