Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಳ್ಳಂದೂರು ಕೆರೆಯಲ್ಲಿ ಭಾರೀ ನೊರೆ:...

ಬೆಳ್ಳಂದೂರು ಕೆರೆಯಲ್ಲಿ ಭಾರೀ ನೊರೆ: ಸುತ್ತ ಮುತ್ತಲ ಸಾರ್ವಜನಿಕರಿಗೆ ಆತಂಕ

ವಾರ್ತಾಭಾರತಿವಾರ್ತಾಭಾರತಿ15 Aug 2017 8:37 PM IST
share
ಬೆಳ್ಳಂದೂರು ಕೆರೆಯಲ್ಲಿ ಭಾರೀ ನೊರೆ: ಸುತ್ತ ಮುತ್ತಲ ಸಾರ್ವಜನಿಕರಿಗೆ ಆತಂಕ

ಬೆಂಗಳೂರು, ಆ. 15: ಇಂದು ಬೆಳ್ಳಂ ಬೆಳಗ್ಗೆ ಸುರಿದ ಧಾರಾಕಾರ ಮಳೆ ನಗರದಲ್ಲಿ ಭಾರೀ ಅವಾಂತರವನ್ನೆ ಸೃಷ್ಟಿಸಿದ್ದು, ಇಲ್ಲಿನ ಬೆಳ್ಳಂದೂರು ಕೆರೆಯಲಿ ನೊರೆ ಹೆಚ್ಚಾಗಿದ್ದು ಕೆರೆಯ ತಟದಲ್ಲಿರುವ ದುಗ್ಗಲಮ್ಮ ದೇವಳ ಸಂಪೂರ್ಣ ಜಲಾವೃತವಾಗಿದೆ.

ಕೆಲ ದಿನಗಳಿಂದ ಬೆಳ್ಳಂದೂರು ಕೆರೆಯಲ್ಲಿ ನೊರೆ ಉತ್ಪತ್ತಿಯ ಬಗ್ಗೆ ಸಾಕಷ್ಟು ಸುದ್ದಿಯಾಗಿತ್ತು. ಮಳೆ ಇಲ್ಲದ ಕಾರಣ ನೊರೆ ಅಷ್ಟಾಗಿ ಕಾಣಿಸಿರಲಿಲ್ಲ. ಆದರೆ ಇಂದು ಬೆಳಗಿನಜಾವ ಸುರಿದ ಧಾರಾಕಾರ ಮಳೆಯಿಂದ ಕೆರೆಗೆ ನೀರಿನ ಪ್ರಮಾಣ ಹೆಚ್ಚಾಗಿ ನೊರೆಯ ಪ್ರಮಾಣ ಮಿತಿ ಮೀರಿದೆ.

ಇದರಿಂದ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಶಿ ರಾಶಿ ನೊರೆ ಆವೃತಗೊಂಡಿರುವುದರಿಂದ ನೀರು ಕಾಣದೆ ನೊರೆ ಪರ್ವತವೇ ಸೃಷ್ಟಿಯಾಗಿದ್ದು, ಆ ಭಾಗದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಗಾಳಿ ಬಂದರೆ ವಾಹನ ಸವಾರರು ಮತ್ತು ಪಾದಚಾರಿಗಳ ಮೈಮೇಲೆ ಬೀಳುವ ನೊರೆಯಿಂದ ಕಿರಿಕಿರಿ ಅನುಭವಿಸುವಂತಾಗಿದೆ. ಹಸಿರು ನ್ಯಾಯಾಧೀಕರಣ ಪೀಠ ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ್ದ ನಂತರ ಎಚ್ಚೆತ್ತುಕೊಂಡು ಕೆರೆಯ ಶುದ್ಧೀಕರಣಕ್ಕೆ ಮುಂದಾಗಿತ್ತು. ಆ ನಿಟ್ಟಿನಲ್ಲಿ ಕೆರೆಯ ತಟದಲ್ಲಿದ್ದ ಕೆಲ ಕಾರ್ಖಾನೆಗಳಿಗೆ ಬೀಗ ಹಾಕಲಾಗಿತ್ತು.

ಆದರೆ, ಕೆರೆಗೆ ಬಿಡುತ್ತಿರುವ ಕಲುಷಿತ ನೀರಿನ ಶುದ್ಧೀಕರಣ ಮಾಡದ ಹಿನ್ನೆಲೆಯಲ್ಲಿ ನೊರೆ ಸಮಸ್ಯೆ ಸೃಷ್ಟಿಯಾಗಿದ್ದು, ಇದೀಗ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ. ಗಾಳಿಗೆ ನೊರೆ ತೇಲಾಡುತ್ತಾ ಸುತ್ತಮುತ್ತಲ ಮನೆಗಳಿಗೆ ಬರುವುದರಿಂದ ಆಗುವ ಅನಾಹುತ ಅಷ್ಟಿಷ್ಟಲ್ಲ. ಚರ್ಮದ ಕಾಯಿಲೆ, ಊರಿ ಊತ, ಕಣ್ಣಿನ ಸೋಂಕು ಸೇರಿದಂತೆ ಡೆಂಗ್ಯೂ ಮಲೇರಿಯಾದಂತ ಮಾರಣಾಂತಿಕ ಕಾಯಿಲೆಗಳ ಭೀತಿಯಲ್ಲಿ ಆ ಭಾಗದ ಜನರು ಬದುಕಬೇಕಾದ ದುಸ್ಥಿತಿ ಬಂದಿದೆ.

‘ನಗರದಲ್ಲಿ ಒಂದು ರಾತ್ರಿ ಸುರಿದ ಮಳೆಗೆ ಕೆರೆಯ ತಟದಲ್ಲಿರುವ ದುಗ್ಗಲಮ್ಮ ದೇವಳ ಪೂರ್ಣ ಜಲಾವೃತವಾಗಿದೆ. ಪ್ರತಿ ಮಳೆಗಾಲದಲ್ಲಿಯೂ ಈ ದೇವಾಲಯಕ್ಕೆ ಮಳೆ ನೀರು ನುಗ್ಗುವುದು ಸಹಜ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದರೂ, ಪ್ರಯೋಜನವಾಗಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ನೀರು ನುಗ್ಗುವುದನ್ನು ತಪ್ಪಿಸಿ, ನೊರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು’

-ಯಮಲೂರು ವೆಂಕಟೇಶ್ ಸ್ಥಳೀಯ ನಿವಾಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X