Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಷ್ಕರ ಕೈಬಿಟ್ಟ ಆ್ಯಂಟನಿ ವೇಸ್ಟ್...

ಮುಷ್ಕರ ಕೈಬಿಟ್ಟ ಆ್ಯಂಟನಿ ವೇಸ್ಟ್ ಕಂಪನಿಯ ಹೊರಗುತ್ತಿಗೆ ಕಾರ್ಮಿಕರು

ಮೇಯರ್ ಸೂಚನೆಗೆ ಮಣಿದು ಕಸ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ17 Aug 2017 11:17 PM IST
share

ಮಂಗಳೂರು, ಆ. 17: ವೇತನ ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಬುಧವಾರದಿಂದ ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿದ್ದ ಮಂಗಳೂರು ಪಾಲಿಕೆಯ ತ್ಯಾಜ್ಯ ಸಂಗ್ರಹ ನಡೆಸುತ್ತಿರುವ ಆ್ಯಂಟನಿ ವೇಸ್ಟ್ ಕಂಪೆನಿಯ ಹೊರಗುತ್ತಿಗೆ ಪೌರ ಕಾರ್ಮಿಕು ಇಂದು ಮುಷ್ಕರ ಕೈಬಿಟ್ಟಿದ್ದಾರೆ.

ಮೇಯರ್ ಕವಿತಾ ಸನಿಲ್‌ರವರ ಸೂಚನೆಯ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಪೌರ ಕಾರ್ಮಿಕರು ಮುಷ್ಕರ ಕೈ ಬಿಟ್ಟು ನಗರದ ಹಲವೆಡೆ ಕಸ ವಿಲೇವಾರಿಯನ್ನು ನಡೆಸಿದ್ದಾರೆ.

ಕೂಳೂರು ಬಳಿ ಇರುವ ಆ್ಯಂಟನಿ ವೇಸ್ಟ್ ಸಂಸ್ಥೆಯ ಯಾರ್ಡ್‌ನಲ್ಲಿ ಎಲ್ಲ ಹೊರಗುತ್ತಿಗೆ ಪೌರ ಕಾರ್ಮಿಕರು ಜಮಾಯಿಸಿ, ಬುಧವಾರ ಪ್ರತಿಭಟನೆ ನಡೆಸಿದ್ದರು. ಕಸ ಸಾಗಾಟದ ಎಲ್ಲ ವಾಹನಗಳನ್ನು ಯಾರ್ಡ್‌ನಲ್ಲಿ ನಿಲ್ಲಿಸಿ, ಯಾರ್ಡ್‌ನಲ್ಲಿದ್ದ ಸುಮಾರು 650ಕ್ಕೂ ಅಧಿಕ ಕಾರ್ಮಿಕರು ಕೆಲಸ ನಿರ್ವಹಿಸದೆ ಮನೆಗೆ ಹಿಂತಿರುಗಿದ್ದರು. ಪರಿಣಾಮವಾಗಿ ಬುಧವಾರ ಮಂಗಳೂರಿನಾದ್ಯಂತ ಕಸ ಸಂಗ್ರಹ ಆಗಿರಲಿಲ್ಲ. ನಗರದಲ್ಲಿ ಹೆಚ್ಚಿನ ಮನೆಯ ಆವರಣ ಗೋಡೆ, ಗೇಟುಗಳಲ್ಲಿ ಇಟ್ಟ ಕಸದ ಕಟ್ಟುಗಳು ಹಾಗೆಯೇ ಉಳಿದಿದ್ದವು. ಅಲ್ಲಲ್ಲಿ ರಸ್ತೆ ಬದಿಯಲ್ಲಿ, ಅಂಗಡಿಗಳ ಎದುರು ಕಸ ರಾಶಿ ಬಿದ್ದಿತ್ತು. ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ನಾಗವೇಣಿ, ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ ಮುಂತಾದವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಕಾರ್ಮಿಕರ ಸವುಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಿದ್ದರು.

ಪ್ರತಿಭಟನೆ ಕೈ ಬಿಟ್ಟು ಕಸ ಸಂಗ್ರಹ ಮಾಡುವಂತೆ ಅವರು ಮನವಿ ಮಾಡಿದ್ದರು. ಆದರೆ, ಇದಾವುದಕ್ಕೂ ಒಪ್ಪದ ಕಾರ್ಮಿಕರು, ಇಂತಹ ಭರವಸೆಗಳನ್ನು ಕೇಳಿ-ಕೇಳಿ ಸಾಕಾಗಿದ್ದು, ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹಠತೊಟ್ಟು ಪ್ರತಿಭಟನೆಯನ್ನು ಮುಂದುವರಿಸಿದ್ದರು.

ಗುರುವಾರ ಬೆಳಗ್ಗೆ ಕೂಡ ಕಸ ಸಂಗ್ರಹ ಆಗದಿರುವುದರ ಬಗ್ಗೆ ಮಾಹಿತಿ ಪಡೆದ ಮೇಯರ್ ಕವಿತಾ ಸನಿಲ್ ಅವರು, ಆಯುಕ್ತರು ಹಾಗೂ ಸಂಬಂಧಪಟ್ಟವರಿಗೆ ಕರೆ ಮಾಡಿ, ಮುಂದಿನ ಒಂದು ಗಂಟೆಯ ಒಳಗೆ ಆ್ಯಂಟನಿ ಸಂಸ್ಥೆಯವರು ಕಸ ಸಂಗ್ರಹ ಮಾಡಬೇಕು ಇಲ್ಲವಾದರೆ, ತುರ್ತಾಗಿ ಹಳೆಯ ಕಂಟ್ರಾಕ್ಟುದಾರರನ್ನು ಸಂಪರ್ಕಿಸಿ ಮಂಗಳೂರಿನ ಕಸ, ತ್ಯಾಜ್ಯ ಸಂಗ್ರಹ ಮಾಡಲಾಗುತ್ತದೆ. ಆ ಬಳಿಕ ಯಾವುದೇ ಕಾರಣಕ್ಕೂ ಆ್ಯಂಟನಿಯವರಿಗೆ ಅವಕಾಶ ನೀಡುವುದಿಲ್ಲ ಎಂದು ಮೇಯರ್ ಎಚ್ಚರಿಕೆ ನೀಡಿದ್ದರು.

ಈ ಕುರಿತ ಗಂಭೀರತೆಯನ್ನು ಅರಿತ ಸಂಸ್ಥೆಯವರು, ಬಹುತೇಕ ಕಾರ್ಮಿಕರಿಗೆ ತುರ್ತಾಗಿ ಸಂಬಳ ಪಾವತಿ ಮಾಡಿ, ಕಸ ಸಂಗ್ರಹ ಮಾಡುವಂತೆ ಕಾರ್ಮಿಕರಿಗೆ ಸೂಚಿಸಿದ್ದಾರೆನ್ನಲಾಗಿದೆ. ಇದರಂತೆ ಬೆಳಗ್ಗೆ ಸುಮಾರು 10ರ ವೆೀಳೆಗೆ ಕಸ ಸಂಗ್ರಹ ನಡೆಯಿತು.

ಸಂಬಳ ಸಮಸ್ಯೆಯ ಮಾಹಿತಿ ನೀಡಿರುವ ಕಾರ್ಮಿಕ ಸುಧೀರ್, ಹೊರಗುತ್ತಿಗೆ ಕಾರ್ಮಿಕರಿಗೆ ಸಿಗುವುದೇ ಅಲ್ಪ ವೇತನ. ಇದರಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ತಿಂಗಳ ವೇತನ ಪಡೆಯಬೇಕಾದರೆ ಮುಂದಿನ ತಿಂಗಳ ಕೊನೆಯವರೆಗೆ ಕಾಯಬೇಕಾದ ಪರಿಸ್ಥಿತಿ. ವೇತನ ಪಾವತಿ ಕಾಯ್ದೆಯನ್ವಯ ಕ್ಲಪ್ತ ಸಮಯಕ್ಕೆ ಈವರೆಗೆ ವೇತನ ಸಿಗಲೇ ಇಲ್ಲ. ವೇತನ ಚೀಟಿ, ರಜೆ ಕಾರ್ಡು ಸಹ ಸಿಗುತ್ತಿಲ್ಲ. ಮುಷ್ಕರ ನಡೆಸಿದಾಗ ಭರವಸೆ ನೀಡಿ, ಪ್ರತಿಭಟನೆ ಹಿಂಪಡೆದಾಗ ಭರವಸೆ ಗಾಳಿಗೆ ತೂರುತ್ತಿದ್ದಾರೆ. ಇದನ್ನು ವಿರೋಧಿಸಿ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಮುಂದಾಗಿದ್ದೆವು. ಪ್ರಸ್ತುತ ಸಂಬಳ ಬಂದಿದೆ. ಹೀಗಾಗಿ ಮುಷ್ಕರ ಕೈಬಿಟ್ಟು ಗುರುವಾರ ಕಸ ಸಂಗ್ರಹ ಮಾಡಿದ್ದೇವೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X