Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರವಂತೆ ಬಳಿ ಅಲೆಗಳಿಂದ ವಿದ್ಯುತ್‌ಗೆ...

ಮರವಂತೆ ಬಳಿ ಅಲೆಗಳಿಂದ ವಿದ್ಯುತ್‌ಗೆ ಡಿಪಿಆರ್ ಸಿದ್ಧ

10 ಮೆ.ವ್ಯಾ ವಿದ್ಯುತ್ ಉತ್ಪಾದನೆಗೆ ಸಿದ್ಧತೆ - ವಿಜಯಕುಮಾರ್ ಹೆಗ್ಡೆ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ12 Aug 2017 10:02 PM IST
share
ಮರವಂತೆ ಬಳಿ ಅಲೆಗಳಿಂದ ವಿದ್ಯುತ್‌ಗೆ ಡಿಪಿಆರ್ ಸಿದ್ಧ

ಉಡುಪಿ, ಆ.12: ಸಮುದ್ರದ ಅಲೆಗಳಿಂದ ವಿದ್ಯುತ್ ತಯಾರಿಸುವ ಬಗ್ಗೆ ಪ್ರಾಥಮಿಕ ಪ್ರಯೋಗಗಳಲ್ಲಿ ಯಶಸ್ಸು ಸಾಧಿಸಿರುವ ಸ್ಥಳೀಯ ವಿಜ್ಞಾನಿ ಪೆರಂಪಳ್ಳಿಯ ಸುಸಿ ಗ್ಲೋಬಲ್ ಸಂಶೋಧನಾ ಸಂಸ್ಥೆಯ ವಿಜಯಕುಮಾರ್ ಹೆಗ್ಡೆ ಅವರು ಜಿಲ್ಲೆಯ ಮರವಂತೆಯಲ್ಲಿ 10 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ‘ಸಮಗ್ರ ಯೋಜನಾ ವರದಿ’(ಡಿಪಿಆರ್) ಸಿದ್ಧಪಡಿಸಿರುವುದಾಗಿ ಹೇಳಿದ್ದಾರೆ.

ಯೋಜನಾ ವರದಿಯನ್ನು ತಾವು ಈಗಾಗಲೇ ರಾಜ್ಯ ಸರಕಾರಕ್ಕೆ ಸಲ್ಲಿಸಿರುವು ದಾಗಿ ಹೆಗ್ಡೆ ತಿಳಿಸಿದರು. ಬೆಂಗಳೂರಿನ ಎನರ್ಜಿ ಆ್ಯಂಡ್ ಡೆವಲಪ್‌ಮೆಂಟ್ ಸೆಂಟರ್‌ನ ಎಂಜಿನಿಯರ್ ಧೀರೇಂದ್ರ ಆಚಾರ್ಯ ಹಾಗೂ ಸುಸಿ ಗ್ಲೋಬಲ್ ರಿಸರ್ಚ್‌ನ ವಿಜಯಕುಮಾರ್ ಹೆಗ್ಡೆ ಅವರು ಸಂಸ್ಥೆಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಮರವಂತೆಯಲ್ಲಿ ಸಮುದ್ರದ ಅಲೆಗಳ ಶಕ್ತಿ ಉತ್ತಮವಾಗಿದೆ. ಇದಕ್ಕಾಗಿಯೇ ಆ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಅಲೆಯ ಉಬ್ಬರವಿಳಿತದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ಕಳೆದ ವರ್ಷ ಕೆಮ್ಮಣ್ಣು ಸಮುದ್ರ ತೀರದಲ್ಲಿ ಪ್ರಾಯೋಗಿಕವಾಗಿ ನಡೆಸಿ ಯಶಸ್ವಿಯಾಗಿದ್ದೇನೆ. ಮರವಂತೆಯಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಹಂತದಲ್ಲಿ 10 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಿ ಮೆಸ್ಕಾಂ ಗ್ರಿಡ್‌ಗಳಿಗೆ ವಿದ್ಯುತ್ ಅನ್ನು ಸರಬರಾಜು ಮಾಡಲು ಸರಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಹೆಗ್ಡೆ ವಿವರಿಸಿದರು.

 ಪೈಲಟ್ ಯೋಜನೆಯಾಗಿ ಇದನ್ನು ಸರಕಾರ ಸ್ವೀಕರಿಸುವ ನಿರೀಕ್ಷೆ ಇದ್ದು, ಸರಕಾರದ ಸಹಕಾರ ಉತ್ತಮ ರೀತಿಯಲ್ಲಿ ದೊರೆತಲ್ಲಿ ಮುಂದಕ್ಕೆ 500 ಮೆ.ವ್ಯಾ. ವಿದ್ಯುತ್ ಉತ್ಪಾದನೆಯ ಗುರಿಯೂ ಇದೆ. ತನ್ನ ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಕಡಲ್ಕೊರೆತವೂ ನಿಯಂತ್ರಣಕ್ಕೆ ಬರಲಿದೆ ಎಂದವರು ಹೇಳಿದರು.

ಹೆಗ್ಡೆಯವರ ಅಲೆಗಳಿಂದ ವಿದ್ಯುತ್‌ನ ಯೋಜನೆಯನ್ನು ವೀಕ್ಷಿಸಿದ ಪೇಜಾವರ ಮಠದ ಕಿರಿಯ ಯತಿಗಳಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಮಿತವ್ಯಯ ಇಂಧನ, ಪರಿಸರಸ್ನೇಹಿ ಯೋಜನೆ ಈಗಿನ ವಾತಾವರಣಕ್ಕೆ ಅತ್ಯಗತ್ಯವಾಗಿದೆ. ಭೂಮಿಯಲ್ಲಿ ಅಧಿಕಾಂಶ ಭಾಗ ಸಮುದ್ರವಿರುವುದರಿಂದ ಅಲೆಗಳ ಶಕ್ತಿಯಿಂದ ಇಂಧನ ಉತ್ಪಾದಿಸುವ ಯೋಜನೆಗೆ ಉತ್ತಮ ಭವಿಷ್ಯವಿದೆ ಎಂದರು.

ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ.ಪಿ. ಭಟ್, ಕೆನರಾ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಟಿ. ನಾರಾಯಣ ಶಾನುಭಾಗ್ ಉಪಸ್ಥಿತರಿದ್ದರು.

6ಕೋಟಿ ರೂ.ಗೆ ಒಂದು ಮೆ.ವ್ಯಾ ವಿದ್ಯುತ್!

ಸಮುದ್ರದ ಅಲೆಗಳ ಶಕ್ತಿಯಿಂದ ಉತ್ಪಾದನೆಗೊಳ್ಳುವ ಒಂದು ಮೆ.ವ್ಯಾ. ವಿದ್ಯುತ್ ಘಟಕಕ್ಕೆ 6 ಕೋ.ರೂ. ವೆಚ್ಚವಾಗುತ್ತದೆ. ಇದರಿಂದ ಪರಿಸರಕ್ಕೆ ಯಾವುದೇ ರೀತಿಯ ಹಾನಿಯಿಲ್ಲ. ಆದರೆ ಕಲ್ಲಿದ್ದಲು ಮತ್ತಿತರ ಮೂಲಗಳಿಂದ ಉತ್ಪಾದಿಸುವ ಒಂದು ಮೆ.ವ್ಯಾ. ವಿದ್ಯುತ್‌ಗೆ 25ರಿಂದ 30 ಕೋಟಿ ರೂ.ಗಳ ಅಗತ್ಯವಿದೆ. ಸರಕಾರ ಕೈಜೋಡಿಸಿದರೆ ವರ್ಷಕ್ಕೆ ಕೋಟ್ಯಾಂತರ ರೂ.ಗಳ ಉಳಿಕೆ ಮಾಡಲು ಸಾಧ್ಯವಿದೆ. ಈ ಕ್ಷೇತ್ರಗಳಲ್ಲಿ ತಾನು ಕಳೆದ 37 ವರ್ಷಗಳಿಂದ ನಿರಂತರವಾಗಿ ಸಂಶೋಧನೆ ಮಾಡುತಿದ್ದು, ಯಶಸ್ಸು ಕಾಣುವ ಪೂರ್ಣ ಭರವಸೆ ಇದೆ ಎಂದು ವಿಜಯಕುಮಾರ್ ಹೆಗ್ಡೆ ಹೇಳಿದರು. ಗಂಟೆಗೆ 120 ಕಿ.ಮೀ. ಓಡುವ ಡೀಸೆಲ್ ಬೈಕ್ ಕೂಡ ಸಂಶೋಧನೆಯಲ್ಲಿದೆ ಎಂದರು.

ಅಲೆಗಳಿಂದ ವಿದ್ಯುತ್ ಸಾಧ್ಯ

ಕರಾವಳಿ ಪ್ರದೇಶದಲ್ಲಿ ಸೌರಶಕ್ತಿ, ಪವನ ಶಕ್ತಿಯಿಂದ ವಿದ್ಯುತ್ ಉತ್ಪಾದನೆಗೆ ಪೂರಕ ವಾತಾವರಣವಿಲ್ಲ. ಆದರೆ ಸಮುದ್ರದ ಅಲೆಯಿಂದ ವಿದ್ಯುತ್ ಉತ್ಪಾದನೆಗೆ ಒತ್ತು ಕೊಟ್ಟರೆ ಕರಾವಳಿಯ ಯಾವುದೇ ಮೂಲೆಗೆ ವಿದ್ಯುತ್ ಕೊಡಲು ಸಾಧ್ಯವಾಗುತ್ತದೆ. ಇಲ್ಲೇ ಉತ್ಪಾದನೆ ಮಾಡಿ ಗ್ರಿಡ್‌ಗಳಿಗೆ ನೇರವಾಗಿ ಕೊಡುವುದರಿಂದ ಸರಬರಾಜು ವೆಚ್ಚ ಉಳಿಯುತ್ತದೆ ಎಂದು ಬೆಂಗಳೂರಿನ ಎನರ್ಜಿ ಮತ್ತು ಪವರ್ ಡೆವಲೆಪ್‌ಮೆಂಟ್ ಸೆಂಟರ್‌ನ ಇಂಜಿನಿಯರ್ ಧೀರೇಂದ್ರ ಆಚಾರ್ಯ ಅಭಿಪ್ರಾಯ ಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X