Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ಗ್ರಾಮ ಯೋಧರು, ಶಿಕ್ಷಕರ ನೆಲೆವೀಡು

ಈ ಗ್ರಾಮ ಯೋಧರು, ಶಿಕ್ಷಕರ ನೆಲೆವೀಡು

ವಾರ್ತಾಭಾರತಿವಾರ್ತಾಭಾರತಿ14 Aug 2017 11:52 PM IST
share
ಈ ಗ್ರಾಮ ಯೋಧರು, ಶಿಕ್ಷಕರ ನೆಲೆವೀಡು

ಬೆಳಗಾವಿಯಿಂದ ಕೇವಲ 38 ಕಿ.ಮೀ.ದೂರದಲ್ಲಿರುವ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮವು ಯೋಧರ ನೆಲೆವೀಡಾಗಿದೆ. ಈ ಗ್ರಾಮದ 400ಕ್ಕೂ ಅಧಿಕ ಯುವಕರು ಸೇನೆ ಮತ್ತು ಗಡಿ ರಕ್ಷಣಾ ಪಡೆ (ಬಿಎಸ್‌ಎಫ್) ಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸುಮಾರು 1,200 ಮನೆಗಳಿರುವ, 7,500 ಜನಸಂಖ್ಯೆಯುಳ್ಳ ಈ ಗ್ರಾಮವು ದೇಶಸೇವೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರತೀ ಕುಟುಂಬದ ಕನಿಷ್ಠ ಓರ್ವ ವ್ಯಕ್ತಿ ಸೇನೆಯನ್ನು ಸೇರಬೇಕು ಇಲ್ಲವೇ ಎಳೆಯ ಮನಸ್ಸುಗಳನ್ನು ತಿದ್ದಿ ಸುಸಂಸ್ಕೃತರನ್ನಾಗಿಸಲು ಶಿಕ್ಷಕ ವೃತ್ತಿಯನ್ನು ಕೈಗೊಳ್ಳಬೇಕು ಎಂದು ಈ ಗ್ರಾಮವು ದೃಢವಾಗಿ ನಂಬಿಕೊಂಡು ಬಂದಿದೆ.

ನಿವೃತ್ತಿಯ ಬಳಿಕ ಸ್ವಗ್ರಾಮಕ್ಕೆ ಮರಳುವ ಹಿರಿಯ ಯೋಧರು ಸೇನೆಯನ್ನು ಸೇರಲು ಯುವಕರಲ್ಲಿ ಸ್ಫೂರ್ತಿ ತುಂಬುವ ಜೊತೆಗೆ ಸೇನಾಭರ್ತಿ ರ್ಯಾಲಿಗಳಲ್ಲಿ ಪಾಲ್ಗೊಳ್ಳಲು ಅವರನ್ನು ತರಬೇತುಗೊಳಿಸುತ್ತಾರೆ. ಕಾರ್ಗಿಲ್ ವೀರರು ಸೇರಿದಂತೆ ಗ್ರಾಮದ ಸುಮಾರು 85 ಯೋಧರು ವಿವಿಧ ರಾಜ್ಯಗಳಲ್ಲಿಯ ಸೇನಾನೆಲೆಗಳಲ್ಲಿ ಕರ್ತವ್ಯ ಸಲ್ಲಿಸಿದ ಬಳಿಕ ಕಳೆದ ಕೆಲವು ವರ್ಷಗಳಲ್ಲಿ ನಿವೃತ್ತರಾಗಿರುವುದರಿಂದ ಈಗ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಈ ಗ್ರಾಮದ ಯುವಕರ ಸಂಖ್ಯೆ 400ರಿಂದ ಕೆಳಗಿಳಿದಿದೆ. ಆದರೆ ಇನ್ನು ಕೆಲವೇ ಸಮಯದಲ್ಲಿ ಹೆಚ್ಚಿನ ಯುವಕರು ಸೇನೆಗೆ ಸೇರ್ಪಡೆಗೊಂಡು ಈ ಸಂಖ್ಯೆಯನ್ನು ಹೆಚ್ಚಿಸುತ್ತಾರೆ ಎಂಬ ವಿಶ್ವಾಸವನ್ನು ಗ್ರಾಮಸ್ಥರು ಹೊಂದಿದ್ದಾರೆ. ಅಂದ ಹಾಗೆ ರಾಜ್ಯದ ವಿವಿಧೆಡೆಗಳಲ್ಲಿಯ ಶಾಲಾ-ಕಾಲೇಜು ಗಳಲ್ಲಿ ಈ ಗ್ರಾಮದ ಸುಮಾರು 500 ಜನರು ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಗ್ರಾಮದಲ್ಲಿ ನಾಲ್ಕು ಸರಕಾರಿ ಪ್ರಾಥಮಿಕ ಶಾಲೆಗಳು ಮತ್ತು ಒಂದು ಖಾಸಗಿ ಪ್ರೌಢಶಾಲೆ ಇವೆ. ರಜೆಯಲ್ಲಿ ಗ್ರಾಮಕ್ಕೆ ಮರಳುವ ಯೋಧರು ಮತ್ತು ನಿವೃತ್ತ ಯೋಧರನ್ನು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಉತ್ಸವಗಳಿಗೆ ಅತಿಥಿಗಳಾಗಿ ಆಹ್ವಾನಿಸುವ ಪರಿಪಾಠವನ್ನು ನಾವು ಬೆಳೆಸಿಕೊಂಡಿದ್ದೇವೆ ಎಂದು ಸರಕಾರಿ ಮಾದರಿ ಶಾಲೆಯ ಮುಖ್ಯೋಪಾಧ್ಯಾಯ ಆರ್.ಆರ್.ತೋರಣಗಟ್ಟಿ ಹೇಳಿದರು.

ನೇಗಿನಹಾಳ ಪುಟ್ಟಗ್ರಾಮವಾಗಿದ್ದರೂ ನಾವು ಹಲವಾರು ಜವಾಬ್ದಾರಿಯುತ ಪ್ರಜೆಗಳನ್ನು ಈ ದೇಶಕ್ಕೆ ನೀಡಿದ್ದೇವೆ. ನಮ್ಮ ಗ್ರಾಮವನ್ನು ‘ಯೋಧರ ಗ್ರಾಮ’ಎಂದು ಜನರು ಕರೆಯುವಾಗ ನಮಗೆ ಹೆಮ್ಮೆಯುಂಟಾಗುತ್ತದೆ. ಇಲ್ಲಿಯ ಹೆಚ್ಚುಕಡಿಮೆ ಎಲ್ಲ ಮನೆಗಳಲ್ಲಿ ಓರ್ವ ಯೋಧ ಅಥವಾ ಶಿಕ್ಷಕ ನಿಮಗೆ ಸಿಕ್ಕೇ ಸಿಗುತ್ತಾನೆ ಎಂದು ಯೋಧ ರಮೇಶ ಪೂಜಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X