Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನನಗೆ ವಧು ಹುಡುಕಿ ಕೊಡಿ’: ಗ್ರಾಮ...

‘ನನಗೆ ವಧು ಹುಡುಕಿ ಕೊಡಿ’: ಗ್ರಾಮ ಪಂಚಾಯತ್ ಗೆ ಯುವಕನ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ14 Aug 2017 6:09 PM IST
share

ಗದಗ, ಆ. 14: ಮನೆ, ನಿವೇಶನ, ಪಡಿತರ ಚೀಟಿ, ಕುಡಿಯುವ ನೀರು ಕೊಡಿ, ರಸ್ತೆ-ಚರಂಡಿ ದುರಸ್ತಿ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ನೀಡುವುದು ಸರ್ವೆ ಸಾಮಾನ್ಯ. ಆದರೆ, ಇಲ್ಲಿನ ಲಕ್ಷ್ಮೇಶ್ವರದಲ್ಲಿ ರಾಮಗೇರಿ ಗ್ರಾಮದ ಯುವಕ ನನಗೆ ವಧು ಹುಡುಕಿಕೊಡಿ ಎಂದು ಗ್ರಾ.ಪಂ. ಕಚೇರಿಗೆ ಅರ್ಜಿ ಸಲ್ಲಿಸಿದ್ದಾನೆ.

ಇದು ಅತ್ಯಂತ ವಿಚಿತ್ರವಾದರೂ ಸತ್ಯ.

ಗದಗ ಜಿಲ್ಲೆ, ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದ 29 ವರ್ಷದ ಯುವಕ ಮಂಜುನಾಥ ರಾಮಪ್ಪ ಪೂಜಾರ್ ನನಗೆ ವಧು ಹುಡುಕಿಕೊಡಿ ಎಂದು ಜುಲೈ 18ರಂದು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸುವ ಮೂಲಕ ಎಲ್ಲರನ್ನು ಹುಬ್ಬೇರುವಂತೆ ಮಾಡಿದ್ದಾನೆ. ಕುಡಿಯುವ ನೀರು, ಪಡಿತರ ಚೀಟಿ, ಮನೆ, ನಿವೇಶನ ಕೋಡಿ, ರಸ್ತೆ, ಚರಂಡಿ ದುರಸ್ತಿ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಅಷ್ಟೇ ಗಮನಹರಿಸುತ್ತಿದ್ದ ಗ್ರಾ.ಪಂ., ಪಿಡಿಓ, ಕಾರ್ಯದರ್ಶಿ, ಅಧ್ಯಕ್ಷೆ ಹಾಗೂ ಸದಸ್ಯರಿಗೆ ಯುವಕನ ಅರ್ಜಿ ಹೊಸ ತಲೆನೋವು ಸೃಷ್ಟಿಸಿದೆ.

ಹತ್ತನೆ ತರಗತಿಯ ವರೆಗೆ ವಿದ್ಯಾಭ್ಯಾಸ ಮಾಡಿರುವ ಯುವಕ ಮಂಜುನಾಥ ರಾಮಪ್ಪ ಪೂಜಾರ್, ಕೃಷಿಕನಾಗಿದ್ದು, ಲಿಂಗಾಯತ ಸಮುದಾಯಕ್ಕೆ ಸೇರಿದ್ದಾನೆ. ಆತ ರೈತ ಎಂಬ ಕಾರಣಕ್ಕೆ ವಧು ಸಿಗುತ್ತಿಲ್ಲ. ಸುಮಾರು ನೂರಕ್ಕೂ ಹೆಚ್ಚು ಕನ್ಯೆಯರನ್ನು ನೋಡಿದರೂ, ಮದುವೆ ನೆರವೇರದ ಹಿನ್ನೆಲೆಯಲ್ಲಿ ಗ್ರಾ.ಪಂ.ಮೊರೆ ಹೋಗಿದ್ದಾನೆ.

‘ತಾನು ಕೃಷಿಕನೆಂಬ ಕಾರಣಕ್ಕೆ ನನಗೆ ಹೆಣ್ಣು ಕೊಡಲು ಯಾರು ಒಪ್ಪುತ್ತಿಲ್ಲ. ಹೀಗಾಗಿ ನನಗೆ ತೀವ್ರ ನೋವಾಗಿದ್ದು, ನಾನು ಕೃಷಿ ಕುಟುಂಬದಲ್ಲಿ ಹುಟ್ಟಿದ್ದು ತಪ್ಪೇ’ ಎಂದು ಮಂಜುನಾಥ ರಾಮಪ್ಪ ಪೂಜಾರಿ, ಗ್ರಾಮ ಪಂಚಾಯತಿಗೆ ನೀಡಿರುವ ಅರ್ಜಿಯಲ್ಲಿ ತನ್ನ ಅಳಲು ತೋಡಿಕೊಂಡಿದ್ದಾನೆ.
ಈ ವಿಚಿತ್ರ ಅರ್ಜಿಯ ಬಗ್ಗೆ ರಾಮಗೇರಿ ಗ್ರಾಮ ಪಂಚಾಯತಿ ಪಿಡಿಓ ಜಗದೀಶ್ ರಾಮಣ್ಣ ಕುರುಬರ, ಇದೊಂದು ವಿಚಿತ್ರ ಪ್ರಕರಣ. ಯುವಕ ಪಂಚಾಯಿತಿಗೆ ಸಲ್ಲಿಸಿರುವ ಅರ್ಜಿಯನ್ನು ಹಿರಿಯ ಅಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ತಿಳಿಸಿದರು.

‘ಏನ್ ಮಾಡೋದ್ರೀ ನಮ್ಮ ಗ್ರಾಮದ ಯುವಕ ಮಂಜುನಾಥ ರಾಮಪ್ಪ ಪೂಜಾರ ಕಮತ(ಕೃಷಿಕ) ಮಾಡ್ತಾನಾರೀ. ಅವ್ಗ ಯಾರೂ ಕನ್ಯೆನೆ ಕೊಡ್ತೀಲ್ಲ. ಹೀಂಗಾಗಿ ಪಂಚಾಯ್ತಿಗೆ ಅರ್ಜಿ ಕೊಟ್ಟಾನ್ರೀ. ಆ ಯುವಕುಂಗ ಪಂಚಾಯ್ತಿ ಸ್ಪಂದಿಸಲೇಬೇಕರೀ. ಗ್ರಾ.ಪಂ. ಸಭೆಯಲಿ ಕುಂತು ಚರ್ಚೆ ಮಾಡಿ, ಎಲ್ಲಾದರೂ ವಧು-ವರರ ಸಮಾವೇಶಕ್ಕೆ ಕಳಿಸಿ, ಆತುಗಾ ಕನ್ಯೆ ಕೊಡಿಸ್ಬೇಕು ಅಂತ ಮಾಡ್ತೀವಿರೀ’
-ಸಿದ್ದವ್ವ ಮೈಲಾರಪ್ಪ ಪೂಜಾರಿ, ಗಾಮಗೇರಿ ಗ್ರಾ.ಪಂ.ಅಧ್ಯಕ್ಷೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X