Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೂರ್ವ,ಈಶಾನ್ಯ ರಾಜ್ಯಗಳಲ್ಲಿ ನೆರೆ...

ಪೂರ್ವ,ಈಶಾನ್ಯ ರಾಜ್ಯಗಳಲ್ಲಿ ನೆರೆ ಪ್ರಕೋಪ,ರೈಲು ಸಂಪರ್ಕ ಕಡಿತ

ವಾರ್ತಾಭಾರತಿವಾರ್ತಾಭಾರತಿ15 Aug 2017 7:38 PM IST
share
ಪೂರ್ವ,ಈಶಾನ್ಯ ರಾಜ್ಯಗಳಲ್ಲಿ ನೆರೆ ಪ್ರಕೋಪ,ರೈಲು ಸಂಪರ್ಕ ಕಡಿತ

ಹೊಸದಿಲ್ಲಿ,ಆ.15: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಯಿಂದಾಗಿ ಬಿಹಾರದಲ್ಲಿ ಭೀಕರ ನೆರೆಯುಂಟಾಗಿದ್ದು, ಈವರೆಗೆ 45 ಜನರು ಸಾವನ್ನಪ್ಪಿ ದ್ದಾರೆ ಮತ್ತು 65.37 ಲಕ್ಷ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಸ್ಸಾಂ ಮತ್ತು ಉತ್ತರ ಬಂಗಾಳಗಳಲ್ಲಿ ಹಲವಾರು ಪ್ರದೇಶಗಳು ನೆರೆನೀರಿನಲ್ಲಿ ಮುಳುಗಿದ್ದು, ಜನಜೀವನವು ಅಸ್ತವ್ಯಸ್ತಗೊಂಡಿದೆ. ಈಶಾನ್ಯ ಭಾರತಕ್ಕೆ ರೈಲು ಸಂಪರ್ಕ ಕಡಿತಗೊಂಡಿದ

ಉತ್ತರಾಖಂಡದ ಪಿಥೋಡಗಡ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಮೇಘಸ್ಫೋಟದ ಘಟನೆಗಳಲ್ಲಿ ಆರು ಜನರು ಸಾವನ್ನಪ್ಪಿದ್ದು, ಆರು ಸೇನಾ ಸಿಬ್ಬಂದಿಗಳು ಸೇರಿದಂತೆ 10 ಜನರು ನಾಪತ್ತೆಯಾಗಿದ್ದಾರೆ.

ಅಸ್ಸಾಮಿನಲ್ಲಿ ನೆರೆ ಸ್ಥಿತಿ ತೀರ ಬಿಗಡಾಯಿಸಿದ್ದು, 25 ಜಿಲ್ಲೆಗಳಲ್ಲಿಯ 32 ಲಕ್ಷ ಜನರು ಸಂಕಷ್ಟದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಇಲ್ಲಿ ಇನ್ನೂ ಮೂವರು ಬಲಿಯಾಗುವುದರೊಂದಿಗೆ ರಾಜ್ಯದಲ್ಲಿ ಎರಡನೇ ಬಾರಿಗೆ ಉಂಟಾಗಿರುವ ನೆರೆಗೆ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿದೆ. ಅರುಣಾಚಲ ಪ್ರದೇಶದಲ್ಲಿಯೂ ಹಲವಾರು ಜಿಲ್ಲೆಗಳಲ್ಲಿ ನೆರೆ ಸ್ಥಿತಿ ಗಂಭೀರವಾಗಿ ಮುಂದುವರಿದಿದ್ದು, ಆಗಾಗ್ಗೆ ಸಂಭವಿಸುತ್ತಿರುವ ಭೂಕುಸಿತಗಳಿಂದಾಗಿ ರಸ್ತೆ ಸಂಚಾರದಲ್ಲಿ ವ್ಯತ್ಯಯವುಂಟಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂ ಮತ್ತು ಬಿಹಾರಗಳ ಮುಖ್ಯಮಂತ್ರಿ ಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಕೇಂದ್ರದಿಂದ ಸಂಪೂರ್ಣ ಬೆಂಬಲದ ಭರವಸೆಯನ್ನು ನೀಡಿದ್ದಾರೆ.

ಬಿಹಾರದ ವಿವಿಧ ನೆರೆಪೀಡಿತ ಜಿಲ್ಲೆಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಗಳಿಗಾಗಿ ಸೇನೆ, ವಾಯುಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ನ ಪ್ರತ್ಯೇಕ ತಂಡಗಳನ್ನು ನಿಯೋಜಿಸಲಾಗಿದೆ. ಕಿಷನ್‌ಗಂಜ್ ರೈಲ್ವೆ ನಿಲ್ದಾಣದಲ್ಲಿ ಹಳಿಗಳ ಮೇಲೆ ನೀರು ನಿಂತಿರುವುದರಿಂದ ಹೊಸದಿಲ್ಲಿ-ಗುವಾಹಟಿ ರಾಜಧಾನಿ ಎಕ್ಸ್‌ಪ್ರೆಸ್ ಸೇರಿದಂತೆ ಕನಿಷ್ಠ 17 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಅತ್ತ ಅಸ್ಸಾಮಿನಲ್ಲಿ ಈ ವರ್ಷ ನೆರೆಗೆ ಬಲಿಯಾದವರ ಸಂಖ್ಯೆ 102ಕ್ಕೇರಿದೆ. 21 ಜಿಲ್ಲೆಗಳಲ್ಲಿ ಸುಮಾರು 22.5 ಲ.ಜನರು ನೆರೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉತ್ತರ ಬಂಗಾಳದ ಗಂಗಾರಾಮಪುರ ಪ್ರದೇಶದಲ್ಲಿ ಸೋಮವಾರ ಮಣ್ಣಿನ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಇಡೀ ಪ್ರದೇಶದಲ್ಲಿ ನೆರೆ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ.

ಉತ್ತರ ಬಂಗಾಲದಿಂದ ಹಾದು ಹೋಗುವ, ಈಶಾನ್ಯ ಭಾರತವನ್ನು ಶೇಷ ಭಾರತದೊಂದಿಗೆ ಸಂಪರ್ಕಿಸುವ ರೈಲು ಸೇವೆಗಳನ್ನು ನೆರೆಯಿಂದಾಗಿ ಬುಧವಾರದವರೆಗೆ ಅಮಾನತುಗೊಳಿಸಲಾಗಿದೆ.

 ರೈಲ್ವೆ ಹಳಿಗಳು ನೀರಿನಲ್ಲಿ ಮುಳುಗಿರುವುದರಿಂದ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೀರು ತುಂಬಿರುವುದರಿಂದ ಕೋಲ್ಕತಾದಿಂದ ಉ.ಬಂಗಾಳಕ್ಕೆ ರೈಲು ಮತು ಬಸ್ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಫಲಾಕತಾ ಮತ್ತು ಅಲಿಪುರ್ದ್ವಾರ್‌ಗಳನ್ನು ಸಂಪರ್ಕಿಸುವ 32 ಡಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಮುಖ ಸೇತುವೆಯೊಂದು ನೆರೆನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X