Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕುವೈತ್: ಸಮುದ್ರದಲ್ಲಿ ಭಾರೀ ತೈಲ ಸೋರಿಕೆ

ಕುವೈತ್: ಸಮುದ್ರದಲ್ಲಿ ಭಾರೀ ತೈಲ ಸೋರಿಕೆ

ಸೋರಿಕೆಯಾದ ತೈಲ ಸೌದಿ, ಬಹರೈನ್‌ನ ಸಮುದ್ರಪ್ರದೇಶಗಳಿಗೂ ಹರಡುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ13 Aug 2017 9:53 PM IST
share
ಕುವೈತ್: ಸಮುದ್ರದಲ್ಲಿ ಭಾರೀ ತೈಲ ಸೋರಿಕೆ

ಕುವೈತ್‌ನಗರ,ಆ.13: ಕುವೈತ್ ನಗರವು 30 ಶತಕೋಟಿ ಡಾಲರ್ ವೆಚ್ಚದಲ್ಲಿ ಬೃಹತ್ ತೈಲ ಸ್ಥಾವರ ಸಂಕೀರ್ಣವನ್ನು ನಿರ್ಮಿಸುತ್ತಿರುವ ನಗರದ ಸಮುದ್ರಪ್ರದೇಶದಲ್ಲಿ ಸುಮಾರು 35 ಸಾವಿರ ಬ್ಯಾರೆಲ್ ಕಚ್ಚಾ ತೈಲವು ಸೋರಿಕೆಯಾಗಿರುವುದಾಗಿ ತಜ್ಞರು ತಿಳಿಸಿದ್ದಾರೆ.

ಸಾಗರದಲ್ಲಿರುವ ಕುವೈತಿ-ಸೌದಿ ಜಂಟಿ ತೈಲ ಉತ್ಖನನ ಪ್ರದೇಶದಲ್ಲಿ ಉಂಟಾಗಿರುವ ತೈಲ ಸೋರಿಕೆಯನ್ನು ನಿಲ್ಲಿಸಲು ತುರ್ತುಸ್ಥಿತಿ ಕಾರ್ಯಕರ್ತರು ಹರಸಾಹಸ ನಡೆಸುತ್ತಿದ್ದಾರೆಂದು ಕುವೈತ್ ಪೆಟ್ರೋಲಿಯಂ ನಿಗಮದ ವಕ್ತಾರ ತಲಾಲ್ ಅಲ್-ಖಾಲಿದ್ ತಿಳಿಸಿದ್ದಾರೆ.

  ಕುವೈತ್‌ನ ದಕ್ಷಿಣ ಕರಾವಳಿಯಲ್ಲಿರುವ ಸಮುದ್ರ ಪ್ರದೇಶದಲ್ಲಿ ಸೋರಿಕೆಯಾದ ತೈಲದ ಪ್ರಮಾಣದ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಅಲ್-ಖಾಫ್ಜಿ ಪ್ರದೇಶದಲ್ಲಿರುವ 50 ಕಿ.ಮೀ. ವಿಸ್ತೀರ್ಣದ ಹಳೆಯ ಪೈಪ್‌ಲೈನ್‌ನಿಂದ ತೈಲ ಸೋರಿಕೆಯಾಗಿದೆಯೆಂದು ಕುವೈತ್‌ನ ಮಾಧ್ಯಮಗಳು ವರದಿ ಮಾಡಿವೆ.

    ಅಲ್‌ಝೌರ್ ನಗರದ ಸಾಗರಪ್ರದೇಶಕ್ಕೆ 35 ಸಾವಿರ ಕಚ್ಚಾ ತೈಲ ಸೋರಿಕೆಯಾಗಿರುವುದಾಗಿ ತಜ್ಞರು ಅಂದಾಜಿಸಿದ್ದಾರೆ. ಕುವೈತ್ ಆಡಳಿತವು ಅಲ್‌ಝೌರ್ ನಗರದಲ್ಲಿ ದಿನಂಪ್ರತಿ 6.15 ಬ್ಯಾರೆಲ್ ತೈಲವನ್ನು ಸಂಸ್ಕರಿಸುವ ತೈಲ ಸಂಸ್ಕರಣಾಗಾರ ಸೇರಿದಂತೆ 30 ಶತಕೋಟಿ ಡಾಲರ್ ವೆಚ್ಚದಲ್ಲಿ ತೈಲ ಸಂಕೀರ್ಣವೊಂದನ್ನು ನಿರ್ಮಿಸುತ್ತಿದೆ.

ಸೋರಿಕೆಯಾದ ತೈಲವು ಕುವೈತ್‌ನ ದಕ್ಷಿಣ ಭಾಗ ಗಲ್ಫ್ ಕರಾವಳಿಯಲ್ಲಿರುವ ದೇಶಗಳಾದ ಸೌದಿ ಆರೇಬಿಯ ಹಾಗೂ ಬಹರೈನ್‌ನ ಸಮುದ್ರ ಪ್ರದೇಶಗಳಿಗೆ ಇನ್ನೂ ತಲುಪಿಲ್ಲವೆಂದು ಮೂಲಗಳು ತಿಳಿಸಿವೆ.

ಕುವೈತ್ ವಿಶ್ವದ ಪ್ರಮುಖ ತೈಲ ಹಾಗೂ ನೈಸರ್ಗಿಕ ಅನಿಲ ಉತ್ಪಾದಕ ದೇಶಗಳಲ್ಲೊಂದಾಗಿದೆ. ತೈಲ ಹಾಗೂ ನೈಸರ್ಗಿಕ ಅನಿಲವು ಅದರ ರಫ್ತು ಆದಾಯದ ಶೇ.95ರಷ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X