ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಸಂತಾನಹರಣ ಶಸ್ತ್ರ ಚಿಕಿತ್ಸೆ
ಮಂಗಳೂರು, ಆ.16: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕುಟುಂಬ ಕಲ್ಯಾಣ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಪಿಎಲ್ ಪಡಿತರ ಚೀಟಿದಾರರು, ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬದವರಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿರುತ್ತದೆ.
ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ಯೆನೆಪೊಯ ಮೆಡಿಕಲ್ ಕಾಲೇಜು, ಕಣಚೂರು ಆಸ್ಪತ್ರೆ, ಅತ್ತಾವರ ಕೆಎಂಸಿ ಆಸ್ಪತ್ರೆ, ಶ್ರೀನಿವಾಸ ಆಸ್ಪತ್ರೆಯ ವೈದ್ಯಕೀಯ ಕಾಲೇಜುಗಳ ಜೊತೆ ಇಲಾಖೆಯು ಒಡಂಬಡಿಕೆ ಮಾಡಿಕೊಂಡಿದೆ. ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಪ್ರಕಟನೆ ತಿಳಿಸಿದೆ.
Next Story