Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾರ್ಲಟ್ಸ್‌ವಿಲ್ ಹಿಂಸಾಚಾರ ಖಂಡಿಸಿದ...

ಶಾರ್ಲಟ್ಸ್‌ವಿಲ್ ಹಿಂಸಾಚಾರ ಖಂಡಿಸಿದ ಮೈಕ್ರೊಸಾಫ್ಟ್, ಫೇಸ್‌ಬುಕ್, ಆ್ಯಪಲ್ ಸಿಇಒಗಳು

ವಾರ್ತಾಭಾರತಿವಾರ್ತಾಭಾರತಿ17 Aug 2017 7:56 PM IST
share
ಶಾರ್ಲಟ್ಸ್‌ವಿಲ್ ಹಿಂಸಾಚಾರ ಖಂಡಿಸಿದ ಮೈಕ್ರೊಸಾಫ್ಟ್, ಫೇಸ್‌ಬುಕ್, ಆ್ಯಪಲ್ ಸಿಇಒಗಳು

ಸ್ಯಾನ್‌ಫ್ರಾನ್ಸಿಸ್ಕೊ, ಆ. 17: ಅಮೆರಿಕದ ವರ್ಜೀನಿಯ ರಾಜ್ಯದ ಶಾರ್ಲಟ್ಸ್‌ವಿಲ್‌ನಲ್ಲಿ ‘ಬಿಳಿಯ ಶ್ರೇಷ್ಠತಾವಾದಿ’ಗಳು ನಡೆಸಿದ ಸಭೆಯಲ್ಲಿ ಸ್ಫೋಟಿಸಿದ ಹಿಂಸೆಯ ಬಗ್ಗೆ ವೌನ ಮುರಿದಿರುವ ಮೈಕ್ರೊಸಾಫ್ಟ್‌ನ ಭಾರತೀಯ ಸಂಜಾತ ಸಿಇಒ ಸತ್ಯ ನಾಡೆಲ್ಲ, ಆ್ಯಪಲ್‌ನ ಟಿಮ್ ಕುಕ್ ಮತ್ತು ಫೇಸ್‌ಬುಕ್‌ನ ಮಾರ್ಕ್ ಝುಕರ್‌ಬರ್ಗ್, ಘಟನೆಯನ್ನು ಖಂಡಿಸಿದ್ದಾರೆ.

ಈ ಘಟನೆಯು ‘ಭಯಾನಕ’ ಮತ್ತು ದೇಶಕ್ಕೆ ‘ಅವಮಾನಕರ’ ಎಂದು ಅವರು ಬಣ್ಣಿಸಿದ್ದಾರೆ.

‘‘ವರ್ಜೀನಿಯದಲ್ಲಿ ಬಿಳಿಯ ರಾಷ್ಟ್ರೀಯತಾವಾದಿಗಳು ಪ್ರಚೋದಿಸಿದ ವಿಚಾರಹೀನ ಹಿಂಸೆ, ತಾರತಮ್ಯ ಮತ್ತು ಅಸಹಿಷ್ಣುತೆಗೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ದುರಂತದ ಸಂತ್ರಸ್ತರು ಮತ್ತು ಅವರ ಕುಟುಂಬ ಸದಸ್ಯರಿಗಾಗಿ ನಮ್ಮ ಹೃದಯ ಮಿಡಿಯುತ್ತದೆ’’ ಎಂದು ತನ್ನ ನಾಯಕತ್ವ ತಂಡಕ್ಕೆ ಕಳುಹಿಸಿದ ಇಮೇಲ್‌ನಲ್ಲಿ ನಾಡೆಲ್ಲ ಹೇಳಿದ್ದಾರೆ.

ಫೇಸ್‌ಬುಕ್ ಸಿಇಒ ಝುಕರ್‌ಬರ್ಗ್ ಗುರುವಾರ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆಯುತ್ತಾ, ‘‘ನಮ್ಮ ಸಮುದಾಯದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅದಕ್ಕಾಗಿಯೇ, ದ್ವೇಷಾಪರಾಧಗಳು ಮತ್ತು ಭಯೋತ್ಪಾದನೆ ಕೃತ್ಯಗಳನ್ನು ಸಂಭ್ರಮಿಸುವ ಯಾವುದೇ ಸಂದೇಶಗಳನ್ನು ನಾವು ತೆಗೆಯುತ್ತಿದ್ದೇವೆ’’ ಎಂದು ಹೇಳಿದ್ದಾರೆ.

‘‘ಬಿಳಿಯ ಶ್ರೇಷ್ಠತಾವದಿಗಳು ಮತ್ತು ನಾಝಿಗಳು ಹಾಗೂ ಅವರನ್ನು ವಿರೋಧಿಸಿ ಮಾನವಹಕ್ಕುಗಳಿಗಾಗಿ ಹೋರಾಡುವವರ ನಡುವೆ ನೈತಿಕ ಸಾಮ್ಯತೆ ಇದೆ ಎಂದು ನಾನು ಒಪ್ಪುವುದಿಲ್ಲ. ಈ ಎರಡು ಬಣಗಳನ್ನು ಸಮೀಕರಿಸುವುದು ಅಮೆರಿಕನ್ನರೆಂಬ ನಮ್ಮ ಕಲ್ಪನೆಗೆ ವಿರುದ್ಧವಾಗುತ್ತದೆ’’ ಎಂದು ಆ್ಯಪಲ್ ಸಿಇಒ ಕುಕ್ ತನ್ನ ಉದ್ಯೋಗಿಗಳಿಗೆ ಕಳುಹಿಸಿದ ಇಮೇಲ್‌ನಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X