Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದಲ್ಲಿ 370ನೇ ವಿಧಿಗೆ ವಿದಾಯ...

ಕಾಶ್ಮೀರದಲ್ಲಿ 370ನೇ ವಿಧಿಗೆ ವಿದಾಯ ಹೇಳುವ ಕಾಲ ಬಂದಿದೆ: ಜಮ್ಮು-ಕಾಶ್ಮೀರ ಬಿಜೆಪಿ ವಕ್ತಾರ

ವಾರ್ತಾಭಾರತಿವಾರ್ತಾಭಾರತಿ10 Aug 2017 11:59 PM IST
share
ಕಾಶ್ಮೀರದಲ್ಲಿ 370ನೇ ವಿಧಿಗೆ ವಿದಾಯ ಹೇಳುವ ಕಾಲ ಬಂದಿದೆ: ಜಮ್ಮು-ಕಾಶ್ಮೀರ ಬಿಜೆಪಿ ವಕ್ತಾರ

ಶ್ರೀನಗರ, ಆ.10: ಸಂವಿಧಾನದ 370ನೇ ವಿಧಿಯು ‘ಪ್ರತ್ಯೇಕತಾ ಭಾವ’ ಮೂಡಲು ಕಾರಣವಾಗಿದ್ದು ಜಮ್ಮು-ಕಾಶ್ಮೀರ ರಾಜ್ಯದ ಜನರು ಇದಕ್ಕೆ ವಿದಾಯ ಹೇಳುವ ಕಾಲ ಬಂದಿದೆ ಎಂದು ಜಮ್ಮು-ಕಾಶ್ಮೀರ ಬಿಜೆಪಿ ಘಟಕದ ವಕ್ತಾರ ವೀರೇಂದರ್ ಗುಪ್ತ ಹೇಳಿದ್ದಾರೆ.

  ಇದರ ಜೊತೆಗೆ 35ಎ ವಿಧಿಯೂ ರಾಜ್ಯದ ಜನತೆಗೆ ಒಳಿತಿಗಿಂತ ಕೆಡುಕಿಗೇ ಕಾರಣವಾಗಿದೆ. ಈ ಎರಡು ವಿಧಿಗಳು ಅಭಿವೃದ್ಧಿ ಮತ್ತು ಪ್ರಗತಿಗೆ ತಡೆಯಾಗಿದ್ದು ಭಾರೀ ಹಾನಿ ಎಸಗಿದೆ ಎಂದವರು ಹೇಳಿದ್ದಾರೆ.

  ಸಂವಿಧಾನದ 370ನೇ ವಿಧಿಯು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದರೆ, 35ಎ ವಿಧಿಯು ಕಾಯಂ ಪ್ರಜೆಗಳನ್ನು ನಿರ್ಧರಿಸುವ ಹಕ್ಕನ್ನು ರಾಜ್ಯ ವಿಧಾನಸಭೆಗೆ ನೀಡಿದೆ.

 ಕಾಶ್ಮೀರದಲ್ಲಿ ಸದ್ಯದ ಪರಿಸ್ಥಿತಿ ಗಮನಿಸಿದರೆ, 370ನೇ ವಿಧಿಯು ಪ್ರತ್ಯೇಕತಾ ಮನಸ್ಥಿತಿ ಗೆ ಕಾರಣವಾಗಿದೆಯಲ್ಲದೆ ಪ್ರತ್ಯೇಕತಾವಾದದ ಹುಟ್ಟಿಗೆ ಮೂಲವಾಗಿರುವುದು ವೇದ್ಯವಾಗುತ್ತದೆ. ಈ ವಿಧಿಯು ಕಾಶ್ಮೀರ ಸಮಸ್ಯೆಯನ್ನು ಜೀವಂತವಾಗಿರಿಸಿದೆ ಮತ್ತು ಭಾರತದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರತ್ಯೇಕತಾವಾದಿಗಳಿಗೆ ಮತ್ತು ಬಾಹ್ಯಶಕ್ತಿಗಳಿಗೆ ಪ್ರೋತ್ಸಾಹ ನೀಡುತ್ತಿದೆ . ಅಲ್ಲದೆ ಇದು ಕಾಶ್ಮೀರದ ಜನರನ್ನು ರಾಷ್ಟ್ರೀಯ ಮುಖ್ಯವಾಹಿನಿಯಿಂದ ದೂರಗೊಳಿಸಿ ಅವರಲ್ಲಿ ಬದಲಾವಣೆ ಮೂಡಿಸಲು ಕಾರಣವಾಗಿದೆ ಎಂದವರು ಅಭಿಪ್ರಾಯಪಟ್ಟರು. ಕಾಶ್ಮೀರದ ಮುಖಂಡರು ತಮ್ಮ ಸ್ಥಾಪಿತ ರಾಜಕೀಯ ಹಿತಾಸಕ್ತಿಯ ಕಾರಣಕ್ಕೆ 370ನೇ ವಿಧಿಯ ಹೆಸರಲ್ಲಿ ಜನರನ್ನು ಶೋಷಿಸುತ್ತಿದ್ದಾರೆ. ಅಲ್ಲದೆ ಇದೇ ಕಾರಣದಿಂದ ಉದ್ಯಮಿಗಳು ರಾಜ್ಯದಲ್ಲಿ ಉದ್ಯಮ ಸ್ಥಾಪಿಸಲು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಕಾಶ್ಮೀರ ಕಣಿವೆಯ ಜನತೆ ಹಾಗೂ ಜಮ್ಮು ಮತ್ತು ಲಡಾಕ್ ಜನತೆಯ ಮಧ್ಯೆ ಅಪನಂಬಿಕೆಯ ಭಾವನೆ ಬೆಳೆಯಲೂ ಇದು ಕಾರಣವಾಗಿದೆ. ಅಲ್ಲದೆ 35ಎ ವಿಧಿಯು ರಾಜ್ಯದ ಪ್ರಜೆಗಳು ಎನಿಸಿಕೊಳ್ಳುವ ಹಕ್ಕಿನ ವಿಷಯದಲ್ಲಿ ಪುರುಷರು ಮತ್ತು ಮಹಿಳೆಯರ ಮಧ್ಯೆ ಭೇದಭಾವ ತೋರಿ ಅವರನ್ನು ಬೇರ್ಪಡಿಸಿದೆ. ಆದ್ದರಿಂದ ಈ ಎರಡೂ ವಿಧಿಗಳಿಗೆ ವಿದಾಯ ಹೇಳಬೇಕಿದೆ ಎಂದು ಗುಪ್ತ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X