Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾಲೇಮಾಡಿನ ನಿವಾಸಿಗಳಿಗೆ ಸ್ಮಶಾನ ಜಾಗ...

ಪಾಲೇಮಾಡಿನ ನಿವಾಸಿಗಳಿಗೆ ಸ್ಮಶಾನ ಜಾಗ ನೀಡಲು ಬಿಎಸ್‍ಪಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 Aug 2017 6:54 PM IST
share
ಪಾಲೇಮಾಡಿನ ನಿವಾಸಿಗಳಿಗೆ ಸ್ಮಶಾನ ಜಾಗ ನೀಡಲು ಬಿಎಸ್‍ಪಿ ಒತ್ತಾಯ

ಮಡಿಕೇರಿ ಆ.18 :ಪಾಲೇಮಾಡಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಕ್ರೀಡಾಂಗಣ ನಿರ್ಮಾಣಕ್ಕೆಂದು ಮಂಜೂರಾಗಿರುವ ಈ ಹಿಂದಿನ ಸ್ಮಶಾನದ ಜಾಗವನ್ನು ಸ್ಥಳೀಯ ನಿವಾಸಿಗಳಿಗೆ ಮರಳಿಸಲು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ಬಿಎಸ್‍ಪಿ ಜಿಲ್ಲಾ ಕಾರ್ಯದರ್ಶಿ ಕೆ. ಮೊಣ್ಣಪ್ಪ ತಿಳಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಅಧೀನ ಕಾರ್ಯದರ್ಶಿಗಳ ನಿರ್ದೇಶನದಂತೆ ಮುಂದಿನ 15 ದಿನಗಳ ಒಳಗಾಗಿ ಪಾಲೇಮಾಡಿನ 2 ಏಕರೆ ಸ್ಮಶಾನ ಜಾಗವನ್ನು, ಕ್ರಿಕೆಟ್ ಸಂಸ್ಥೆಗೆ ಸರ್ವೇ ನಂಬರ್ 167/1ಎ ಯಲ್ಲಿ ನೀಡಿರುವ 12.70 ಏಕರೆಯಿಂದ ಪ್ರತ್ಯೇಕಿಸಿ ದುರಸ್ತಿ ಪಡಿಸಿ ನೀಡಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

 ಬಿಎಸ್‍ಪಿ ಮತ್ತು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೊಂದಿಗೆ ಪಾಲೆÉೀಮಾಡಿನ ‘ಸ್ಮಶಾನ’ ಜಾಗವನ್ನು ಮತ್ತೆ ಅಲ್ಲಿನ ನಿವಾಸಿಗಳಿಗೆ ನೀಡಬೇಕೆಂದು ಸಾಕಷ್ಟು ಹೋರಾಟಗಳನ್ನು ನಡೆಸಲಾಗಿದೆ. ಇದರ ಫಲವಾಗಿ ಅಧೀನ ಕಾರ್ಯದರ್ಶಿಗಳು ಇದೇ ಜುಲೈ 6 ರಂದು ಜಿಲ್ಲಾಧಿಕಾರಿಗಳಿಗೆ ಕಳುಹಿಸಿರುವ ಪತ್ರದಲ್ಲಿ, ‘ಕ್ರಿಕೆಟ್ ಸಂಸ್ಥೆಗೆ 12.70 ಎಕರೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಮಂಜೂರು ಮಾಡಲಾಗಿದ್ದು, ಆ ಪೈಕಿ 2 ಎಕರೆ ಜಮೀನನ್ನು ಈಗಾಗಲೆ ಪರಿಶಿಷ್ಟ ಜಾತಿ- ಪಂಗಡದವರಿಗೆ ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಿರುವುದರಿಂದ, ಉಳಿಕೆ 10.70 ಎಕರೆ ಜಮೀನಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಸಾಧ್ಯತೆ ಬಗ್ಗೆ ಹಾಗೂ ಕ್ರಿಕೆಟ್ ಸಂಸ್ಥೆಗೆ ಆ 2 ಎಕರೆ ಜಮೀನು ಅಗತ್ಯವೆನಿಸಿದಲ್ಲಿ ಅದೇ ಸರ್ವೇ ನಂಬರ್‍ನಲ್ಲಿ ಅಥವಾ ಪಕ್ಕದ ಸರ್ವೇ ನಂಬರ್‍ನಲ್ಲಿ ಲಭ್ಯವಿರುವ ಜಮೀನನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ  ನಿಯಮಾನುಸಾರ ಕ್ರಮವಹಿಸಲಾಗುವುದು’ ಎಂದು ತಿಳಿಸುವ ಮೂಲಕ ಕ್ರಿಕೆಟ್ ಸಂಸ್ಥೆಗೆ ಮಂಜೂರಾದ ಜಾಗದಲ್ಲಿನ ಸ್ಮಶಾನಕ್ಕೆ ಸೇರಿದ ಜಾಗವನ್ನು ಬಿಟ್ಟು ಬೇರೆಡೆ ಎರಡು ಎಕರೆ ಜಾಗವನ್ನು ಗುರುತಿಸಲು ಸೂಚಿಸಿರುವ ಬಗ್ಗೆ ತಿಳಿಸಿದರು.

ಅಶಾಂತಿ ಯತ್ನ

ಪಾಲೇಮಾಡು ನಿವಾಸಿಗಳು ಸಾಕಷ್ಟು ವರ್ಷಗಳಿಂದ ಬಳಸುತ್ತಿದ್ದ ಸ್ಮಶಾನ ಜಾಗವನ್ನು ಕ್ರಿಕೆಟ್ ಸಂಸ್ಥೆಗೆ ಮಂಜೂರು ಮಾಡಿದ ಸಂದರ್ಭ ಅದನ್ನು ಮರಳಿ ಪಡೆಯುವ ಪ್ರಯತ್ನಗಳನ್ನು ನಡೆಸಲಾಗಿದೆ. ಈ ಹಂತದಲ್ಲಿ ಆ ವಿಭಾಗದ ಜಿಲ್ಲಾ ಪಂಚಾಯ್ತಿ ಸದಸ್ಯರು ಮತ್ತು ಮಡಿಕೇರಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರು ಅನಗತ್ಯವಾಗಿ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ, ಪಾಲೇಮಾಡಿನಲ್ಲಿ ಅಶಾಂತಿ ಮುಡಿಸುವ ಪ್ರಯತ್ನ ನಡೆಸಿರುವುದಾಗಿ ಕೆ. ಮೊಣ್ಣಪ್ಪ ಆರೋಪಿಸಿದರು.

ಪಾಲೇಮಾಡು ವಿಭಾಗದ ನಿವಾಸಿಗಳಿಗೆ 94 ‘ಸಿ’ಯಡಿ ಹಕ್ಕು ಪತ್ರ ನೀಡುವ ಕಾರ್ಯ ಸೇರಿದಂತೆ ಕುಡಿಯುವ ನೀರು, ವಿದ್ಯುಚ್ಛಕ್ತಿ ಒದಗಿಸುವ ಕೆಲಸಗಳು ಸಮರ್ಪಕವಾಗಿ ನಡೆದಿಲ್ಲವೆಂದು ಆರೋಪಿಸಿ, ಅಗತ್ಯ ಕ್ರಮ ಕೈಗೊಂಡು ಪಾಲೇಮಾಡು ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು.

 ಸುದ್ದಿಗೋಷ್ಠಿಯಲ್ಲಿ ಬಿಎಸ್‍ಪಿ ಪ್ರಮುಖರಾದ ವೆಮಕಟೇಶ್ ಹೆಚ್., ಕೆ. ರಾಜು, ಹೆಚ್.ಜಿ. ಮಾದೇಶ್ ಹಾಗೂ ನಿಶ್ಚಿತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X