Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ವಿರುದ್ಧ ಅಹಿಂದ ಅಸ್ತ್ರ...

ಕಾಂಗ್ರೆಸ್ ವಿರುದ್ಧ ಅಹಿಂದ ಅಸ್ತ್ರ ಬಳಸಲು ಅಮಿತ್ ಶಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 Aug 2017 9:43 PM IST
share
ಕಾಂಗ್ರೆಸ್ ವಿರುದ್ಧ ಅಹಿಂದ ಅಸ್ತ್ರ ಬಳಸಲು ಅಮಿತ್ ಶಾ ಸೂಚನೆ

ಬೆಂಗಳೂರು, ಆ.12: ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಸರಕಾರದ ವಿರುದ್ಧ ‘ಅಹಿಂದ’ ಅಸ್ತ್ರವನ್ನೆ ಪ್ರಬಲವಾಗಿ ಬಳಸುವಂತೆ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಶನಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಲಿಂಗಾಯತ-ವೀರಶೈವ, ಬ್ರಾಹ್ಮಣರ ವಿಚಾರವನ್ನು ಚರ್ಚೆ ಮಾಡಬೇಡಿ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಬಗ್ಗೆ ಮಾತನಾಡಿ. ಅವರೊಂದಿಗೆ ಬೆರೆತು ಅವರ ಬೆಂಬಲದೊಂದಿಗೆ ಮುಂದುವರೆಯಿರಿ ಎಂದು ಸೂಚನೆ ನೀಡಿದ್ದಾರೆ.

ಉತ್ತರಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿಯೂ ಚುನಾವಣೆ ಎದುರಿಸಬೇಕು. ಕರ್ನಾಟಕದಲ್ಲಿ ಚುನಾವಣೆ ಸಂದರ್ಭದಲ್ಲಿ ನಾನೇ ಬಂದು ತಂತ್ರಗಾರಿಕೆಯನ್ನು ರೂಪಿಸುತ್ತೇನೆ. ಹಿಂದೂಗಳ ಮತಗಳ ಕ್ರೋಡೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ.

ಶಾಸಕರು ಹಾಗೂ ಸಂಸದರು ನಾವು ನೀಡುವಂತಹ ಎಲ್ಲ ಸೂಚನೆಗಳನ್ನು ಬರೆದುಕೊಂಡು ಚಾಚೂ ತಪ್ಪದೇ ಪಾಲಿಸಬೇಕು ಎಂದು ಕಟ್ಟಪ್ಪಣೆ ಮಾಡಿದ ಅವರು, ಯಾರ ಬಳಿ ಪೆನ್ನು, ನೋಟ್‌ಪ್ಯಾಡ್ ಇಲ್ಲವೋ ಅವರು ತೆಗೆದುಕೊಂಡು ಬಂದು, ನಾವು ಹೇಳುವುದನ್ನು ಗಮನವಿಟ್ಟು ಕೇಳಿಸಿಕೊಂಡು ಬರೆದಿಟ್ಟುಕೊಳ್ಳಿ ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಆದ್ಯತೆ ನೀಡಬೇಕು. ಬೂತ್‌ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಬೇಕು. ಬೂತ್‌ಮಟ್ಟದಲ್ಲಿ ಪಕ್ಷದ ಆಗುಹೋಗುಗಳನ್ನು ಶಾಸಕರು, ಸಂಸದರು ನೋಡಿಕೊಳ್ಳಬೇಕು ಎಂದು ಅವರು ಆದೇಶಿಸಿದ್ದಾರೆ. ಬೂತ್‌ಮಟ್ಟದ ತಲಾ 50 ಕಾರ್ಯಕರ್ತರ ಹೊಣೆಯನ್ನು ಶಾಸಕರು, ಸಂಸದರು ಹೊರಬೇಕು. ತಮ್ಮ ಕ್ಷೇತ್ರದೊಂದಿಗೆ ಇತರ ಕ್ಷೇತ್ರಗಳ ಜವಾಬ್ದಾರಿಯನ್ನು ಹೊರಬೇಕು. ಹೊಸದಾಗಿ ಪಕ್ಷಕ್ಕೆ ಸದಸ್ಯರಾಗಿರುವವರ ಮನೆಗಳಿಗೆ ಭೇಟಿ ನೀಡಿ, ಪಕ್ಷ ಹಾಗೂ ಕೇಂದ್ರ ಸರಕಾರದ ಸಾಧನೆಗಳನ್ನು ಸ್ಥಳೀಯವಾಗಿ ಪ್ರಚಾರ ಮಾಡಲು ಪ್ರೇರೇಪಿಸಬೇಕು ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆ.

ಮೂರು ದಿನಗಳ ಕಾಲ ಬೆಂಗಳೂರಿನಲ್ಲೆ ಇರುತ್ತೇನೆ. ಎಲ್ಲ ಮುಖಂಡರೊಂದಿಗೂ ಚರ್ಚೆ ನಡೆಸುತ್ತೇನೆ. ಬಿಜೆಪಿ ಪಾಲಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಆಗಿರುವ ಕರ್ನಾಟಕದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನ ಮುಂದುವರೆಸಿ ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆ.

ಟಿಕೆಟ್ ಹೈಮಾಂಡ್ ತೀರ್ಮಾನಿಸಲಿದೆ: ಟಿಕೆಟ್ ಬಗ್ಗೆ ಚಿಂತಿಸದೆ ಪಕ್ಷದ ಪರವಾಗಿ ಕೆಲಸ ಮಾಡಬೇಕು. ಯಾವ ಕ್ಷೇತ್ರದಿಂದ ಯಾರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಯಡಿಯೂರಪ್ಪ ನೇತೃತ್ವದಲ್ಲೆ ಚುನಾವಣೆ ಎದುರಿಸುತ್ತೇವೆ. ಎಲ್ಲರೂ ಒಗ್ಗಟ್ಟಾಗಿ, ಭಿನ್ನಮತೀಯ ಚಟುವಟಿಕೆಗಳಿಗೆ ಆಸ್ಪದವಿಲ್ಲದಂತೆ ಮುಂದುವರೆಯಬೇಕು.

-ಅಮಿತ್ ಶಾ, ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X