Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೆನೆಪೊಯ ಮೆಡಿಕಲ್ ಆಸ್ಪತ್ರೆಯಲ್ಲಿ 3...

ಯೆನೆಪೊಯ ಮೆಡಿಕಲ್ ಆಸ್ಪತ್ರೆಯಲ್ಲಿ 3 ಟೆಸ್ಲಾ ಎಂಆರ್‌ಐ-ಕ್ಯಾಥ್‌ಲ್ಯಾಬ್ ಉದ್ಘಾಟನೆ

ಕರಾವಳಿ, ಮಲೆನಾಡಿನ ಜಿಲ್ಲೆಗಳ ಪೈಕಿ ಪ್ರಥಮ ಬಾರಿಗೆ ಅತ್ಯಾಧುನಿಕ ತಾಂತ್ರಿಕತೆಯ 3ಟೆಸ್ಲಾ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಕ್ಕೆ ಸಚಿವ ಶ್ರೀ ಪಾದ್ ಯೆಸ್ಸೊ ನಾಯಕ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 Aug 2017 3:43 PM IST
share
ಯೆನೆಪೊಯ ಮೆಡಿಕಲ್ ಆಸ್ಪತ್ರೆಯಲ್ಲಿ 3 ಟೆಸ್ಲಾ ಎಂಆರ್‌ಐ-ಕ್ಯಾಥ್‌ಲ್ಯಾಬ್ ಉದ್ಘಾಟನೆ

ಮಂಗಳೂರು.ಆ,13:ದೇಶದ ಎಲ್ಲಾ ಜನರಿಗೂ ಆರೋಗ್ಯ ಸುರಕ್ಷೆ ನೀಡುವುದು ರಾಷ್ಟ್ರೀಯ ಆರೋಗ್ಯ ನೀತಿಯ ಉದ್ದೇಶವಾಗಿದೆ ಈ ನಿಟ್ಟಿನಲ್ಲಿ ಯೆನೆಪೋಯ ವಿಶ್ವ ವಿದ್ಯಾನಿಲಯ ಸೇರಿದಂತೆ ದೇಶದ ವೈದ್ಯಕೀಯ ರಂಗದಲ್ಲಿ ಮಹತ್ವದ ಸೇ ವೆ ನೀಡುತ್ತಿರುವ ಖಾಸಗಿ ಸಂಸ್ಥೆಗಳು ಸರಕಾರದೊಂದಿಗೆ ಕೈ ಜೋಡಿಸಬೇಕು ಎಂದು ಕೇಂದ್ರ ಸರಕಾರದ ಆಯುಷ್ ಖಾತೆಯ ರಾಜ್ಯ ಸಚಿವ (ಸ್ವತಂತ್ರ ಖಾತೆ)ಶ್ರೀಪಾದ್ ಯೆಸ್ಸೋ ನಾಯಕ್ ತಿಳಿಸಿದ್ದಾರೆ.

ಕರಾವಳಿ,ಮಲೆನಾಡಿನ ಜಿಲ್ಲೆಗಳ ಪೈಕಿ ಪ್ರಥಮ ಬಾರಿಗೆ ಅತ್ಯಾಧುನಿಕ ತಾಂತ್ರಿಕತೆಯನ್ನು ಒಳಗೊಂಡ 3ಟೆಸ್ಲಾ ಎಂಆರ್‌ಐ ಸ್ಕಾನಿಂಗ್ ಯಂತ್ರಹಾಗೂ ಕ್ಯಾಥ್‌ಲ್ಯಾಬ್‌ನ್ನು ರವಿವಾರ ದೇರಳಕಟ್ಟೆಯ ಯೆನೆಪೋಯ ವಿಶ್ವವಿದ್ಯಾನಿಲಯದ ಆಸ್ಪತ್ರೆಯಲ್ಲಿ ಅವರು ಇಂದು ಉದ್ಘಾಟಿಸಿ ಮಾತನಾಡುತ್ತಿದ್ದರು.

ರಾಷ್ಟ್ರೀಯ ಆರೋಗ್ಯ ನೀತಿಯ ಪ್ರಕಾರ ಸರಾಸರಿ ಜನರ ಜೀವಿತಾವಧಿಯನ್ನು ಹೆಚ್ಚಿಸುವುದು.ಶಿಶು ಮರಣವನ್ನು ತಡೆಗಟ್ಟುವುದು.ದೇಶದ ಜನರಿಗೆ ಆರೋಗ್ಯ ಸುರಕ್ಷೆಯನ್ನು ನೀಡಲು ಮತ್ತು ಸಮಾಜದ ದುರ್ಬಲವರ್ಗದವರಿ ಆರೋಗ್ಯರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ.ದೇಶದಲ್ಲಿ ವೈದ್ಯಕೀಯ ಸೇವೆ ನೀಡಲು ವೈದ್ಯರ ಕೊರತೆ ಇದೆ. ಈ ಸನ್ನಿವೇಶದಲ್ಲಿ ಸರಕಾರದ ಜೊತೆ ಜೊತೆಗೆ ಜನರಿಗೆ ಸೇವೆ ನೀಡಲು ಖಾಸಗಿ ಂಸ್ಥೆಗಳ ಸಹಕಾರ ಅಗತ್ಯ.ಪ್ರಸಕ್ತ ದೇಶದಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟಲು,ಸಾಮೂಹಿಕ ಲಸಿಕೆ ನೀಡಲು ಸರಕಾರದೊಂದಿಗೆ ಖಾಸಗಿ ಸಂಘ ಸಂಸ್ತೆಗಳು ಸಹಕಾರ ನೀಡುತ್ತಿವೆ.ಪ್ರಾಚೀನ ವೈದ್ಯಪದ್ಧತಿಯನ್ನು ಆಯುಷ್ ಆರೋಗ್ಯ ವ್ಯವಸ್ಥೆಯ ಮೂಲಕ ಜನರಿಗೆ ಆರೋಗ್ಯ ಸೇವೆ ನೀಡಲಾಗುತ್ತಿದೆ ಎಂದು ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ತಿಳಿಸಿದ್ದಾರೆ.

 ಸುಸಜ್ಜಿತವಾದ ,ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳನ್ನು ಹೊಂದಿರುವ ಯೆನೆಪೋಯ ವಿಶ್ವ ವಿದ್ಯಾನಿಲಯದಂತಹ ಸಂಸ್ಥೆಗಳು ನೀಡುತ್ತಿರುವ ವೈದ್ಯಕೀಯ ಸೇವೆ ಮಾದರಿಯಾಗಿದೆ ಎಂದು ಸಚಿವರು ಶ್ಲಾಘಿಸಿದರು.

  ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯೆನೆಪೋಯ ವಿಶ್ವ ವಿದ್ಯಾನಿಲಯದ ಕುಲಾಧಿಪತಿ ಯೆನೆಪೋಯ ಅಬ್ದುಲ್ಲಾ ಕುಂಞ ಮಾತನಾಡುತ್ತಾ,ಸಂಸ್ಥೆಯ ಸ್ಥಾಪಕ ಯೆನೆಪೋಯ ಮೊಹಿಯುದ್ಧೀನ್ ಕುಂಞ ಅವರ ಕನಸಿನಂತೆ ಸಂಸ್ಥೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ವೈದ್ಯಕೀಯ ಕಾಲೇಜು,ಆಸ್ಪತ್ರೆಯಾಗಿ ಬೆಳೆಯುತ್ತಿದೆ.ಇತ್ತಿಚಗೆ ಅಳವಡಿಸಲಾದ ರೊಬೋಟೆಕ್ ತಂತ್ರಜ್ಞಾನದ ಮೂಲಕ 125ಅಧಿಕ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಪ್ರಥಮ ಬಾರಿಗೆ ಕರಾವಳಿ ಕರ್ನಾಟಕದಲ್ಲಿ 3ಟೆಸ್ಲಾ ಎಂಆರ್‌ಐ ಸ್ಕಾನಿಂಗ್ ಯಂತ್ರಹಾಗೂ ಕ್ಯಾಥ್ ಲ್ಯಾಬ್‌ನ್ನು ಸ್ಥಾಪಿಸಿರುವುದು ಸಂಸ್ಥೆಯ ಸಾಧನೆಯ ಮೈಲು ಗಲ್ಲಾಗಿದೆ. ವೈದ್ಯಕೀಯ ರಂಗದಲ್ಲಿ ಹೊಸ ತಂತ್ರಜ್ಞಾನದ ಬಳಕೆ ಹೆಚ್ಚು ತ್ವರಿತಗತಿಯಲ್ಲಿ,ಗುಣಮಟ್ಟದ ವೈದ್ಯಕೀಯ ಸೇವೆಯನ್ನು ರೋಗಿಗಳಿಗೆ ನೀಡಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ಯೆನೆಪೋಯ ಸಂಸ್ಥೆ ಸಮಾಜದ ಕಟ್ಟಕಡೆಯ ಜನಸಾಮಾನ್ಯರಿಗೂ ದೊರೆಯುವ ರೀತಿಯ ವೈದ್ಯಕೀಯ ಸೌಲಭ್ಯವನ್ನು ನೀಡುತ್ತಾ ಬಂದಿದೆ.ಸರಕಾರದ ಯೋಜನೆಗೆ ಕೈ ಜೊಡಿಸುತ್ತಾ ಬಂದಿದೆ.ಉತ್ತಮ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿ ಮನ್ನಣೆಯನ್ನು ಪಡೆದಿದೆ ಎಂದು ಅಬ್ದುಲ್ಲಾ ಕುಂಞ ತಿಳಿಸಿದರು.

ಅನಿವಾಸಿ ಉದ್ಯಮಿ ಬಿ.ಆರ್.ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಿ ಶುಭಹಾರೈಸಿದರು.ನವೆಂಬರ್ 9-11ರವರೆಗೆ ದುಬಾಯಲ್ಲಿ ನಡೆಯಲಿರುವ ಜಾಗತಿಕ ವೈದ್ಯಕೀಯ ಸಮಾವೇಶಕ್ಕೆ ಭಾರತೀಯರನ್ನು ಆಹ್ವಾನಿಸುವುದಾಗಿ ತಿಳಿಸಿದರು. ಉಡುಪಿಯಲ್ಲಿ ಹಾಜಿ ಅಬ್ದುಲ್ಲಾ ನೆನಪಿನಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ನಿಡುವ ಆಸ್ಪತ್ರೆಯನ್ನು ಆರಂಭಿಸುವುದಾಗಿ ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಅರಣ್ಯ,ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ,ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ,ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್ ಹಾಗೂ ವೈಎಂಕೆ ಪೌಂಡೇಶನ್ನಿನ ಅಧ್ಯಕ್ಷ ವೈ.ಮುಹಮ್ಮದ್ ಕುಂಞ,ಯೆನೆಪೋಯ ಮೆಡಿಕಲ್ ಕಾಲೇಜ್,ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಮುಹಮ್ಮದ್ ಅಮೀನ್ ವಾನಿ, ಯೆನೆಪೋಯ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ.ಎಂ.ವಿಜಯ ಕುಮಾರ್,ಕುಲಸಚಿವ ಡಾ.ಜಿ.ಶ್ರೀ ಕುಮಾರ್ ಮೆನನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X