Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉ.ಕೊರಿಯದಿಂದ ಆಮದು ಪ್ರಕ್ರಿಯೆ...

ಉ.ಕೊರಿಯದಿಂದ ಆಮದು ಪ್ರಕ್ರಿಯೆ ಸ್ಥಗಿತಗೊಳಿಸಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ15 Aug 2017 8:00 PM IST
share
  • ಉ.ಕೊರಿಯದಿಂದ ಆಮದು ಪ್ರಕ್ರಿಯೆ ಸ್ಥಗಿತಗೊಳಿಸಿದ ಚೀನಾ
  • ಉ.ಕೊರಿಯದಿಂದ ಆಮದು ಪ್ರಕ್ರಿಯೆ ಸ್ಥಗಿತಗೊಳಿಸಿದ ಚೀನಾ

ಬೀಜಿಂಗ್, ಆ.15: ಉತ್ತರಕೊರಿಯಾದ ಮೇಲೆ ವಿಶ್ವಸಂಸ್ಥೆ ಹೊಸದಾಗಿ ವಿಧಿಸಿರುವ ನಿರ್ಬಂಧದ ಹಿನ್ನೆಲೆಯಲ್ಲಿ ಆ ದೇಶದಿಂದ ಪ್ರಮುಖ ವಷ್ತುಗಳನ್ನು ಆಮದು ಮಾಡಿಕೊಳ್ಳುತ್ತಿರುವ ಪ್ರಕ್ರಿಯೆಯನ್ನು ಚೀನಾ ಸ್ಥಗಿತಗೊಳಿಸಿದೆ. ಕಲ್ಲಿದ್ದಲು, ಕಬ್ಬಿಣ, ಕಬ್ಬಿಣದ ಅದಿರು, ಸಾಗರಖಾದ್ಯ ವಸ್ತುಗಳನ್ನು ತನ್ನ ಮಿತ್ರರಾಷ್ಟ ಉ.ಕೊರಿಯದಿಂದ ಚೀನಾ ಆಮದು ಮಾಡಿಕೊಳ್ಳುತ್ತಿತ್ತು.

 ಉತ್ತರ ಕೊರಿಯ ಮತ್ತು ಅಮೆರಿಕದ ಮಧ್ಯೆ ಉದ್ವಿಗ್ನತೆಯ ಸ್ಥಿತಿ ಹೆಚ್ಚುತ್ತಿರುವಂತೆಯೇ ಚೀನಾ ಕೈಗೊಂಡಿರುವ ಕ್ರಮ ಗಮನಾರ್ಹವಾಗಿದೆ. ವಿಶ್ವಸಂಸ್ಥೆ ಹೊಸದಾಗಿ ವಿಧಿಸಿರುವ ನಿರ್ಬಂಧದ ಅನುಸಾರ ಉತ್ತರ ಕೊರಿಯದಿಂದ ಕಲ್ಲಿದ್ದಲು, ಕಬ್ಬಿಣ, ಕಬ್ಬಿಣದ ಅದಿರು ಮತ್ತು ಸಾಗರಖಾದ್ಯ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಚೀನಾದ ವಾಣಿಜ್ಯ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕಳೆದ ತಿಂಗಳು ಉ.ಕೊರಿಯ ಎರಡು ಖಂಡಾಂತರ ಕ್ಷಿಪಣಿಗಳ ಪರೀಕ್ಷೆ ನಡೆಸಿದ ಬಳಿಕ ಆ ದೇಶದ ಮೇಲೆ ವಿಶ್ವಸಂಸ್ಥೆ ನಿರ್ಬಂಧ ವಿಧಿಸಿತ್ತು. ಉ.ಕೊರಿಯಾವು ತನ್ನ ಆರ್ಥಿಕತೆಯ ಉಳಿವಿಗೆ ಚೀನಾವನ್ನು ಬಹುತೇಕ ಅವಲಂಬಿಸಿದ್ದು ಆ ದೇಶದ ಬಗ್ಗೆ ಚೀನಾ ಮೃದುಧೋರಣೆ ತಳೆದಿದೆ ಎಂದು ಅಮೆರಿಕ ಟೀಕಿಸಿತ್ತು.

 ಈ ಮಧ್ಯೆ ಚೀನಾದ ವಿದೇಶ ವ್ಯವಹಾರ ಇಲಾಖೆಯ ಸಹಾಯಕ ಸಚಿವ ಕಾಂಗ್ ಕ್ಸುನಾಯು ಅವರನ್ನು ಕೊರಿಯ ಪರ್ಯಾಯ ದ್ವೀಪಪ್ರದೇಶಕ್ಕೆ ವಿಶೇಷ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ವು ದವೆಯ್ ಅವರನ್ನು ತೆರವುಗೊಳಿಸಿ ಈ ನೇಮಕ ನಡೆಸಲಾಗಿದೆ. ಕೊರಿಯ ಬುಡಕಟ್ಟು ಜನಾಂಗಕ್ಕೆ ಸೇರಿರುವ ಕಾಂಗ್ ಇದುವರೆಗೆ ವಿದೇಶ ಸಚಿವಾಲಯದಲ್ಲಿ ಏಶ್ಯನ್ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈ ನೇಮಕಾತಿಗೂ ಕೊರಿಯ ದ್ವೀಪ ಪ್ರದೇಶದಲ್ಲಿ ತಲೆದೋರಿರುವ ಉದ್ವಿಗ್ನತೆಯ ಸ್ಥಿತಿಗೂ ಯಾವುದೇ ಸಂಬಂಧವಿಲ್ಲ ಎಂದು ಚೀನಾದ ವಿದೇಶ ವ್ಯವಹಾರ ಇಲಾಖೆಯ ವಕ್ತಾರ ಹುವ ಚುನ್‌ಯಿಂಗ್ ಹೇಳಿದ್ದಾರೆ. ಕೊರಿಯ ಪರ್ಯಾಯದ್ವೀಪದ ಬಗೆಗಿನ ಚೀನಾದ ಧೋರಣೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X