Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರ್ಯಾಣದಲ್ಲಿ ಮಿತಿಮೀರಿದ ಬೀದಿ ದನಗಳ ಕಾಟ

ಹರ್ಯಾಣದಲ್ಲಿ ಮಿತಿಮೀರಿದ ಬೀದಿ ದನಗಳ ಕಾಟ

ಗಡುವು ನೀಡಿ ಕೈತೊಳೆದುಕೊಂಡ ಸರಕಾರ

ವಾರ್ತಾಭಾರತಿವಾರ್ತಾಭಾರತಿ16 Aug 2017 10:48 PM IST
share
ಹರ್ಯಾಣದಲ್ಲಿ ಮಿತಿಮೀರಿದ ಬೀದಿ ದನಗಳ ಕಾಟ

ಹರ್ಯಾಣ, ಆ.16: ಆಗಸ್ಟ್ 15ರೊಳಗೆ ಹರ್ಯಾಣ ರಾಜ್ಯವನ್ನು ಬೀದಿ ದನಗಳಿಂದ (ಬೀದಿಯಲ್ಲಿ ಅಂಡಲೆಯುವ ದನಗಳು) ಮುಕ್ತಗೊಳಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಹಾಗೂ ‘ಗೋಸೇವಾ ಆಯೋಗ’ದ ಅಧ್ಯಕ್ಷ ಭನಿರಾಮ್ ಮಂಗ್ಲ ಘೋಷಿಸಿದ್ದರು. ಆದರೆ ಗಡುವು ಮುಗಿದಿದೆ. ಘೋಷಣೆ ಮಾತ್ರ ಇನ್ನೂ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದಿಲ್ಲ.

 ಸುಮಾರು 15,000 ದನಗಳು ಇನ್ನೂ ರಸ್ತೆಯಲ್ಲೇ ಅಂಡಲೆಯುತ್ತಿವೆ. ಶೇ.30ರಷ್ಟು ಕಾರ್ಯ ಮಾತ್ರ ಮುಗಿಸಲು ಸಾಧ್ಯವಾಗಿದೆ ಎಂದು ಮಂಗ್ಲ ಈಗ ಹೇಳುತ್ತಿದ್ದಾರೆ. ಒಂದು ವರ್ಷದ ಅಭಿಯಾನದ ಅವಧಿಯಲ್ಲಿ ಗೋಶಾಲೆಗೆ ಸ್ಥಳಾಂತರಿಸಲಾಗಿರುವ ಸಾವಿರಾರು ಹಸುಗಳ ಪರಿಸ್ಥಿತಿಯ ಬಗ್ಗೆ ತಮಗೆ ಬೇಸರವಿದೆ ಎನ್ನುತ್ತಾರವರು.

 ಗೋಶಾಲೆಯಲ್ಲಿ ಸ್ಥಳಾವಕಾಶದ ಕೊರತೆಯಿರುವ ಕಾರಣ ನಮ್ಮ ಕಾರ್ಯವನ್ನು ಸ್ಥಗಿತಗೊಳಿಸಬೇಕಾಗಿದೆ. ಗೋಶಾಲೆ ಈಗಾಗಲೇ ತುಂಬಿ ತುಳುಕುತ್ತಿದ್ದು, ಈ ಪರಿಸ್ಥಿತಿಯಲ್ಲಿ ಇನ್ನಷ್ಟು ಹಸುಗಳನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಬಹುದು. ಆದ್ದರಿಂದ ಗುರಿಸಾಧನೆಗೆ ಹಿನ್ನಡೆಯಾಗಿದೆ ಎಂದೂ ಅವರು ಸೇರಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಮೊದಲು ಸಾಕಷ್ಟು ಗೋಶಾಲೆ ಮತ್ತು ‘ನಂದಿ ಶಾಲೆ’ಗಳನ್ನು ರಾಜ್ಯಾದ್ಯಂತ ಆರಂಭಿಸಿ ಅಲೆಮಾರಿ ದನಗಳಿಗೆ ಸಾಕಷ್ಟು ಸ್ಥಳಾವಕಾಶ ಸೃಷ್ಟಿಸಿದ ಬಳಿಕ ಅಭಿಯಾನ ಮುಂದುವರಿಸಲು ನಿರ್ಧರಿಸಲಾಗಿದೆ ಎಂದವರು ಹೇಳಿದ್ದಾರೆ.

ಗೋಹತ್ಯೆಯನ್ನು ನಿಷೇಧಿಸಿ ಮತ್ತು ಗೋಹತ್ಯೆ ನಡೆಸಿದವರಿಗೆ ಕಠಿಣ ಶಿಕ್ಷೆ ಘೋಷಿಸಿದ ಬಳಿಕ ಹರ್ಯಾಣದಲ್ಲಿ ಅಲೆಮಾರಿ ಬೀದಿ ದನಗಳ ಹಾವಳಿ ಹೆಚ್ಚಿದೆ. ಸಾವಿರಾರು ಹಸು ಮತ್ತು ಎತ್ತುಗಳು ರಸ್ತೆಯಲ್ಲೇ ಠಿಕಾಣಿ ಹೂಡಿ ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ಸಂಚಕಾರ ತಂದೊಡ್ಡಿವೆ. ಹಾಲು ಕರೆಯದ ದನಗಳು ಹಾಗೂ ಎತ್ತುಗಳನ್ನು ಮಾರಾಟ ಮಾಡಲು ಕಾನೂನಿನ ಅಡ್ಡಿ ಇರುವ ಹಿನ್ನೆಲೆಯಲ್ಲಿ ಇಂತಹ ಜಾನುವಾರುಗಳನ್ನು ಜನರು ರಸ್ತೆಗೆ ತಂದು ಬಿಡುತ್ತಿದ್ದಾರೆ.

 ರೋಹ್ಟಕ್‌ನಲ್ಲಿ ಈ ರೀತಿಯ ಕೃತ್ಯದಲ್ಲಿ ತೊಡಗಿರುವವರಿಗೆ 10,000 ರೂ. ದಂಡ ವಿಧಿಸಿದ್ದೇವೆ. ಇಂತವರನ್ನು ಪತ್ತೆಹಚ್ಚಲು ಸಾರ್ವಜನಿಕರು ನೆರವಾಗಬೇಕು ಎಂದು ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ ಸೂರ್ಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X