Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೋಭಾ ಕರಂದ್ಲಾಜೆ ತನ್ನ ಆಸ್ತಿಯನ್ನು...

ಶೋಭಾ ಕರಂದ್ಲಾಜೆ ತನ್ನ ಆಸ್ತಿಯನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ನೀಡಲಿ: ಸಚಿವ ರೈ

ವಾರ್ತಾಭಾರತಿವಾರ್ತಾಭಾರತಿ17 Aug 2017 11:27 PM IST
share
ಶೋಭಾ ಕರಂದ್ಲಾಜೆ ತನ್ನ ಆಸ್ತಿಯನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ನೀಡಲಿ: ಸಚಿವ ರೈ

ಮಂಗಳೂರು, ಆ.17 : ಸಂಸದೆ ಶೋಭಾ ಕರಂದ್ಲಾಜೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಪ್ರೌಢಶಾಲೆಗಾಗಿ ಭಿಕ್ಷೆ ಎತ್ತುವ ನಾಟಕ ಮಾಡುವ ಬದಲು ತಾನು ಮಾಡಿರುವ ಆಸ್ತಿಯನ್ನು ಶಾಲೆಗೆ ನೀಡಲಿ. ಅದು ಶಾಲೆಗೆ ಬಹುಕಾಲ ಸಾಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಓರ್ವ ಸಾಮಾನ್ಯ ಮಹಿಳೆಯಾಗಿದ್ದ ಶೋಭಾ ಕರಂದ್ಲಾಜೆ  ಇದೀಗ ಭಾರೀ ಪ್ರಮಾಣದಲ್ಲಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿ ಭಿಕ್ಷೆ ಬೇಡಿ ಶಾಲೆಗೆ ನೆರವು ನೀಡುವ ಬದಲು ಇದನ್ನು ನೀಡಿ ಸಹಾಯ ಮಾಡಲಿ ಎಂದರು.

ಶ್ರೀಮಂತ ಕುಟುಂಬಕ್ಕೆ ಸೇರಿದ ನಾನು ರಾಜಕೀಯಕ್ಕೆ ಬರುವ ಮೊದಲು ಸಾಕಷ್ಟು ಸ್ಥಿತಿವಂತನಾಗಿದ್ದೆ . ರಾಜಕೀಯಕ್ಕೆ ಬಂದ ಮೇಲೆ ಸಾಕಷ್ಟು ಕಳೆದುಕೊಂಡಿದ್ದೇನೆ ಎಂದ ಅವರು ರಾಜಕೀಯಕ್ಕೆ ಬರುವ ಮೊದಲು ಶೋಭಾ ಕರಂದ್ಲಾಜೆ ಬಳಿ ಎಷ್ಟು ಆಸ್ತಿ ಇತ್ತು. ಈಗ ಎಷ್ಟಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿ. ರಾಜಕೀಯಕ್ಕೆ ಬರುವ ಮೊದಲು ನನ್ನಲ್ಲಿ ಎಷ್ಟು ಆಸ್ತಿ ಇತ್ತು. ಈಗ ಎಷ್ಟಿದೆ ಎಂಬುದನ್ನು ನಾನು ಹೇಳುತ್ತೇನೆ ಎಂದವರು ಸವಾಲು ಹಾಕಿದರು.

ನನ್ನ ಶಾಲೆಯಲ್ಲಿ ಹಿಂದುಳಿದವರಿಗೆ ಉಚಿತ ಶಿಕ್ಷಣ ನೀಡಲಿ ಎಂಬುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿರುವುದಾಗಿ ವರದಿಯಾಗಿದೆ. ನಾನು ಜಾಗ ಖರೀದಿಸಿ ನನ್ನ ಹಣದಲ್ಲಿ ಶಾಲೆ ಸ್ಥಾಪಿಸಿದ್ದೇನೆ. ಸರಕಾರದಿಂದ ಜಾಗ ಪಡೆದಿಲ್ಲ ಅಥವಾ ಶಿಕ್ಷಕರಿಗೆ ಸರಕಾರದಿಂದ ವೇತನ ವಾಪತಿಯಾಗುತ್ತಿಲ್ಲ. ಆದರೆ ಕಲ್ಲಡ್ಕ ಶಾಲೆಗೆ ಸರಕಾರದಿಂದ ಜಾಗ ನೀಡಲಾಗಿದೆ. ಅದನ್ನು ಕೂಡಾ ಬಹಳಷ್ಟು ಹಿಂದೆ ಕಾಂಗ್ರೆಸ್ ಸರಕಾರದವಿದ್ದಾಗ ನೀಡಲಾಗಿತ್ತು. ಅದೊಂದು ಅನುದಾನಿತ ಪ್ರೌಢಶಾಲೆಯಾಗಿದೆ. ಸರಕಾರದ ಬಿಸಿಯೂಟವನ್ನು ಅವರು ನಿರಾಕರಿಸಿದ್ದರು ಎಂದರು.

ಪಿಎಫ್ಐ ಸಂಘಟನೆಯನ್ನು ನಿಷೇಧಿಸಬೇಕು ಎಂಬುದಾಗಿ ವಿಶ್ವಹಿಂದು ಪರಿಷತ್ ಹಾಗೂ ಬಜರಂಗದಳದ ಆಗ್ರಹದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಕೆಲವು ಹತ್ಯೆಗಳಾಯಿತು. ಈ ಹಿಂದೆ ಕೋಮ ಗಲಭೆಯಾದಾಗ ಅದು ಒಂದೆರಡು ದಿನ ನಡೆದು ಬಳಿಕ ಶಾಂತವಾಗುತ್ತಿತ್ತು. ಬಳಿಕ ಮರೆತು ಬಿಡಲಾಗುತ್ತಿತ್ತು. ಈಗಿನ ಗಲಾಟೆ ಆಗಲ್ಲ. ಈ ಹತ್ಯೆ ಪ್ರಕರಣಗಳಲ್ಲಿ ಎರಡೂ ಮತೀಯವಾದಿ ಸಂಘಟನೆಗಳಿವೆ. ಅಶ್ರಫ್ ಹತ್ಯೆಯಲ್ಲಿ ಒಂದು ಕಡೆಯವರು ಇದ್ದರೆ, ಶರತ್ ಹತ್ಯೆಯಲ್ಲಿ ಇನ್ನೊಂದು ಕಡೆಯವರು ಇದ್ದಾರೆ. ಇದೀಗ ಅವರ ಬಂಧನವಾಗಿದೆ. ಜಿಲ್ಲೆಯಲ್ಲಿ ಈ ಎರಡೂ ಹತ್ಯೆಗಳು ಹಾಗೂ ಅದಕ್ಕೂ ಹಿಂದಿನ ಹತ್ಯಾಪ್ರಕರಣಗಳಲ್ಲಿ ಪಿತೂರಿದಾರರು ಯಾರಿದ್ದಾರೆ ಅವರನ್ನು ಕಂಡುಹಿಡಿದು ಬಂಧಿಸುವ ಕಾರ್ಯ ಆಗಬೇಕು. ನಾನು ಹಿಂದಿನಿಂದಲೂ ಜಾತ್ಯತೀತ ನಿಲುವು ಮೈಗೂಡಿಸಿಗೊಂಡವನು. ಮತೀಯವಾದವನ್ನು ವಿರೋಧಿಸುತ್ತಾ ಬಂದಿದ್ದೇನೆ. ನನ್ನನ್ನು ಎರಡೂ ಮತೀಯವಾದಿ ಸಂಘಟನೆಗಳು ವಿರೋಧಿಸುತ್ತಿವೆ. ನನ್ನ ರಾಜೀನಾಮೆ ಕೇಳುತ್ತಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X