Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸ ತಾಲೂಕು ಕೇಂದ್ರವನ್ನು ಘೋಷಿಸಲು...

ಕಳಸ ತಾಲೂಕು ಕೇಂದ್ರವನ್ನು ಘೋಷಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Aug 2017 7:34 PM IST
share

ಮೂಡಿಗೆರೆ, ಆ.14: ರಾಜ್ಯ ಸರಕಾರ ಕಳಸವನ್ನು ತಾಲೂಕು ಕೇಂದ್ರವನ್ನಾಗಿ ರಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ. ಈ ಆದೇಶವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಉಸ್ತುವಾರಿ ಸಚಿವ ರೋಶನ್ ಬೇಗ್ ಅವರು ಘೋಷಣೆ ಮಾಡಿ ಕಳಸ ಭಾಗದ ಜನರಿಗೆ ಹಬ್ಬದ ವಾತಾವರಣವಾಗುವಂತೆ ಮಾಡಬೇಕೆಂದು ಶಾಸಕ ಬಿ.ಬಿ.ನಿಂಗಯ್ಯ ಆಗ್ರಹಿಸಿದರು.

 ಅವರು ಸೋಮವಾರ ಪಟ್ಟಣದ ಪತ್ರಿಕಾ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ 15 ಹೊಸ ತಾಲೂಕುಗಳನ್ನು ಘೋಷಣೆ ಮಾಡಿದಾಗ ತಾನು ಕಳಸವನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಒತ್ತಾಯಿಸಿ ಒಂದು ಗಂಟೆಗಳ ಕಾಲ ವಿಧಾನಸಭಾ ಅಧಿವೇಶನದಲ್ಲಿ ಸದನದ ಭಾವಿಗಿಳಿದು ದರಣಿ ನಡೆಸಿದ್ದೆನು. ಅಲ್ಲದೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಮಾಜಿ ಪ್ರಧಾನಿ ದೇವೆಗೌಡರು ಕೂಡ ಪತ್ರ ಬರೆದು ಒತ್ತಾಯಿಸಿದ್ದಲ್ಲದೆ, ಕಳಸ ಭಾಗದಲ್ಲಿ ಸಾರ್ವಜನಿಕರು ಹೋರಾಟ ನಡೆಸಿದ್ದರು. ಈ ಎಲ್ಲಾ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳು ಕಳಸವನ್ನು ತಾಲೂಕಾಗಿ ಘೋಷಿಸಲು ಒಪ್ಪಿಕೊಂಡು ಆದೇಶ ಹೊರಡಿಸಿದ್ದಾರೆ. ಈ ಪತ್ರ ಜಿಲ್ಲಾಧಿಕಾರಿಗಳಿಗೆ ತಲುಪಿದೆ ಎಂದು ಮಾಹಿತಿ ನೀಡಿದರು.

ಈ ಭಾಗದಲ್ಲಿ ಧಾರ್ಮಿಕ ಶ್ರದ್ದಾ ಕ್ಷೇತ್ರವಾದ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಳಸದ ಕಳಸೇಶ್ವರ, ತುಂಗಾಭದ್ರ ನದಿಯ ಉಗಮಸ್ಥಾನದ ಗಂಗಾಮೂಲ, ಹೇಮಾವತಿ ನದಿ ಮೂಲ ಹಾಗೂ ಪುರಾತನ ಜೈನ ಬಸತಿಗಳು ಸೇರಿದಂತೆ 31 ಸಾವಿರ ಜನಸಂಖ್ಯೆ ಹೊಂದಿದ್ದು, ಮೂಡಿಗೆರೆ ಪಟ್ಟಣ್ಕಕೆ ದೂರವಾಗಿದ್ದರಿಂದ ಕಳಸ ತಾಲೂಕು ರಚನೆ ಅತ್ಯಂತ ಸೂಕ್ತವಾಗಿದ್ದು, ತಾಲೂಕು ರಚನೆಗೆ ಈ ಕೇತ್ರದ ಶಾಸಕನಾಗಿ ತನ್ನ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಕಳಸವನ್ನು ತಾಲೂಕು ಕೇಂದ್ರ ಮಾಡಿ ಕಳಸದ ಜನರಿಗೆ ಹಬ್ಬದ ವಾತಾವರಣ ನಿರ್ಮಾಣ ಮಾಡಿರುವ ಹೆಗ್ಗಳಿಕೆ ಸರಕಾರಕ್ಕೆ ಸಲ್ಲಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಮಲೆನಾಡಿನಲ್ಲಿರುವ ಕಾಡಾನೆಗಳ ನಿಯಂತ್ರಣಕ್ಕೆ ಆನೆ ಕಾರಿಡಾರ್ ಮತ್ತು ಆನೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಫಾ.ನಂ.53 ಯಲ್ಲಿ ಅರ್ಜಿ ಹಾಕಿದವರಿಗೆ ವಿಲಾವಾರಿಗಳಿಗೆ ತೊಂದರೆಗಳಿದ್ದು, ಪ್ರಮುಖವಾಗಿ ಅರಣ್ಯ ಕಂದಾಯ ಭೂಮಿಯನ್ನು ಪಕ್ಕಾಪೋಡ್ ಮಾಡದೇ ವಿಲಾವಾರಿ ಮಾಡುವಂತಿಲ್ಲವೆಂಬ ಆದೇಶವಿರುವುದರಿಂದ ಹಿನ್ನಡೆಯಾಗಿದೆ. ಅಲ್ಲದೆ 94ಸಿ ಅರ್ಜಿಯಲ್ಲಿ ನಿವೇಶನ ರಹಿತರಿಗೆ ಧಾಖಲೆ ನೀಡಲು ಸಾಧ್ಯವಾಗದೇ ಇರುವುದರಿಂದ ಕೂಡಲೇ ಸರ್ವೆ ನಡೆಸಿ ಸಮಸ್ಯೆ ಇತ್ಯರ್ಥಗೊಳಿಸಬೇಕೆಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X