Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2015ರಲ್ಲಿ ಭಾರತದಲ್ಲಿ ಪ್ರತಿ ನಿಮಿಷಕ್ಕೆ...

2015ರಲ್ಲಿ ಭಾರತದಲ್ಲಿ ಪ್ರತಿ ನಿಮಿಷಕ್ಕೆ 5 ವರ್ಷಕ್ಕಿಂತ ಕೆಳಗಿನ ಇಬ್ಬರು ಮಕ್ಕಳು ಸಾವು

ವಾರ್ತಾಭಾರತಿವಾರ್ತಾಭಾರತಿ16 Aug 2017 9:22 PM IST
share
2015ರಲ್ಲಿ ಭಾರತದಲ್ಲಿ ಪ್ರತಿ ನಿಮಿಷಕ್ಕೆ 5 ವರ್ಷಕ್ಕಿಂತ ಕೆಳಗಿನ ಇಬ್ಬರು ಮಕ್ಕಳು ಸಾವು

ಹೊಸದಿಲ್ಲಿ, ಆ. 16: 2015ರಲ್ಲಿ 5 ವರ್ಷಕ್ಕಿಂತ ಕೆಳಗಿನ ಸುಮಾರು 1.08 ದಶಲಕ್ಷ ಭಾರತೀಯ ಮಕ್ಕಳು ಮೃತಪಟ್ಟಿದ್ದಾರೆ. ಪ್ರತಿ ದಿನ 2,959 ಮಕ್ಕಳು ಅಥವಾ ಪ್ರತಿ ನಿಮಿಷಕ್ಕೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದುರಾದೃಷ್ಟವೆಂದರೆ ಇದರಲ್ಲಿ ಹೆಚ್ಚಿನ ಮಕ್ಕಳ ಸಾವು ಸಂಭವಿಸಿರುವುದು ತಡೆಯಬಹುದಾದ ಹಾಗೂ ಚಿಕಿತ್ಸೆ ನೀಡಬಹುದಾದ ರೋಗಗಳಿಂದ.ಒಂದು ನಿರ್ದಿಷ್ಟ ವರ್ಷದಲ್ಲಿ ಜನಿಸುವ ಶಿಶು ಐದು ವರ್ಷ ಆಗುವ ಮುನ್ನವೇ ಸಾವನ್ನಪ್ಪುತ್ತದೆ. ಇದರಂತೆ 2015ರಲ್ಲಿ 1,000 ಸಜೀವ ಜನನಕ್ಕೆ 43 ಸಾವು ಸಂಭವಿಸಿದೆ ಎಂದು ಮಾದರಿ ನೋಂದಣಿ ವ್ಯವಸ್ಥೆ ಅಂಕಿ-ಅಂಶ ವರದಿ 2015ರ ಇತ್ತೀಚೆಗಿನ ಅಂಕಿ-ಅಂಶ ತಿಳಿಸಿದೆ.

ಶಿಶು ಮರಣ ಪ್ರಮಾಣ ದೇಶದ ಸ್ಥಿತಿ ಹಾಗೂ ಭವಿಷ್ಯದ ಆರೋಗ್ಯವನ್ನು ಸೂಚಿಸುತ್ತದೆ. ಯಾಕೆಂದರೆ, ಶಿಶು ಮರಣ ಪ್ರಮಾಣ ಜನಸಂಖ್ಯೆಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. 2015-16ರಲ್ಲಿ ಭಾರತದ ಆರ್ಥಿಕತೆಯ ಪ್ರಗತಿ ಕಳೆದ 5 ವರ್ಷಗಳ ಬೆಳವಣಿಗೆ ಪ್ರಮಾಣದಲ್ಲೇ ಅತ್ಯುತ್ತಮ ಅಂದರೆ ಶೇ. 7.6ಕ್ಕೆ ಏರಿತ್ತು. ಆದರೆ, 2015ರಲ್ಲಿ 5 ವರ್ಷಕ್ಕಿಂತ ಕೆಳಗಿನ ಮಕ್ಕಳ ಮರಣ ಪ್ರಮಾಣ 43 ಆಗಿದ್ದು, ಇದು ಬ್ರಿಕ್ಸ್ ದೇಶಗಳಲ್ಲಿ ಅತೀ ಹೆಚ್ಚಾಗಿತ್ತು ಹಾಗೂ ದಕ್ಷಿಣ ಏಶ್ಯದಲ್ಲಿ ಮೂರನೇ ಸ್ಥಾನ ಪಡೆದಿತ್ತು. ಭಾರತದ ಕೆಲವು ರಾಜ್ಯಗಳಾದ ಅಸ್ಸಾಂ, ಮಧ್ಯಪ್ರದೇಶದಲ್ಲಿ 5 ವರ್ಷಕ್ಕಿಂತ ಕೆಳಗಿನ ಪ್ರಾಯದ ಮಕ್ಕಳ ಮರಣ ಪ್ರಮಾಣ ಆಫ್ರಿಕಾದ ಘಾನಕ್ಕಿಂತಲೂ ಕೆಳ ಮಟ್ಟದಲ್ಲಿದೆ.

ಶಿಶು ಸಂದರ್ಭದ ಸಮಸ್ಯೆಗಳಿಂದ ಶೇ. 53, ನ್ಯುಮೋನಿಯಾದಿಂದ ಶೇ. 15, ಅತಿಸಾರದಿಂದ ಶೇ. 12, ದಡಾರದಿಂದ ಶೇ. 3 ಹಾಗೂ ಗಾಯಗಳಿಂದ ಶೇ. 3 ಐದು ವರ್ಷದ ಒಳಗಿನ ಮಕ್ಕಳು ಸಾವನಪ್ಪಿದ್ದಾರೆ ಎಂದು ಜಾಗತಿಕ ಆರೋಗ್ಯ ಸಂಘಟನೆಯ 2012ರ ಅಂಕಿ-ಅಂಶ ಆಧರಿಸಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣದ ವಾರ್ಷಿಕ ವರದಿ 2016-17 ಹೇಳಿದೆ. ಮೂರನೇ ಒಂದಕ್ಕಿಂತಲೂ ಹೆಚ್ಚು ಶಿಶುಗಳು ಮೊದಲ ತಿಂಗಳಲ್ಲೇ ಸಾವನ್ನಪ್ಪುತ್ತವೆ. ಇದರಲ್ಲಿ ಶೇ. 90ರಷ್ಟು ಮಕ್ಕಳ ಸಾವು ಸಂಭವಿಸುವುದು ತಡೆಗಟ್ಟಬಹುದಾದ ರೋಗಗಳಾದ ನ್ಯುಮೋನಿಯಾ ಹಾಗೂ ಅತಿಸಾರದಿಂದ ಎಂದು ಸೇವ್ದ ಚಿಲ್ಡ್ರನ್ ಸಂಸ್ಥೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X