Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಸೇನಾನೆಲೆಯ ಮೇಲೆ ಆಕ್ರಮಣ:...

ಅಮೆರಿಕದ ಸೇನಾನೆಲೆಯ ಮೇಲೆ ಆಕ್ರಮಣ: ಉ.ಕೊರಿಯ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ15 Aug 2017 8:07 PM IST
share
ಅಮೆರಿಕದ ಸೇನಾನೆಲೆಯ ಮೇಲೆ ಆಕ್ರಮಣ: ಉ.ಕೊರಿಯ ಬೆದರಿಕೆ

ವಾಷಿಂಗ್ ಟನ್, ಆ.15: ಅಮೆರಿಕದ ಸೇನಾ ನೆಲೆಯನ್ನು ಹೊಂದಿರುವ ಗುವಾಮ್ ಪ್ರದೇಶದ ಮೇಲೆ ಆಕ್ರಮಣ ನಡೆಸುವುದಾಗಿ ಉತ್ತರಕೊರಿಯಾ ಬೆದರಿಸಿರುವಂತೆಯೇ ಇದೀಗ ಮೂರನೇ ಮಹಾಯುದ್ದ ತಪ್ಪಿಸುವ ಎಲ್ಲಾ ಆಯ್ಕೆಗಳೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿದೆ ಎಂದು ಅಮೆರಿಕದ ಉಪಾಧ್ಯಕ್ಷ ಮೈಕ್ ಪೆನ್ಸ್ ಹೇಳಿದ್ದಾರೆ.

ಈ ಮಧ್ಯೆ, ಗುವಾಮ್ ಮೇಲೆ ಪ್ರಕ್ಷೇಪಕ ಕ್ಷಿಪಣಿ ದಾಳಿ ನಡೆಸಿದರೆ ಉಂಟಾಗುವ ಸಂಕೀರ್ಣ ಪರಿಣಾಮದ ಕುರಿತು ಉತ್ತರ ಕೊರಿಯದ ಅಧ್ಯಕ್ಷ ಕಿಮ್ ಜೊಂಗ್-ಉನ್ ತಮ್ಮ ರಾಜಕೀಯ ಸಲಹೆಗಾರರೊಂದಿಗೆ ಸುದೀರ್ಘ ಮಾತುಕತೆ ನಡೆಸಿರುವುದಾಗಿ ವರದಿಯಾಗಿದೆ. ಉ.ಕೊರಿಯದ ಅಧ್ಯಕ್ಷರು ಅಮೆರಿಕದ ಪ್ರದೇಶಕ್ಕೆ ದಾಳಿ ನಡೆಸುವ ಯೋಜನೆಯನ್ನು ಪುನರ್ಪರಿಶೀಲಿಸಿದ್ದು, ಟ್ರಂಪ್ ಅವರ ಮುಂದಿನ ನಡೆಯನ್ನು ಗಮನಿಸಿ ಮುಂದಡಿ ಇಡಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

 ಉಭಯ ದೇಶಗಳ ಮಧ್ಯೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಹೇಳಿಕೆ ನೀಡಿರುವ ಟ್ರಂಪ್, ಅಮೆರಿಕದ ಮೇಲೆ ನಡೆಯುವ ಯಾವುದೇ ಆಕ್ರಮಣಕ್ಕೂ ‘ಕಿಚ್ಚು ಮತ್ತು ರೋಷದಿಂದ’ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಘೋಷಿಸಿದ್ದಾರೆ.

  ಗುವಾಮ್‌ನಲ್ಲಿ ಬೆಂಕಿ ಹಚ್ಚಲು ಉತ್ತರ ಕೊರಿಯ ಸಿದ್ಧವಾಗಿದೆ. ಆದರೆ ‘ಮೂರ್ಖ ಯಾಂಕಿಗಳು(ಅಮೆರಿಕನ್ನರು) ಏನು ಮಾಡುತ್ತಾರೆ ಎಂದು ಕಾದು ನೋಡಿ ನಾವು ಮುಂದಡಿ ಇಡುತ್ತೇವೆ ಎಂದು ಉ.ಕೊರಿಯ ತಿಳಿಸಿದೆ. ಆದರೆ ಅಮೆರಿಕ ಮೊದಲಾಗಿ ದಾಳಿ ನಡೆಸುವ ಸಾಧ್ಯತೆ ತಳ್ಳಿ ಹಾಕಲಾಗದು ಎಂದಿರುವ ಉಪಾಧ್ಯಕ್ಷ ಪೆನ್ಸ್ , ‘ಎಲ್ಲಾ ಆಯ್ಕೆ’ಗಳ ಕುರಿತು ವೈಟ್‌ಹೌಸ್ ಗಮನ ಹರಿಸಲಿದೆ ಎಂದಿದ್ದಾರೆ.

  ಉತ್ತರ ಕೊರಿಯದ ವಿಷಯದಲ್ಲಿ ಅಮೆರಿಕ ಹಲವು ದಶಕಗಳಿಂದ ತಳೆದಿರುವ ‘ತಾಳ್ಮೆಯ ಧೋರಣೆ ’ ವಿಫಲವಾಗಿದೆ. ಅಮೆರಿಕದ ಆಡಳಿತವು ಮಾತುಕತೆ ಮತ್ತು ಸಂಯಮದ ವರ್ತನೆಯಿಂದ ಕೊರಿಯ ದ್ವೀಪವನ್ನು ಪರಮಾಣು ಬೆದರಿಕೆ ರಹಿತ ವಲಯವನ್ನಾಗಿಸಬೇಕೆಂಬ ದೀರ್ಘಾವಧಿಯ ಗುರಿಯನ್ನು ಹೊಂದಿತ್ತು. ಆದರೆ ಅಧ್ಯಕ್ಷ ಕಿಮ್ ಯುಗದಲ್ಲಿ ಉತ್ತರಕೊರಿಯಾ ಪ್ರಕ್ಷೇಪಕ ಕ್ಷಿಪಣಿ ಮತ್ತು ಪರಮಾಣು ಶಸ್ತ್ರದ ವಿಷಯದಲ್ಲಿ ಹಠಮಾರಿ ಧೋರಣೆ ತಳೆದಿದೆ. ಸಂಯಮದ ದಿನಗಳು ಮುಗಿದಿವೆ ಎಂದು ಅಧ್ಯಕ್ಷ ಟ್ರಂಪ್ ಈಗಾಗಲೇ ಘೋಷಿಸಿದ್ದಾರೆ . ನಾವು ಎಲ್ಲಾ ಆಯ್ಕೆಗಳ ಕುರಿತೂ ಯೋಚಿಸುತ್ತಿದ್ದೇವೆ. ಪ್ರದೇಶದಲ್ಲಿರುವ ನಮ್ಮ ಮಿತ್ರರ ನೆರವನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದು ಪೆನ್ಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X