Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕಾರಿಪುರ: ಸಸಿ ನೆಡುವ ಕಾರ್ಯಕ್ರಮ

ಶಿಕಾರಿಪುರ: ಸಸಿ ನೆಡುವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 Aug 2017 7:33 PM IST
share
ಶಿಕಾರಿಪುರ: ಸಸಿ ನೆಡುವ ಕಾರ್ಯಕ್ರಮ

ಶಿಕಾರಿಪುರ, ಆ.12: ಮರ ಗಿಡ ನಾಶದಿಂದ ಭೂಮಿ ತಾಯಿ ಬೆಂದು ಹೋಗಿದ್ದಾಳೆ. ಮಳೆಯಿಲ್ಲದೆ ಜನಜಾನುವಾರು ಕಂಗಾಲಾಗಿದ್ದು ಭೂಮಿ ತಂಪಾಗಲು ಮಳೆ ಅಗತ್ಯ. ಮಳೆಗೆ ಸಸಿ ನೆಟ್ಟು ಮರಗಿಡ ಬೆಳಸಿ ಎಂದು ಖ್ಯಾತ ಪರಿಸರ ಪ್ರೇಮಿ ನಾಡೋಜ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಕರೆ ನೀಡಿದರು.

ಶನಿವಾರ ಇಲ್ಲಿನ ಮುಕ್ತಿಧಾಮ ಅಭಿವೃದ್ದಿ ಸಮಿತಿ, ಛಾಯಾಗ್ರಾಹಕರ ಸಂಘ, ಕಾರ್ಯನಿರತ ಪರ್ತಕರ್ತರ ಸಂಘ, ಋಗ್ವೇದ ಸಂಸ್ಥೆ, ಬಾಪೂಜಿ ವಿದ್ಯಾ ಸಂಸ್ಥೆಯ ವತಿಯಿಂದ ಮುಕ್ತಿಧಾಮದಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಲ್ಲದ ಕೊರಗು ಕಾಡುವ ಜತೆಗೆ ಅವಿದ್ಯಾವಂತಳಾಗಿದ್ದರಿಂದ ಸಮಾಜದಲ್ಲಿ ಗೌರವ ದೊರೆಯದು ಎಂಬ ಚಿಂತೆಯಿಂದ ನಿತ್ಯ ಬೆಳಿಗ್ಗೆ ಪತಿ ರಸ್ತೆ ಪಕ್ಕದಲ್ಲಿ ಗುಂಡಿ ತೆಗೆದು ಗಾಡಿಯಲ್ಲಿ ಹೋಗುತ್ತಿದ್ದು, ಹಿಂದಿನಿಂದ ಕಡ್ಡಿ ರೂಪದ ಸಸಿ ನೆಡುವ ಕಾಯಕವನ್ನು ರೂಡಿಸಿಕೊಂಡಿದ್ದಾಗಿ ತಿಳಿಸಿದ ಅವರು, ಬೆಳಿಗ್ಗೆ ಹೊಟ್ಟೆಪಾಡಿನ ಕಾಯಕ ನಂತರದಲ್ಲಿ ಸಸಿಗೆ ನೀರು ಹಾಕಿ ಕಾಪಾಡುವ ಕರ್ತವ್ಯವನ್ನು ನಿರ್ವಹಿಸಿ ಇದೀಗ ಮರವಾಗಿರುವುದು ಕಂಡು ಸಂತಸಪಡುತ್ತಿರುವುದಾಗಿ ತಿಳಿಸಿದರು.

ಸಕಾಲಕ್ಕೆ ಮಳೆಯಾದಲ್ಲಿ ಮನುಷ್ಯ ಪ್ರಾಣಿಗಳು ಸಂತೃಪ್ತವಾಗಿರಲು ಸಾದ್ಯ ಎಂದ ಅವರು, ಹಿಂದೆ ಅರಣ್ಯ ಸಂಪತ್ತಿನಿಂದ ಮಳೆ ಹೆಚ್ಚಾಗಿ ಬಯಲಲ್ಲಿ ನೀರು ಹರಿಯುತ್ತಿದ್ದು ಗೋಪ್ರಾಣಿಗಳು ಅನಂದವಾಗಿ ಬದುಕುತ್ತಿದ್ದವು. ಇತ್ತೀಚಿನ ದಿನದಲ್ಲಿ ಮರಗಿಡ ನಾಶದಿಂದ ಭೂಮಿ ತಾಯಿ ಬೆಂದುಹೋಗಿ ಕುಡಿಯಲು ನೀರಿಲ್ಲದೆ ಸರ್ಕಾರ ಗಾಡಿಯಲ್ಲಿ ನೀರು ನೀಡುತ್ತಿದ್ದು, ಇಂತಹ ಸ್ಥಿತಿಯನ್ನು ಈ ಕಣ್ಣಿನಿಂದ ನೋಡಬೇಕಾಗಿದೆ ಎಂದು ಅತಂಕ ವ್ಯಕ್ತಪಡಿಸಿದರು.

ಆರಂಭದಲ್ಲಿ ಹೊನ್ನಾಳಿ ರಸ್ತೆಯ ಮುಕ್ತಿಧಾಮದಲ್ಲಿ ಸಸಿ ನೆಡಲಾಯಿತು. ವಿವಿಧ ಸ್ಥಳೀಯ ಸಂಘಟನೆಗಳಿಂದ ತಿಮ್ಮಕ್ಕರನ್ನು ಅಭಿನಂದಿಸಲಾಯಿತು. 60 ಸಾವಿರ ಹಣ ಸಂಗ್ರಹಿಸಿ ಹಸ್ತಾಂತರಿಸಲಾಯಿತು. ಪುರಸಬಾಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಫೈರೋಜಾಭಾನು, ಸದಸ್ಯ ಮೋಹನ, ನಾಗರಾಜಗೌಡ, ರೂಪಕಲಾ ಹೆಗ್ಡೆ, ರವೀಂದ್ರ, ಮುಖ್ಯಾಧಿಕಾರಿ ಬಾಲಾಜಿರಾವ್, ತಾ. ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಕಿರಣಕುಮಾರ್, ಪರ್ತಕರ್ತರ ಸಂಘದ ಅಧ್ಯಕ್ಷ ಅರುಣಕುಮಾರ್, ಚಿನ್ನಪ್ಪ, ಪಾಪಯ್ಯ, ಹನೀಫ್‌ಸಾಬ್, ಚೇತನ್, ಎಂ.ಜಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X