Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತನ್ನ ಸೊಸೆಗೆ ಮಗನಿಂದ ನಾಲ್ಕು ಕೋ.ರೂ.ಗಳ...

ತನ್ನ ಸೊಸೆಗೆ ಮಗನಿಂದ ನಾಲ್ಕು ಕೋ.ರೂ.ಗಳ ಜೀವನಾಂಶ ಕೊಡಿಸಲು ನೆರವಾದ ಮಾಜಿ ಸಚಿವ ದಿ.ಕಾಶಪ್ಪನವರ್ ಪತ್ನಿ!

ವಾರ್ತಾಭಾರತಿವಾರ್ತಾಭಾರತಿ9 Aug 2017 11:54 PM IST
share
ತನ್ನ ಸೊಸೆಗೆ ಮಗನಿಂದ ನಾಲ್ಕು ಕೋ.ರೂ.ಗಳ ಜೀವನಾಂಶ ಕೊಡಿಸಲು ನೆರವಾದ ಮಾಜಿ ಸಚಿವ ದಿ.ಕಾಶಪ್ಪನವರ್ ಪತ್ನಿ!

ಬೆಂಗಳೂರು,ಆ.9: ಸೊಸೆಯ ಪಾಲಿಗೆ ಅತ್ತೆ ಎಂದಿಗೂ ಕೆಟ್ಟವಳೇ ಎಂಬ ಇಂದಿನ ಆಧುನಿಕ ಯುಗದ ಹೆಚ್ಚಿನವರ ಗ್ರಹಿಕೆ ನಿಜಕ್ಕೂ ತಪ್ಪು ಎಂದು ರಾಜ್ಯದ ಮಾಜಿ ಸಚಿವ ದಿ.ಎಸ್.ಆರ್.ಕಾಶಪ್ಪನವರ್ ಅವರ ಪತ್ನಿ ಸಾಬೀತುಗೊಳಿಸಿದ್ದಾರೆ. ಪತಿಯಿಂದ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ಸೊಸೆಯ ಪರವಾಗಿ ಹೇಳಿಕೆ ನೀಡಿ ತನ್ನ ಮಗನಿಂದ ಆಕೆಗೆ ನಾಲ್ಕು ಕೋಟಿ ರೂ.ಜೀವನಾಂಶ ಕೊಡಿಸುವಲ್ಲಿ ನೆರವಾಗಿದ್ದಾರೆ.

ವಿಚ್ಛೇದನ ಪ್ರಕರಣವನ್ನು ಇತ್ಯರ್ಥಗೊಳಿಸಿರುವ ಬೆಂಗಳೂರಿನ ಐದನೇ ಹೆಚ್ಚುವರಿ ಪ್ರಧಾನ ಕುಟುಂಬ ನ್ಯಾಯಾಲಯವು ತನ್ನ ಮಾಜಿ ಪತ್ನಿಗೆ 4.85 ಕೋ.ರೂ.ಜೀವನಾಂಶ ನೀಡುವಂತೆ ಕಾಶಪ್ಪನವರ್ ಅವರ ಪುತ್ರ ದೇವಾನಂದ ಕಾಶಪ್ಪನವರ್ ಅವರಿಗೆ ಆದೇಶಿಸಿದೆ. ಕಳೆದ ನಾಲ್ಕೂವರೆ ವರ್ಷಗಳಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿರುವ ಹಿನ್ನೆಲೆಯಲ್ಲಿ ಅರ್ಜಿದಾರರಾದ ಪತ್ನಿ ವಿಚ್ಛೇದನ ಪಡೆಯಲು ಅರ್ಹರಾಗಿದ್ದಾರೆ ಎಂದು ತನ್ನ ತೀರ್ಪಿನಲ್ಲಿ ಹೇಳಿದೆ.

2011,ಮೇ 22ರಂದು ದೇವಾನಂದ ತನ್ನ ಅಕ್ಕನ ಮಗಳನ್ನು ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ನಡೆದಿದ್ದ ಸಮಾರಂಭದಲ್ಲಿ ವಿವಾಹವಾಗಿದ್ದರು.

ತನ್ನ ದಿವಂಗತ ತಂದೆ ಕಾಶಪ್ಪನವರ್ ಅವರ ಆಸೆಯನ್ನು ಈಡೇರಿಸುವ ಏಕಮಾತ್ರ ಉದ್ದೇಶದಿಂದ ದೇವಾನಂದ ತನ್ನನ್ನು ಮದುವೆಯಾಗಿದ್ದರು ಮತ್ತು ಅವರು ವಿವಾಹೇತರ ಸಂಬಂಧವನ್ನು ಹೊಂದಿದ್ದರು ಎಂದು ಪತ್ನಿ ಅರ್ಜಿಯಲ್ಲಿ ದೂರಿದ್ದರು. ಹೆಚ್ಚಿನ ಕಾಲ ತನ್ನ ಪತಿ ಆಕೆಯ ಮನೆಯಲ್ಲಿಯೇ ಇರುತ್ತಿದ್ದರು, ತಾನದನ್ನು ಪ್ರಶ್ನಿಸಿದಾಗ ತನ್ನೊಂದಿಗೆ ಹಿಂಸಾತ್ಮಕವಾಗಿ ವರ್ತಿಸಿದ್ದರು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದೂ ಅವರು ಆಪಾದಿಸಿದ್ದರು.

ಮದುವೆಗೆ ಮುನ್ನ ಪತಿ ತನ್ನೊಂದಿಗೆ ಸೌಹಾರ್ದದಿಂದ ಇದ್ದರಾದರೂ ಮದುವೆಯ ಬಳಿಕ ತನ್ನನ್ನು ಅಪರಿಚಿತಳಂತೆ ನಡೆಸಿಕೊಳ್ಳುತ್ತಿದ್ದರು ಎಂದೂ ಆಕೆ ಅರ್ಜಿಯಲ್ಲಿ ತಿಳಿಸಿದ್ದರು.

ದೇವಾನಂದ ಕುಟುಂಬದ ವಿರೋಧದ ನಡುವೆಯೂ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾರೆ ಮತ್ತು ಆಕೆಯಿಂದ ಒಂದು ಮಗುವನ್ನೂ ಪಡೆದಿದ್ದಾರೆ ಎಂದು ಪತ್ನಿ ಮತ್ತು ತಾಯಿ ನ್ಯಾಯಾಲಯಕ್ಕೆ ನಿವೇದಿಸಿದ್ದರು.

 ದೇವಾನಂದ ಎಕರೆಗಟ್ಟಲೆ ಭೂಮಿಯ ಒಡೆತನ ಹೊಂದಿದ್ದಾರೆ, ಕೋಟಿ ರೂ.ಗೂ ಅಧಿಕ ವೌಲ್ಯದ ಮಸಿಡಿಸ್ ಬೆಂಝ್ ಎಸ್‌ಯುವಿಯಲ್ಲಿ ಸಂಚರಿಸುತ್ತಾರೆ. ಕಲ್ಲು ಕ್ವಾರಿ ಉದ್ಯಮವನ್ನೂ ಹೊಂದಿದ್ದು ಆರ್ಥಿಕವಾಗಿ ಸದೃಢರಾಗಿದ್ದಾರೆ. ತನ್ನ ವೈವಾಹಿಕ ಬದ್ಧತೆಗಳನ್ನು ಈಡೇರಿಸದೇ ಪತ್ನಿಯನ್ನು ತೊರೆದಿದ್ದಾರೆ ಎಂದು ತನ್ನ ಸೊಸೆಯ ಅಜ್ಜಿಯೂ ಆಗಿರುವ ಕಾಶಪ್ಪನವರ್ ಅವರ ಪತ್ನಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು.

ದೇವಾನಂದ ನ್ಯಾಯಾಲಯದ ನೋಟಿಸಿಗೆ ಉತ್ತರಿಸಿರಲಿಲ್ಲ,ಅಲ್ಲದೆ ವಿಚಾರಣೆಗೆ ಹಾಜರಾಗಲೂ ವಿಫಲರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X