Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನ್ಯಭಾಷೆಗಳ ನಾಮ ಫಲಕಗಳಿಂದ ಕನ್ನಡಕ್ಕೆ...

ಅನ್ಯಭಾಷೆಗಳ ನಾಮ ಫಲಕಗಳಿಂದ ಕನ್ನಡಕ್ಕೆ ಧಕ್ಕೆಯಾಗದು: ಅಜಯ್ ಕುಮಾರ್ ಸಿಂಗ್

​ಅಖಿಲ ಭಾರತ ಭಾಷಾ ಸೌಹಾರ್ದ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ13 Aug 2017 5:46 PM IST
share

ಬೆಂಗಳೂರು, ಆ.13: ಕನ್ನಡ ಭಾಷಾ ಸಂಸ್ಕೃತಿಗೆ ತನ್ನದೆ ಆದ ಘನತೆ ಇದೆ. ನಮ್ಮ ಭಾಷೆಯ ಮೇಲೆ ಆತ್ಮವಿಶ್ವಾಸ, ಆತ್ಮಗೌರವ ಇರಬೇಕು. ಯಾವುದೋ ಭಾಷೆಯಲ್ಲಿ ನಾಮಫಲಕ ಬಂದರೆ ಏನು ಪರಿಣಾಮ ಬೀರಲ್ಲ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ. ಅಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.

ರವಿವಾರ ನಗರದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಖಿಲ ಭಾರತ ಭಾಷಾ ಸೌಹಾರ್ದ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಬಲ ಭಾಷೆಗಳ ಪ್ರಬಲ್ಯಗಳ ನಡುವೆ ಅಸ್ತಿತ್ವವನ್ನು ಕಳೆದುಕೊಳ್ಳುವಂತ ಭಾಷೆಗಳಂತೆ ಕನ್ನಡ ಸತ್ವ ಹೀನ ಭಾಷೆಯಲ್ಲ. ಕನ್ನಡಕ್ಕೆ ತನ್ನದೇ ಆದ ಸತ್ವ, ಘನತೆ ಇದೆ. ನಮ್ಮ ಭಾಷೆಯ ಕುರಿತು ನಮ್ಮಲ್ಲಿ ಗಟ್ಟಿಯಾದ ಆತ್ಮವಿಶ್ವಾಸ, ಆತ್ಮಗೌರವ ಇರಬೇಕು ಎಂದು ತಿಳಿಸಿದರು.

ಮಾನವನ ವಿಕಾಸದಲ್ಲಿ ಭಾಷೆಗೆ ತನ್ನದೇ ಆದ ಪಾತ್ರವಿದೆ. ಪ್ರಪಂಚ ಎನ್ನುವುದು ಸಂಬಂಧಗಳ ಜಾಲ. ಈ ಸಂಬಂಧಗಳ ಸಂವಹನ ಕೊಂಡಿಯಾಗಿ ಭಾಷೆ ಕಾರ್ಯನಿರ್ವಹಿಸುತ್ತದೆ. ಭಾಷೆ ಎನ್ನುವುದು ನಿಂತ ನೀರಲ್ಲ. ಅದು ಸದಾ ಹರಿಯುವ ಹೊಳೆ. ನಮ್ಮ ಭಾಷೆಯ ಮೇಲಿನ ಗೌರವದ ಜೊತೆಗೆ ಇತರೆ ಭಾಷೆಗಳೊಂದಿಗೆ ಸೌಹಾರ್ದ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ಕನ್ನಡದ ಕವಿ ಸರ್ವಜ್ಞ ಮತ್ತು ತಮಿಳು ಕವಿ ತಿರುವಳ್ಳವರ್ ದೇಶದ ಅದ್ಬುತ ರತ್ನಗಳು. ಈ ಎರಡು ಭಾಷೆಗಳ ಸಂಬಂಧವನ್ನು ಗಟ್ಟಿಗೊಳಿಸಲು ಈ ಮಹಾ ಪುರಷರು ಪ್ರೇರಕರಾಗಿದ್ದಾರೆ. ಇವರ ಹೆಸರಿನಲ್ಲಿ ಈ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು. ಅಂತರ್ ಭಾಷಾ ಸಂಬಂಧಗಳನ್ನು ಗಟ್ಟಿಗೊಳಿಸಲು ಈ ರೀತಿಯ ಭಾಷಾ ಸೌಹಾರ್ದ ಕಾರ್ಯಕ್ರಮಗಳನ್ನು ಎಲ್ಲ ರಾಜ್ಯಗಳಲ್ಲಿ ಹಮ್ಮಿಕೊಳ್ಳುವುದು ಅಗತ್ಯವಿದೆ. ಇಂತಹ ಕಾರ್ಯಕ್ರಮಗಳನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಆಯೋಜಿಸುವುದು ಸೂಕ್ತ ಎಂದು ಸಲಹೆ ನೀಡಿದರು.

ಕವಿ ಡಾ.ಸಿದ್ದಲಿಂಗಯ್ಯ ಮಾತನಾಡಿ, ದೂರದ ಯುರೋಪಿಯನ್ ಮತ್ತು ಫ್ರೆಂಚ್ ಸಾಹಿತ್ಯದ ಕುರಿತು ನಾವು ಮೆಚ್ಚುಗೆ ವ್ಯಕ್ತಪಡಿಸುತ್ತೇವೆ. ಆದರೆ ನಮ್ಮ ಅಕ್ಕಪಕ್ಕದಲ್ಲಿರುವ ತೆಲುಗು, ತಮಿಳು, ಮಲಯಾಳಂ ಸಾಹಿತ್ಯವನ್ನು ತಿಳಿದುಕೊಂಡಿಲ್ಲ. ದೇಶಿ ಭಾಷೆಗಳ ಸಾಹಿತ್ಯದಲ್ಲಿ ದೇಶದೊಳಗಿನ ಸಮಸ್ಯೆಗಳನ್ನು ಸ್ವಾರಸ್ಯಕರವಾಗಿ ವ್ಯಕ್ತಪಡಿಸಿವೆ. ಇದನ್ನು ಎಲ್ಲ ಭಾಷಿಗರಿಗೂ ತಿಳಿಯಲು ಅನುವಾದಿತ ಪುಸ್ತಕಗಳು ಹೆಚ್ಚಾಗಿ ಹೊರಬರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X