Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆ.ಆರ್.ಎಸ್.ಗೆ ಹೇಮಾವತಿ ನೀರು ಹರಿಸದಂತೆ...

ಕೆ.ಆರ್.ಎಸ್.ಗೆ ಹೇಮಾವತಿ ನೀರು ಹರಿಸದಂತೆ ಎಸ್.ಶಿವಣ್ಣ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 Aug 2017 6:49 PM IST
share

ತುಮಕೂರು,ಅ.10: ಕಾವೇರಿ ಕೊಳ್ಳಕ್ಕೆ ಹರಿಸುತ್ತಿರುವ ಹೇಮಾವತಿ ನೀರನ್ನು ತತ್‌ಕ್ಷಣದಿಂದಲೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಎಸ್. ಶಿವಣ್ಣ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಗೊರೂರು ಜಲಾಶಯದಿಂದ ಕಾವೇರಿ ಕೊಳ್ಳಕ್ಕೆ ನೀರು ಹರಿಸುತ್ತಿರುವು ದರಿಂದ ಹೇಮಾವತಿ ನೀರು ಕೂಡ ತಮಿಳುನಾಡಿನ ಪಾಲಾಗುತ್ತದೆ. 30 ದಿನ ಕಾವೇರಿ ಕೊಳ್ಳಕ್ಕೆ ನೀರು ಹರಿಸಿದರೆ ನಮ್ಮ ಪಾಲಿನ ನೀರು ಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಆತಂಕವನ್ನು ವ್ಯಕ್ತಪಡಿಸಿದರು. 

ನಮ್ಮ ಜಿಲ್ಲೆಯಲ್ಲಿ ಕೃಷಿಗಿರಲಿ, ಕುಡಿಯುವ ನೀರಿಗೂ ತತ್ವಾರ ಉಂಟಾಗಿರುವ ಇಂದಿನ ಸಂದರ್ಭದಲ್ಲಿ ಹೇಮಾವತಿ ನೀರನ್ನು ಕಾವೇರಿ ಕೊಳ್ಳಕ್ಕೆ ಹರಿಸುವುದು ಎಷ್ಟು ಸೂಕ್ತ. ಈ ಬಗ್ಗೆ ಸರಕಾರ ಮನಗಂಡು ತಕ್ಷಣದಿಂದಲೇ ಕೆಆರ್‌ಎಸ್‌ಗೆ ಹೇಮಾವತಿ ನೀರು ಹರಿಸುವುದನ್ನು ಸ್ಥಗಿತಗೊಳಿಸಲೇಬೇಕು.
1992-93 ರಲ್ಲಿ ಸುಪ್ರೀಂ ಕೋರ್ಟ್ ತುಮಕೂರು ಜಿಲ್ಲೆಗೆ 24 ಟಿ.ಎಂ.ಸಿ. ಹೇಮಾವತಿ ನೀರನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಹೀಗಿರುವಾಗ ನಮ್ಮ ಪಾಲಿನ ನೀರು ಕೇಳುವುದು ಜಿಲ್ಲೆಯ ನಾಗರಿಕರ ಹಕ್ಕು. ನಮ್ಮ ಹಕ್ಕಿಗೆ ಧಕ್ಕೆ ಮಾಡಬೇಡಿ. ನಿಗದಿತ ನೀರು ಹರಿಸುವುದರಿಂದ ಜನ-ಜಾನುವಾರುಗಳು, ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಬಹುದು. ಅಲ್ಲದೆ ಕೆರೆಗಳನ್ನು ತುಂಬಿಸಿದರೆ ಅಂತರ್ಜಲ ಮಟ್ಟವೂ ಹೆಚ್ಚಲಿದೆ ಎಂದರು.

ತಮಿಳುನಾಡಿಗೆ ನೀರು ಬಿಡದೆ ನಮ್ಮ ಜಿಲ್ಲೆಗೆ ಬಿಟ್ಟರೆ ಸುಮಾರು 50 ದಿನ ನೀರು ಹರಿಸಬಹುದು. ಈ ಪೈಕಿ ಸತತವಾಗಿ 20 ದಿನ ಹರಿಸಿದರೆ ಕುಡಿಯುವ ನೀರಿಗಾಗಿ ಮೀಸಲಾಗಿರುವ ಕೆರೆಗಳನ್ನು ತುಂಬಿಸಬಹುದು. ಉಳಿದಂತೆ ಕೃಷಿ ಅಚ್ಚುಕಟ್ಟು ಪ್ರದೇಶಗಳಿಗೂ ನೀರನ್ನು ಬಳಸಿಕೊಳ್ಳಬಹುದಾಗಿದೆ. ಹೇಮಾವತಿ ಜಲಾಶಯದಿಂದ ಬಲದಂಡೆಗೆ 1 ಟಿ.ಎಂ.ಸಿ., ಕಾವೇರಿ ಕೊಳ್ಳಕ್ಕೆ 3 ಟಿ.ಎಂ.ಸಿ.ಸೇರಿ ಒಟ್ಟು 4 ಟಿ.ಎಂ.ಸಿ. ನೀರು ಹೊರ ಹೋಗುತ್ತದೆ. ಇನ್ನು ಡೆಡ್ ಸ್ಟೋರೇಜ್ 5 ಟಿ.ಎಂ.ಸಿ. ನೀರು ಇರಬೇಕು. ಒಂದು ವೇಳೆ 30 ದಿನ ಕಾವೇರಿಕೊಳ್ಳಕ್ಕೂ ಹಾಗೂ ನಮ್ಮ ಜಿಲ್ಲೆಗೂ ನೀರು ಹರಿಸಿದರೆ 8 ಟಿ.ಎಂ.ಸಿ. ನೀರು ಜಲಾಶಯದಿಂದ ಖಾಲಿಯಾಗುತ್ತದೆ. ಹೀಗಾದರೆ ನಮಗೆ ನಿಗದಿಪಡಿಸಿದಷ್ಟು ನೀರು ಸಿಗುವುದಿಲ್ಲ. ಆದ್ದರಿಂದ ಕಾವೇರಿ ಕೊಳ್ಳಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣದಿಂದಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಜಿಲ್ಲೆಯ ಕುಣಿಗಲ್ ಮತ್ತು ಸಿರಾ ತಾಲ್ಲೂಕಿಗೂ ಹೇಮಾವತಿ ನೀರು ಹರಿಯದೆ ಜನ ಕುಡಿಯಲು ನೀರು ಸಿಗದೆ ಮತ್ತಷ್ಟು ಪರದಾಡಬೇಕಾಗದ ಪರಿಸ್ಥಿತಿ ನಿರ್ಮಾಣ ವಾಗುತ್ತದೆ ಎಂದರು.

 ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಂ.ಬಿ.ನಂದೀಶ್, ಆರ್.ಕಾಮರಾಜು, ಸಿದ್ದರಾಮಣ್ಣ, ಕೆ.ರಾಜೀವ್, ಗೋಪಾಲಕೃಷ್ಣ, ಹರೀಶ್, ಗಣೇಶ್, ಪ್ರಸನ್ನಕುಮಾರ್, ಏಕಾಂತ್, ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X