Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ.20ಕ್ಕೆ ಉಡುಪಿಯಲ್ಲಿ ಪಿ.ಸಾಯಿನಾಥ್...

ಆ.20ಕ್ಕೆ ಉಡುಪಿಯಲ್ಲಿ ಪಿ.ಸಾಯಿನಾಥ್ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ12 Aug 2017 10:18 PM IST
share

ಉಡುಪಿ, ಆ.12: ಹಿರಿಯ ಪತ್ರಕರ್ತ, ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಪಾಲಗುಮ್ಮಿ ಸಾಯಿನಾಥ್ ಅವರು ಆ.20ರ ರವಿವಾರ ಉಡುಪಿಯಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಆಶ್ರಯದಲ್ಲಿ ತಲ್ಲೂರು ನುಡಿಮಾಲೆ-2017ರಲ್ಲಿ ದತ್ತಿನಿಧಿ ಉಪನ್ಯಾಸ ನೀಡಲಿದ್ದಾರೆ ಎಂದು ಟ್ರಸ್ಟ್‌ನ ಟ್ರಸ್ಟಿಗಳಲ್ಲೊಬ್ಬರಾದ, ಪತ್ರಕರ್ತ ರಾಜಾರಾಮ ತಲ್ಲೂರು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಲ್ಲೂರು ನುಡಿಮಾಲೆಯ ಮೊದಲ ದತ್ತಿನಿಧಿ ಉಪನ್ಯಾಸ ಇದಾಗಿದ್ದು, ‘ಕರಾವಳಿ ಕಟ್ಟು’ ಸರಣಿಯಲ್ಲಿ ಈ ಉಪನ್ಯಾಸ ಮಾಲಿಕೆಯಲ್ಲಿ ಸಾಯಿನಾಥ್ ಅವರು ‘ಡಿಜಿಟಲ್ ಯುಗದಲ್ಲಿ ಗ್ರಾಮೀಣ ಭಾರತ ಕಥನ’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದರು.

ಗ್ರಾಮೀಣ ಭಾರತದಲ್ಲಿ ಕೃಷಿಕರ ಸಂಕಷ್ಟಗಳನ್ನು ಮುಖ್ಯವಾಹಿನಿ ಮಾಧ್ಯಮಗಳು ಕಡೆಗಣಿಸುತ್ತಾ ಬಂದಿರುವ ಹಿನ್ನೆಲೆಯಲ್ಲಿ ಹೊಸ ತಲೆಮಾರಿನ ಯುವಜನತೆಗೆ ತಮ್ಮ ದೇಶದ ಸಂಕಷ್ಟಗಳ ಅರಿವು ಮೂಡುತ್ತಿಲ್ಲ. ಈ ನಿಟ್ಟಿನಲ್ಲಿ ಡಿಜಿಟಲ್ ಜಗತ್ತಿನಲ್ಲಿ ಗ್ರಾಮೀಣ ಭಾರತವನ್ನು ಬಿಂಬಿಸುವ ಸಾಧ್ಯತೆಗಳ ಕುರಿತು ಇಲ್ಲಿ ಚಿಂತನೆ ನಡೆಯಲಿದೆ ಎಂದರು.

ಸಾಯಿನಾಥ್ ಅವರ ಉಪನ್ಯಾಸ ಕಾರ್ಯಕ್ರಮ ಆ.20ರಂದು ಬೆಳಗ್ಗೆ 10:00ರಿಂದ ಅಪರಾಹ್ನ 2:00ಗಂಟೆಯವರೆಗೆ ಅಜ್ಜರಕಾಡಿನಲ್ಲಿರುವ ಪುರಭವನದಲ್ಲಿ ನಡೆಯಲಿದೆ. ಉಪನ್ಯಾಸದ ಬಳಿಕ ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್ ಅವರು ಸಾಯಿನಾಥ್ ಜೊತೆ ಸಂವಾದನ ನಡೆಸಿಕೊಡು ವರು. ಹಿರಿಯ ಪತ್ರಕರ್ತರಾದ ನಾಗೇಶ್ ಹೆಗಡೆ, ಅರ್ಥಶಾಸ್ತ್ರಜ್ಞ ಹಾಗೂ ಕಥೆಗಾರ ಪ್ರೊ.ಎಂ.ಎಸ್.ಶ್ರೀರಾಮ್ ಹಾಗೂ ಬೆಂಗಳೂರಿನ ಅಜೀಮ್ ಪ್ರೇಮ್‌ಜಿ ವಿವಿಯ ಉಪನ್ಯಾಸಕ ಡಾ.ನಾರಾಯಣ ಎ. ಸಂವಾದ ನಡೆಸಲಿದ್ದಾರೆ ಎಂದು ಸಂಘಟಕರಲ್ಲೊಬ್ಬರಾದ ಉಡುಪಿ ಮನೋತಜ್ಞ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ.

ಭಾರತದಲ್ಲಿ ಅಭ್ಯುದಯ ಪತ್ರಿಕೋದ್ಯಮದ ಹಾದಿ ತುಳಿದಿರುವ ವಿರಳ ಪತ್ರಕರ್ತರಲ್ಲಿ ಸಾಯಿನಾಥ್ ಅಗ್ರಗಣ್ಯರು. ದೇಸದ ಗ್ರಾಮೀಣ ರೈತರ ಸಂಕಟಗಳು, ಸರಣಿ ಆತ್ಮಹತ್ಯೆಗಳ ಹಿನ್ನೆಲೆಗಳನ್ನು ಅಂಕಿ-ಅಂಕಗಳೊಂದಿಗೆ ದೇಶದ ಜನತೆಯ ಮುಂದೆ ಬಿಚ್ಚಿಟ್ಟು, ಇದೊಂದು ರಾಷ್ಟ್ರೀಯ ಸಮಸ್ಯೆಯಾಗಿ ಬಿಂಬಿಸಿದವರು ಸಾಯಿನಾಥ್ ಅವರು ಎಂದವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಡಾ.ರಾಬರ್ಟ್ ಜೋಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X