Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಲಕ್ಕೆ ಬಿದ್ದ ಆಹಾರ ಹೆಕ್ಕಿ ಪ್ಯಾಕ್...

ನೆಲಕ್ಕೆ ಬಿದ್ದ ಆಹಾರ ಹೆಕ್ಕಿ ಪ್ಯಾಕ್ ಮಾಡಿ ಮಾರಾಟ

ರೈಲ್ವೇ ಕ್ಯಾಂಟೀನ್ ಸಿಬ್ಬಂದಿಯ ಕೃತ್ಯದ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ10 Aug 2017 10:39 PM IST
share
ನೆಲಕ್ಕೆ ಬಿದ್ದ ಆಹಾರ ಹೆಕ್ಕಿ ಪ್ಯಾಕ್ ಮಾಡಿ ಮಾರಾಟ

ವಿಶಾಖಪಟ್ಟಣ, ಆ.10: ಸ್ವಚ್ಛಭಾರತ ಅಭಿಯಾನದ ಹೊರತಾಗಿಯೂ ದೇಶದಲ್ಲಿ ರೈಲ್ವೇ ನಿಲ್ದಾಣಗಳು ಇನ್ನೂ ಸ್ವಚ್ಛ ಪ್ರದೇಶವಾಗಿ ಮಾರ್ಪಾಟಾಗಿಲ್ಲ ಎಂದು ವರದಿಗಳು ಹೇಳುತ್ತಿವೆ. ಇದಕ್ಕೆ ಪುಷ್ಟಿ ನೀಡುವ ಪ್ರಕರಣವೊಂದು ವಿಶಾಖಪಟ್ಟಣ ರೈಲು ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ. ಇಲ್ಲಿಯ ರೈಲ್ವೇ ಫ್ಲಾಟ್‌ಪಾರ್ಮ್‌ನಲ್ಲಿ ರೈಲ್ವೇ ಕ್ಯಾಂಟೀನಿನ ಸಿಬ್ಬಂದಿ ನೆಲಕ್ಕೆ ಬಿದ್ದ ಆಹಾರವನ್ನು ಒಟ್ಟುಗೂಡಿಸಿ ಅವನ್ನು ಮತ್ತೆ ಪ್ಯಾಕ್ ಮಾಡಿ ಪ್ರಯಾಣಿಕರಿಗೆ ನೀಡುವ ವೀಡಿಯೊ ದೃಶ್ಯಾವಳಿ ವೈರಲ್ ಆಗಿದೆ.ಈ ಬಗ್ಗೆ ನ್ಯೂಸ್ ಮಿನಿಟ್ ವೀಡಿಯೊ ಸಹಿತ ವರದಿ ಮಾಡಿದೆ.

   ಪ್ಲಾಟ್‌ಫಾರ್ಮ್‌ನಲ್ಲಿ ನೆಲದ ಮೇಲೆ ಕುಳಿತಿರುವ ರೈಲ್ವೇ ಕ್ಯಾಂಟೀನಿನ ಮೂವರು ಸಿಬ್ಬಂದಿ ತಮ್ಮ ಸುತ್ತ ಆಹಾರದ ಪ್ಯಾಕೆಟ್ ತುಂಬಿದ್ದ ‘ಕ್ರೇಟ್’ಗಳನ್ನು ಇರಿಸಿಕೊಂಡಿದ್ದಾರೆ. ರೈಲ್ವೇಯ ಘೋಷಣೆ ಕೇಳಿಬರುತ್ತಿದ್ದಂತೆಯೇ ಈ ಮೂವರು ಅಲ್ಲಿ ನೆಲಕ್ಕೆ ಬಿದ್ದ ಆಹಾರವನ್ನು ಕೈಯಿಂದ ಬಾಚಿ ತೆಗೆದು ಅವನ್ನು ಮತ್ತೆ ಪ್ಯಾಕ್ ಮಾಡಿ ತಮ್ಮ ಬಳಿಯಿರುವ ‘ಕ್ರೇಟ್’ಗೆ ತುಂಬಿಸುತ್ತಾರೆ. ಅಲ್ಲದೆ ರೈಲ್ವೇ ಕ್ಯಾಂಟಿನ್ ಸಿಬ್ಬಂದಿ ಕೈಗವಸು ಹಾಕಿಕೊಳ್ಳದೆ ಆಹಾರ ವಸ್ತುಗಳನ್ನು ಪ್ರಯಾಣಿಕರಿಗೆ ಮಾರಾಟ ಮಾಡುತ್ತಿರುವುದನ್ನೂ ವೀಡಿಯೊ ದೃಶ್ಯಾವಳಿಯಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಈ ದೃಶ್ಯಾವಳಿಯ ಬಗ್ಗೆ ಹಲವಾರು ಮಂದಿ ಆಘಾತ ವ್ಯಕ್ತಪಡಿಸಿದ್ದಾರೆ.

  ಈ ಕುರಿತು ಪ್ರತಿಕ್ರಿಯೆ ನೀಡಿರುವ ರೈಲ್ವೇ ಅಧಿಕಾರಿಗಳು, ರೈಲ್ವೇ ಕ್ಯಾಂಟೀನ್‌ನ ಪರವಾನಿಗೆ ಪಡೆದವರಿಗೆ ಎಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ. ಆದರೆ ಇದು ಹಳೆಯ ವೀಡಿಯೊ ದೃಶ್ಯಾವಳಿ ಎಂದೂ ಹೇಳಿಕೊಂಡಿದ್ದಾರೆ. ಪ್ರಕರಣದಲ್ಲಿ ಒಳಗೊಂಡಿರುವ ಸಿಬ್ಬಂದಿಯನ್ನು ಬದಲಿಸುವಂತೆ ತಿಳಿಸಲಾಗಿದೆ ಹಾಗೂ ಪರವಾನಿಗೆದಾರರಿಗೆ 8,000 ರೂ. ದಂಡ ವಿಧಿಸಲಾಗಿದೆ ಎಂದು ವಾಲ್ಟೈರ್ ರೈಲ್ವೇ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ಭಾರತೀಯ ರೈಲ್ವೇ ಇಲಾಖೆಯು ಮನುಷ್ಯನ ಸೇವನೆಗೆ ಯೋಗ್ಯವಲ್ಲದ ಆಹಾರವನ್ನು ಮಾರಾಟ ಮಾಡುತ್ತಿದೆ ಎಂದು ನಿಯಂತ್ರಕ ಮತ್ತು ಮಹಾಲೆಕ್ಕಪಾಲಕರು (ಸಿಎಜಿ) ವರದಿ ನೀಡಿದ ವಾರದೊಳಗೆ ಈ ವೀಡಿಯೊ ದೃಶ್ಯಾವಳಿ ಪ್ರಸಾರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X