Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೇಡಿಕೆ ಈಡೇರಿಸದಿದ್ದಲ್ಲಿ ಅಂಚೆ ಕಚೇರಿ...

ಬೇಡಿಕೆ ಈಡೇರಿಸದಿದ್ದಲ್ಲಿ ಅಂಚೆ ಕಚೇರಿ ಮುತ್ತಿಗೆಯ ಎಚ್ಚರ

ಮುಂದುವರಿದ ಅಂಚೆ ನೌಕರರ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ18 Aug 2017 9:12 PM IST
share
ಬೇಡಿಕೆ ಈಡೇರಿಸದಿದ್ದಲ್ಲಿ ಅಂಚೆ ಕಚೇರಿ ಮುತ್ತಿಗೆಯ ಎಚ್ಚರ

ಪುತ್ತೂರು, ಆ. 18: ಕಳೆದ ಮೂರು ದಿನಗಳಿಂದ ಅನಿರ್ಧಿಷ್ಟ ಅವಧಿ ಮುಷ್ಕರ ನಡೆಸುತ್ತಿರುವ ಗ್ರಾಮೀಣ ಅಂಚೆ ನೌಕರರು ತಮ್ಮ ಬೇಡಿಕೆ ಈಡೇರದಿದ್ದರೆ ಸೋಮವಾರದಿಂದ ಪುತ್ತೂರು ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಇದರಿಂದ ಗ್ರಾಹಕರಿಗೆ ತೊಂದರೆ ಯಾದರೆ ಕೇಂದ್ರ ಸರಕಾರ ಹೊಣೆಯಾಗಲಿದೆ ಎಂದು ಪುತ್ತೂರಿನಲ್ಲಿ ಗ್ರಾಮೀಣ ಅಂಚೆ ನೌಕರರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಅಂಚೆ ಕಚೇರಿ ಮುಂಭಾಗದಿಂದ ಪ್ರತಿಭಟನಕಾರರು ಮುಖ್ಯರಸ್ತೆಯಲ್ಲಿ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನಸೌಧದ ಬಳಿಕ ಸಮಾಗಮಗೊಂಡು ಪ್ರದರ್ಶನ ನಡೆಸಿದರು. ಬಳಿಕ ಸಹಾಯಕ ಆಯುಕ್ತರಿಗೆ ಮತ್ತು ಶಾಸಕಿ ಶಕುಂತಳಾಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಪುತ್ತೂರು ವಿಭಾಗೀಯ ಕಾರ್ಯದರ್ಶಿ ಸುನಿಲ್ ದೇವಾಡಿಗ ಅವರು ಈಗ ನಮ್ಮ ತಾಳ್ಮೆಯ ಕಟ್ಟೆ ಒಡೆಯುತ್ತಿದೆ. ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಕನಿಷ್ಠ ನಮ್ಮನ್ನು ಕರೆಸಿ ಮಾತನಾಡುವ ಸೌಜನ್ಯವನ್ನೂ ಸರಕಾರ ತೋರುತ್ತಿಲ್ಲ. ನಾವು ನಮ್ಮ ಬೇಡಿಕೆಗಳ ಬಗ್ಗೆ ಮೂರು ತಿಂಗಳ ಹಿಂದೆ ಮನವಿ ಸಲ್ಲಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದಾಗ ಮೂರು ತಿಂಗಳು ಸಮಯ ಕೊಡಿ ಎಂದು ಕೇಳಿದ್ದರು. ಅದರಂತೆ ಸಮಯ ಕೊಟ್ಟೆವು. ಆದರೆ ಏನೂ ಪ್ರಗತಿಯಾಗಿಲ್ಲ. ಈ ಬಾರಿ ಕೂಡ ಮುಂಗಡ ನೊಟೀಸ್ ನೀಡಿಯೇ ಪ್ರತಿಭಟನೆಗೆ ಇಳಿದಿದ್ದೇವೆ. ಈ ಬಾರಿ ಮಾತ್ರ ನಾವು ನ್ಯಾಯ ಸಿಗುವವರೆಗೂ ಹೋರಾಡಲಿದ್ದೇವೆ. ಕಳೆದ ಮೂರು ದಿನಗಳಿಂದ ದೇಶದಾದ್ಯಂತ ಪ್ರತಿಭಟನೆ ಮಾಡುತ್ತಿದ್ದರೂ ಕೇಂದ್ರ ಸರಕಾರ ಇನ್ನೂ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ದೂರಿದರು.

ಐದು ತಾಲೂಕು ವ್ಯಾಪ್ತಿ ಹೊಂದಿರುವ ಪುತ್ತೂರು ವಿಭಾಗದ ಗ್ರಾಮೀಣ ಅಂಚೆ ನೌಕರರು ಕಳೆದ ಮೂರು ದಿನಗಳಿಂದ ಪುತ್ತೂರಿನ ಪ್ರಧಾನ ಅಂಚೆ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದು, ಶುಕ್ರವಾರ ಪ್ರಧಾನ ಕಚೇರಿಯ ಬಾಗಿಲಲ್ಲೇ ಪ್ರದರ್ಶನ ನಡೆಸಿದರು. ಬಳಿಕ ನಗರದಲ್ಲಿ ಮೆರವಣಿಗೆ ನಡೆಸಿ ಮಿನಿವಿಧಾನ ಸೌಧದ ಮುಂಬಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಹಲವು ದಶಕಗಳಿಂದ ಯಾವುದೇ ಸೌಕರ್ಯವಿಲ್ಲದೆ ಜೀತದಾಳುಗಳಂತೆ ದುಡಿಯುತ್ತಿರುವ ಗ್ರಾಮೀಣ ಅಂಚೆ ನೌಕರರನ್ನು ಸರಕಾರಿ ನೌಕರರನ್ನಾಗಿ ಮಾನ್ಯ ಮಾಡಿ ಸೂಕ್ತ ಸವಲತ್ತು ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಕರೆಯಂತೆ ಈ ಸತ್ಯಾಗ್ರಹ ನಡೆಯುತ್ತಿದೆ.ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮತ್ತು ಕಾರ್ಕಳ ತಾಲೂಕುಗಳನ್ನು ಒಳಗೊಂಡ ಪುತ್ತೂರು ವಿಭಾಗದ 353 ಶಾಖಾ ಕಚೇರಿಗಳ 865 ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದು, ಇದರ ಪರಿಣಾಮ ಮೂರು ದಿನಗಳಿಂದ 353 ಶಾಖಾ ಅಂಚೆ ಕಚೇರಿಗಳು ಕಾರ್ಯ ಸ್ಥಗಿತಗೊಂಡಿವೆ.

ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಪುತ್ತೂರು ವಿಭಾಗದ ಗೌರವಾಧ್ಯಕ್ಷ ಜಗತ್ಪಾಲ್ ಹೆಗ್ಡೆ, ಕರ್ನಾಟಕ ವಲಯ ಉಪಾಧ್ಯಕ್ಷ ಪ್ರಮೋದ್ ಕುಮಾರ್ ಬಳಂಜ, ಪುತ್ತೂರು ವಿಭಾಗೀಯ ಅಧ್ಯಕ್ಷ ವಿಠಲ ಎಸ್. ಪೂಜಾರಿ, ಕಾರ್ಕಳ ಉಪ ವಿಭಾಗದ ಅಧ್ಯಕ್ಷ ಅಶೋಕ್ ಅಂಡಾರು, ಪುತ್ತೂರು ವಿಭಾಗದ ಕೋಶಾಧಿಕಾರಿ ಶಕೀಲಾ, ಬಂಟ್ವಾಳ ವಲಯ ಅಧ್ಯಕ್ಷ ಶ್ರೀಧರ ಸಿದ್ಧಕಟ್ಟೆ, ಪುತ್ತೂರು ವಲಯದ ಮಾಜಿ ಕಾರ್ಯದರ್ಶಿ ಗಣೇಶ್ ರೈ, ಪ್ರಮುಖರಾದ ಅಬ್ದುಲ್ ಕಲಾಂ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X