Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಬಿಳಿಯ ಶ್ರೇಷ್ಠತಾವಾದಿ’ಗಳನ್ನು ಖಂಡಿಸಲು...

‘ಬಿಳಿಯ ಶ್ರೇಷ್ಠತಾವಾದಿ’ಗಳನ್ನು ಖಂಡಿಸಲು ಹಿಂಜರಿದ ಟ್ರಂಪ್: ಸಮರ್ಥಿಸಿಕೊಳ್ಳಲು ಹೆಣಗಾಡಿದ ಶ್ವೇತಭವನ

ವಾರ್ತಾಭಾರತಿವಾರ್ತಾಭಾರತಿ14 Aug 2017 10:03 PM IST
share
‘ಬಿಳಿಯ ಶ್ರೇಷ್ಠತಾವಾದಿ’ಗಳನ್ನು ಖಂಡಿಸಲು ಹಿಂಜರಿದ ಟ್ರಂಪ್: ಸಮರ್ಥಿಸಿಕೊಳ್ಳಲು ಹೆಣಗಾಡಿದ ಶ್ವೇತಭವನ

ವಾಶಿಂಗ್ಟನ್, ಆ. 14: ವರ್ಜೀನಿಯದಲ್ಲಿ ಶನಿವಾರ ‘ಬಿಳಿಯ ಶ್ರೇಷ್ಠತಾವಾದಿ’ಗಳು ನಡೆಸಿದ ಸಭೆಯಲ್ಲಿ ಹಿಂಸೆ ಸ್ಫೋಟಿಸಿದ ಬಳಿಕ, ಇಂಥ ಗುಂಪುಗಳನ್ನು ಖಂಡಿಸಲು ಆರಂಭದಲ್ಲಿ ಹಿಂಜರಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರೀ ಟೀಕೆಗೆ ಒಳಗಾಗಿದ್ದಾರೆ.

ಅದೇ ವೇಳೆ, ಈ ವಿಷಯದಲ್ಲಿ ಅಧ್ಯಕ್ಷರ ವಿರುದ್ಧ ಹೆಚ್ಚುತ್ತಿರುವ ಟೀಕೆಯನ್ನು ನಿಭಾಯಿಸಲು ಶ್ವೇತಭವನ ಹರಸಾಹಸ ಪಡುತ್ತಿದೆ.

ಗುಲಾಮಗಿರಿಯನ್ನು ಸಮರ್ಥಿಸಿದ್ದ ಎರಡನೆ ಮಹಾಯುದ್ಧ ಕಾಲದ ಅಮೆರಿಕದ ಸೇನಾ ಜನರಲ್ ರಾಬರ್ಟ್ ಇ. ಲೀ ನ ಪ್ರತಿಮೆಯನ್ನು ತೆರವುಗೊಳಿಸುವುದನ್ನು ಪ್ರತಿಭಟಿಸಿ ಬಿಳಿ ಜನಾಂಗೀಯವಾದಿಗಳು ಆಯೋಜಿಸಿದ್ದ ‘ಯುನೈಟ್ ದ ರೈಟ್’ ರ್ಯಾಲಿಗೆ ಮುನ್ನ ಹಿಂಸಾಚಾರ ಸ್ಫೋಟಿಸಿತ್ತು.

ಪರ-ವಿರೋಧ ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದ ಸಂದರ್ಭದಲ್ಲಿ, ದುಷ್ಕರ್ಮಿಯೊಬ್ಬ ಗುಂಪೊಂದರ ಮೇಲೆ ಕಾರನ್ನು ನುಗ್ಗಿಸಿದಾಗ ಓರ್ವ ಮಹಿಳೆ ಮೃತಪಟ್ಟು ಹಲವಾರು ಮಂದಿ ಗಾಯಗೊಂಡರು.

ಅದೇ ವೇಳೆ, ಪ್ರತಿಭಟನೆಯ ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದ ಹೆಲಿಕಾಪ್ಟರೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿ ಟ್ರಂಪ್ ಹೇಳಿಕೆಯೊಂದನ್ನು ನೀಡಿದರಾದರೂ, ‘ಬಿಳಿಯ ಶ್ರೇಷ್ಠತಾವಾದಿ’ಗಳನ್ನು ಅವರು ಉಲ್ಲೇಖಿಸಿಲ್ಲ.

ಘಟನೆ ನಡೆದು ಒಂದು ದಿನದ ಬಳಿ ಹೇಳಿಕೆಯೊಂದನ್ನು ಹೊರಡಿಸಿದ ಶ್ವೇತಭವನ ವಕ್ತಾರರೊಬ್ಬರು, ‘‘ಎಲ್ಲ ರೀತಿಯ ಹಿಂಸಾಚಾರ, ಅಸಹಿಷ್ಣುತೆ ಮತ್ತು ದ್ವೇಷವನ್ನು ತಾನು ಖಂಡಿಸುವುದಾಗಿ ಅಧ್ಯಕ್ಷರು ತನ್ನ ಹೇಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಖಂಡಿತವಾಗಿಯೂ, ಅವರ ಹೇಳಿಕೆಯಲ್ಲಿ ಬಿಳಿಯ ಶ್ರೇಷ್ಠತಾವಾದಿಗಳು, ಕೆಕೆಕೆ, ನಿಯೋ ನಾಝಿಗಳು ಮತ್ತು ಎಲ್ಲ ತೀವ್ರವಾದಿ ಗುಂಪುಗಳು ಒಳಗೊಂಡಿವೆ’’ ಎಂದು ಹೇಳಿದ್ದಾರೆ.

ಶನಿವಾರ ನ್ಯೂಜರ್ಸಿಯ ಬೆಡ್‌ಮಿನ್ಸ್‌ಟರ್‌ನಲ್ಲಿನ ಗಾಲ್ಫ್ ರಿಸಾರ್ಟ್‌ನಲ್ಲಿ ಮಾತನಾಡಿದ ಟ್ರಂಪ್, ಹಿಂಸಾಚಾರದಲ್ಲಿ ‘ಹಲವು ಗುಂಪುಗಳ’ ತಪ್ಪಿದೆ ಎಂದು ಹೇಳಿದ್ದರು.

ಶಾರ್ಲಟ್‌ವಿಲ್ ಹಿಂಸಾಚಾರದಲ್ಲಿ ಶಾಮೀಲಾದ ಕಡು ಬಲಪಂಥೀಯ ಗುಂಪುಗಳ ಬಗ್ಗೆ ಅವರು ಯಾವುದೇ ಪ್ರಸ್ತಾಪ ಮಾಡಲಿಲ್ಲ.

ಈ ಸಭೆಯಲ್ಲಿ ಜನರು ಶಸ್ತ್ರಧಾರಿಗಳಾಗಿ, ಸೇನಾ ಸಮವಸ್ತ್ರ ಧರಿಸಿ ಟ್ರಂಪ್ ಹ್ಯಾಟ್ ಮತ್ತು ಟಿ-ಶರ್ಟ್‌ಗಳನ್ನು ಧರಿಸಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X