Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀರಾಮನ ಜಮೀನು ಮಾರಿದ ದೇವಸ್ಥಾನದ...

ಶ್ರೀರಾಮನ ಜಮೀನು ಮಾರಿದ ದೇವಸ್ಥಾನದ ಅರ್ಚಕ ..!

ವಾರ್ತಾಭಾರತಿವಾರ್ತಾಭಾರತಿ13 Aug 2017 10:22 PM IST
share
ಶ್ರೀರಾಮನ ಜಮೀನು ಮಾರಿದ ದೇವಸ್ಥಾನದ ಅರ್ಚಕ ..!

ರಾಂಚಿ, ಆ.13: ಶ್ರೀರಾಮ ದೇವಳಕ್ಕೆ ಸೇರಿದ ಜಮೀನನ್ನು ದೇವಸ್ಥಾನದ ಅರ್ಚಕನೇ ಮಾರಾಟ ಮಾಡಿರುವ ಪ್ರಕರಣವೊಂದು ಜಾರ್ಖಂಡ್‌ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಚಕನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

 ಜಾನಕಿ ತಪೋವನ ಮಂದಿರದ ಅರ್ಚಕ ರಾಮ್‌ಶರಣ್ ದಾಸ್ ಹಾಗೂ ಹಲವು ‘ಅಪರಿಚಿತ ವ್ಯಕ್ತಿ’ಗಳ ವಿರುದ್ಧ ಸಿಬಿಐ ಆರೋಪಪಟ್ಟಿ ದಾಖಲಿಸಿದೆ. ಸರಕಾರಿ ಉದ್ಯೋಗಿಗಳು, ಬಿಲ್ಡರ್‌ಗಳು, ಲ್ಯಾಂಡ್ ಮಾಫಿಯಾದ ವ್ಯಕ್ತಿಗಳು ಈ ಪ್ರಕರಣದಲ್ಲಿ ಒಳಗೊಂಡಿದ್ದು ಇವರ ವಿರುದ್ಧ ದೇವಳದ ಟ್ರಸ್ಟ್‌ಗೆ ಸೇರಿದ 19 ಎಕರೆ ಜಮೀನನ್ನು ಮಾರಾಟ/ವರ್ಗಾವಣೆ ಮಾಡಿರುವ ಆರೋಪ ದಾಖಲಿಸಲಾಗಿದೆ. ನಗರದ ಕೇಂದ್ರ ಭಾಗದಲ್ಲಿ ಈ ಜಮೀನಿದೆ.

  1948ರಲ್ಲಿ (ಈಗ ದಿವಂಗತ )ಜಾನಕಿ ಜೀವನ್‌ಶರಣ್ ಎಂಬವರು ಶ್ರೀರಾಮ್ ಜಾನಕಿ ತಪೋವನ್ ಮಂದಿರ್ ಟ್ರಸ್ಟ್ ಎಂಬುದನ್ನು ಸ್ಥಾಪಿಸಿದ್ದು ದೇವರಾದ ಶ್ರೀರಾಮ ಮತ್ತು ಜಾನಕಿ(ಸೀತೆ)ಯನ್ನು ‘ಶಾಶ್ವತ ಅಪ್ರಾಪ್ತರು’ ಎಂದು ಟ್ರಸ್ಟ್‌ನ ದಾಖಲೆಗಳಲ್ಲಿ ತಿಳಿಸಲಾಗಿದೆ. ದೇವಸ್ಥಾನಕ್ಕೆ ಸೇರಿದ ಆಸ್ತಿಯ ಸಂಪೂರ್ಣ ನಿರ್ವಹಣೆಯ ಹೊಣೆಗಾರಿಕೆಯನ್ನು ಟ್ರಸ್ಟ್ ಹೊಂದಿರುತ್ತದೆ ಎಂದು ತಿಳಿಸಲಾಗಿತ್ತು.

 ಆದರೆ, ದೇವಳದ ಹಾಲಿ ಅರ್ಚಕ ರಾಮ್‌ಶರಣ್ ದಾಸ್ ಒಳಸಂಚು ನಡೆಸಿ 2005ರಲ್ಲಿ ಟ್ರಸ್ಟ್ ದಾಖಲೆಯನ್ನು ಅಕ್ರಮವಾಗಿ ಪರಿಷ್ಕರಿಸಿ ಹೊಸ ಕರಾರುಪತ್ರವನ್ನು ರಚಿಸಿದ್ದರು ಮತ್ತು ಹಳೆಯ ಕರಾರುಪತ್ರವನ್ನು ರದ್ದುಗೊಳಿಸಿದ್ದರು. ಇದರಲ್ಲಿ ಟ್ರಸ್ಟ್‌ನ ಮೂಲ ಸ್ಥಾಪಕ ತಾನೇ ಎಂದು ಆತ ಬರೆಸಿದ್ದ. ಅಲ್ಲದೆ, ಕಟ್ಟಡಗಳನ್ನು ನಿರ್ಮಿಸುವ ಉದ್ದೇಶಕ್ಕೆ ಟ್ರಸ್ಟ್‌ನ ಜಮೀನನ್ನು ಮಾರಾಟ

/ ವರ್ಗಾವಣೆ ಮಾಡಬಹುದು ಎಂಬ ಕರಾರನ್ನೂ ಅಕ್ರಮವಾಗಿ ಸೇರಿಸಿದ್ದ ಎಂದು ಸಿಬಿಐ ಆರೋಪಿಸಿದೆ. ಬಳಿಕ ಅಕ್ರಮ ದಾಖಲೆಗಳನ್ನು ಮುಂದಿರಿಸಿ ಜಾರ್ಖಂಡ್ ರಾಜ್ಯ ಹಿಂದೂ ಧಾರ್ಮಿಕ ಟ್ರಸ್ಟ್ ಮಂಡಳಿಯಿಂದ ಜಮೀನು ಮಾರಾಟ/ವರ್ಗಾವಣೆಗೆ ಅನುಮತಿಯನ್ನೂ ಪಡೆಯಲು ಸಫಲವಾಗಿದ್ದ . ನಂತರ ಹಲವು ಲ್ಯಾಂಡ್ ಮಾಫಿಯಾ, ಬಿಲ್ಡರ್‌ಗಳ ಜೊತೆ ಸೇರಿಕೊಂಡು ದೇವಳದ ಜಮೀನನ್ನು ಮಾರಾಟ ಮಾಡಿದ್ದ ಎಂದು ಸಿಬಿಐ ಸಲ್ಲಿಸಿದ್ದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಈ ವ್ಯವಹಾರಕ್ಕೆ ಅಗತ್ಯವಿದ್ದ ದಾಖಲೆಗಳನ್ನು ಒದಗಿಸುವಲ್ಲಿ ರಾಂಚಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಆರ್‌ಆರ್‌ಡಿಎ)ದ ಕೆಲವು ಅಧಿಕಾರಿಗಳೂ ನೆರವಾಗಿದ್ದರು ಎಂದು ಸಿಬಿಐ ಆರೋಪಿಸಿದ್ದು, ಕ್ರಿಮಿನಲ್ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X