‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಏನಾಯಿತು’
ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬೆಂಗಳೂರು, ಆ.16: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ರೈತ ವಿರೋಧಿಯಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಈಡೇರಿಸದೇ ಜನರನ್ನು ವಂಚಿಸಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನಗರದ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಾಹುಲ್ ಮಾತನಾಡುತ್ತಿದ್ದರು.
"45 ನಿಮಿಷಗಳಲ್ಲಿ ಕೊನೆಗೊಂಡಿರುವ ಪ್ರಧಾನಿಯವರ ಸ್ವಾತಂತ್ರೋತ್ಸವ ಭಾಷಣದಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡಿಲ್ಲ. ಸಿದ್ದರಾಮಯ್ಯ 30,000 ಉದ್ಯೋಗ ಸೃಷ್ಟಿಸಿದ್ದಾರೆ. ನಾವು ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಪಂಜಾಬ್ನಲ್ಲಿ ಅಧಿಕಾರಕ್ಕೇರಿದ ತಕ್ಷಣವೇ ರೈತರ ಸಾಲ ಮನ್ನಾ ಮಾಡಿದ್ದೇವೆ. ಆದರೆ, ಕೇಂದ್ರ ವಿತ್ತ ಸಚಿವರಾದ ಅರುಣ್ ಜೇಟ್ಲಿ ರೈತರ ಸಾಲ ಮನ್ನಾ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಎನ್ಡಿಎ ರೈತ ವಿರೋಧಿ'' ಎಂದು ರಾಹುಲ್ ಆರೋಪಿಸಿದರು.
Next Story