Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಎಚ್ಚರಿಕೆ....ಇವು ಅಲ್ಸರ್‌ನ...

ಎಚ್ಚರಿಕೆ....ಇವು ಅಲ್ಸರ್‌ನ ಲಕ್ಷಣಗಳಾಗಿರಬಹುದು!

ವಾರ್ತಾಭಾರತಿವಾರ್ತಾಭಾರತಿ13 Aug 2017 3:22 PM IST
share
ಎಚ್ಚರಿಕೆ....ಇವು ಅಲ್ಸರ್‌ನ ಲಕ್ಷಣಗಳಾಗಿರಬಹುದು!

ನಿಮಗೆ ಆಗಾಗ್ಗೆ ತೀವ್ರ ಹೊಟ್ಟೆನೋವು ಕಾಡುತ್ತಿದೆಯೇ? ನೋವು ನಿವಾರಕ ಮಾತ್ರೆಗಳಿಗೆ ಶರಣು ಹೋಗಿ ಈ ಹೊಟ್ಟೆನೋವನ್ನು ಅಲಕ್ಷಿಸಬೇಡಿ. ಏಕೆಂದರೆ ಕೆಲವೊಮ್ಮೆ ಇದು ಅಲ್ಸರ್ ಅಥವಾ ಹೊಟ್ಟೆಹುಣ್ಣಿನ ಸಂಭಾವ್ಯ ಸಂಕೇತವಾಗಿರಬಹುದು.

ಅಲ್ಸರ್ ತೀವ್ರ ನೋವನ್ನುಂಟು ಮಾಡುತ್ತದೆ, ಹೀಗಾಗಿ ಅದನ್ನು ನಿರ್ಲಕ್ಷಿಸುವುದು ಸುಲಭವಲ್ಲ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಅದು ಹೊಟ್ಟೆಯನ್ನು ವ್ಯಾಪಿಸಬಹುದು ಮತ್ತು ರಂಧ್ರಗಳನ್ನುಂಟು ಮಾಡಬಹುದು. ರಕ್ತನಾಳಗಳಲ್ಲಿಯೂ ರಂಧ್ರಗಳುಂಟಾಗಿ ವಿಪರೀತ ರಕ್ತಸ್ರಾವಕ್ಕೆ ಕಾರಣವಾಗಬಹುದು.

ಅಲ್ಸರ್ ಆರೋಗ್ಯವನ್ನು ಹಾಳು ಮಾಡುತ್ತದೆ ಮತ್ತು ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹೀಗಾಗಿ ಅಲ್ಸರ್‌ನ ಲಕ್ಷಣಗಳನ್ನು ತಿಳಿದುಕೊಳ್ಳು ವುದು ಮುಖ್ಯವಾಗುತ್ತದೆ.

ಪಚನಕ್ಕೆ ನೆರವಾಗುವ ರಸಗಳಿಂದ ಹೊಟ್ಟೆಯನ್ನು ರಕ್ಷಿಸುವ ಲೋಳೆಯ ದಪ್ಪ ಪದರದ ಗಾತ್ರ ಕುಗ್ಗಿದರೆ ಅದು ಅಲ್ಸರ್‌ಗೆ ಕಾರಣವಾಗುತ್ತದೆ. ಪಚನ ಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಆಮ್ಲಗಳು ಹೊಟ್ಟೆಯ ಭಿತ್ತಿಯ ಅಂಗಾಂಶಗಳನ್ನು ತಿಂದು ಹಾಕುತ್ತವೆ ಮತ್ತು ಇದರ ಪರಿಣಾಮವಾಗಿ ಅಲ್ಸರ್ ಉಟಾಗುತ್ತದೆ. ಅಲ್ಸರ್‌ನ ಪ್ರಮುಖ ಲಕ್ಷಣಗಳು ಇಲ್ಲಿವೆ.....

ಹೊಟ್ಟೆನೋವು:

ಇದು ಅಲ್ಸರ್‌ನ ಅತ್ಯಂತ ಸಾಮಾನ್ಯ ಲಕ್ಷಣವಾಗಿದೆ. ವಾಸ್ತವದಲ್ಲಿ ಅಲ್ಸರ್ ಹೊಟ್ಟೆಯೊಳಗಿನ ಹುಣ್ಣು ಆಗಿದ್ದು, ಕರುಳಿನಲ್ಲಿ ಆಮ್ಲ ಸೇರಿಕೊಂಡರೆ ಅದು ನೋವಿಗೆ ಕಾರಣವಾಗುತ್ತದೆ.

ಎದೆಯುರಿ:

ಅಲ್ಸರ್‌ನ ನೋವಿನ ಜೊತೆಗೆ ಎದೆಯುರಿಯೂ ಕಾಣಿಸಿಕೊಳ್ಳುತ್ತದೆ ಮತ್ತು ವಾಂತಿಯೂ ಆಗುತ್ತದೆ.

ಪಿತ್ತೋದ್ರೇಕ/ವಾಂತಿ:

ಪಿತ್ತೋದ್ರೇಕ ಮತ್ತು ವಾಂತಿ ಅಲ್ಸರ್‌ನ ಲಕ್ಷಣಗಳಾಗಿವೆ. ಕೆಲವು ಪ್ರಕರಣಗಳಲ್ಲಿ ಅಲ್ಸರ್ ಹೊಟ್ಟೆಯಲ್ಲಿ ತಡೆಯನ್ನು ನಿರ್ಮಿಸುತ್ತದೆ ಮತ್ತು ಆಹಾರವು ಸಣ್ಣ ಕರುಳಿನ ಮೂಲಕ ಸಾಗಲು ಸಾಧ್ಯವಾಗುವುದಿಲ್ಲ. ಇದು ವಾಕರಿಕೆಯನ್ನು ಉಂಟು ಮಾಡುತ್ತದೆ.

ವಾಂತಿ ಮತ್ತು ಮಲದಲ್ಲಿ ರಕ್ತ: ಅಲ್ಸರ್ ರಕ್ತಸ್ರಾವವನ್ನುಂಟು ಮಾಡುತ್ತದೆ ಮತ್ತು ರಕ್ತವಾಂತಿಯಾಗುತ್ತದೆ. ಮಲವೂ ಕಪ್ಪುಬಣ್ಣದ್ದಾಗಿ ರಕ್ತ ಸೇರಿಕೊಂಡಿದ್ದನ್ನು ಸೂಚಿಸುತ್ತದೆ. ಇದು ಹೊಟ್ಟೆಹುಣ್ಣಿನ ಪ್ರಮುಖ ಲಕ್ಷಣವಾಗಿದೆ.

ಎದೆ ಮತ್ತು ಬೆನ್ನು ನೋವು:

ಅಲ್ಸರ್‌ನ ನೋವು ಬೆನ್ನು ಅಥವಾ ಎದೆಗೂ ವ್ಯಾಪಿಸಬಹುದು. ನೋವು ಕರುಳಿನ ಮೂಲಕ ಸಾಗಿದರೆ ಅದು ತೀವ್ರವಾಗುತ್ತದೆ ಮತ್ತು ಬಹಳ ಹೊತ್ತು ಕಾಡುತ್ತಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X