Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂವಿಧಾನದ 370ನೇ ವಿಧಿಯನ್ನು...

ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲು ಕೇಂದ್ರ ಸರಕಾರ ಸಿದ್ಧವಿದೆಯೇ?

ಪ್ರಧಾನಿ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ16 Aug 2017 9:49 PM IST
share
ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲು ಕೇಂದ್ರ ಸರಕಾರ ಸಿದ್ಧವಿದೆಯೇ?

ಮುಂಬೈ, ಆ.16: ಕಾಶ್ಮೀರ ರಾಜ್ಯಕ್ಕೆ ನೀಡಲಾಗಿರುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದರೆ ದೇಶದಾದ್ಯಂತದ ಜನರು ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿಯ ಜನರನ್ನು ಹಾರ್ದಿಕವಾಗಿ ಆಲಂಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಕೇಂದ್ರ ಸರಕಾರ ಮೊದಲು ಈ ಕಾರ್ಯ ಮಾಡಲು ಸಿದ್ಧವಿದೆಯೇ ಎಂದು ಶಿವಸೇನೆ ಸವಾಲು ಹಾಕಿದೆ.

 ದಿಲ್ಲಿಯ ಕೆಂಪುಕೋಟೆಯ ವೇದಿಕೆಯ ಮೇಲಿಂದ ಮಾಡಿದ ಸ್ವಾತಂತ್ರೋತ್ಸವ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ- ಕಾಶ್ಮೀರ ಸಮಸ್ಯೆಯನ್ನು ಗೋಲಿ(ಬುಲೆಟ್) ಅಥವಾ ಗಾಲಿ(ಪರಸ್ಪರ ನಿಂದನೆ) ಯಿಂದ ಪರಿಹರಿಸಲು ಸಾಧ್ಯವಿಲ್ಲ. ಕಾಶ್ಮೀರದ ಪ್ರತಿಯೊಬ್ಬ ನಾಗರಿಕನನ್ನೂ ಹಾರ್ದಿಕವಾಗಿ ಆಲಿಂಗಿಸಿಕೊಂಡು ಮಿತೃತ್ವದ ಸಂದೇಶ ನೀಡಿದಾಗ ಮಾತ್ರ ಈ ಸಮಸ್ಯೆ ಪರಿಹಾರವಾಗಬಹುದು ಎಂದು ಹೇಳಿದ್ದರು.

   ಈ ಹೇಳಿಕೆಯ ಬಗ್ಗೆ ಶಿವಸೇನೆಯ ಮುಖವಾಣಿ ‘ಸಾಮ್ನ’ದಲ್ಲಿ ಪ್ರತಿಕ್ರಿಯೆ ನೀಡಲಾಗಿದೆ. ಈ ಅದ್ಭುತ ಚಿಂತನೆ ಇದುವರೆಗೆ ಯಾರೊಬ್ಬರಿಗೂ ಯಾಕೆ ಹೊಳೆದಿಲ್ಲ ಎಂಬುದೇ ಅಚ್ಚರಿಯಾಗಿದೆ. ಈಗ ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಬೇಕಿದ್ದರೆ ಮೊದಲು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಬೇಕಿದೆ. ಆಗ ದೇಶದಾದ್ಯಂತದ ಜನಪ್ರವಾಹವೇ ಕಾಶ್ಮೀರದತ್ತ ನುಗ್ಗಿ ಅಲ್ಲಿಯ ಜನರನ್ನು ಸ್ನೇಹದಿಂದ ಆಲಿಂಗಿಸಿಕೊಳ್ಳಬಹುದು ಎಂದು ಸಂಪಾದಕೀಯ ಬರಹದಲ್ಲಿ ಹೇಳಲಾಗಿದೆ. ನಂಬಿಕೆಯ ಹೆಸರಲ್ಲಿ ದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು ಇದರಿಂದ ಮುಸ್ಲಿಮರಷ್ಟೇ ಅಲ್ಲ, ಹಿಂದೂಗಳೂ ಹೆದರಿದ್ದಾರೆ . ಗೋರಕ್ಷಣೆಯ ಹೆಸರಲ್ಲಿ ಹಿಂದೂ ಸಮುದಾಯದ ಕೆಲವು ಸಂಘಟನೆ ತೀವ್ರವಾದಿಗಳಾಗಿ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಅವರನ್ನು ಕೇವಲ ಎಚ್ಚರಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಬರೆಯಲಾಗಿದೆ.

ನೋಟು ಅಮಾನ್ಯೀಕರಣ ಪ್ರಕ್ರಿಯೆ ಹಾಗೂ ಜಿಎಸ್‌ಟಿ ಜಾರಿಯ ವಿಷಯದಲ್ಲಿ ಸರಕಾರ ಅತ್ಯಂತ ನಿಷ್ಟುರವಾಗಿ ನಡೆದುಕೊಂಡಿದೆ. ಆದರೆ ವಂದೇಮಾತರಂ ಹಾಡುವುದನ್ನು ನಿರಾಕರಿಸಿರುವವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಲು ಏಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿರುವ ಶಿವಸೇನೆ, ವಿದೇಶದ ಬ್ಯಾಂಕ್‌ಗಳಿಂದ ಕಪ್ಪುಹಣವನ್ನು ವಾಪಾಸು ತಂದು ಪ್ರತಿಯೊಬ್ಬ ಪ್ರಜೆಯ ಬ್ಯಾಂಕ್ ಖಾತೆಯಲ್ಲಿ ತಲಾ 15 ಲಕ್ಷ ರೂ. ಜಮೆ ಮಾಡುವ ಪ್ರಧಾನಿಯ ಘೋಷಣೆ ಮುಂದಿನ ಎರಡು ವರ್ಷದಲ್ಲಿ ಜಾರಿಗೆ ಬರಬಹುದು ಎಂದು ನಿರೀಕ್ಷಿಸುವುದಾಗಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X