Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.3ರಿಂದ ದಿಲ್ಲಿಯಲ್ಲಿ ‘ವರ್ಲ್ಡ್ ಫುಡ್...

ನ.3ರಿಂದ ದಿಲ್ಲಿಯಲ್ಲಿ ‘ವರ್ಲ್ಡ್ ಫುಡ್ ಇಂಡಿಯಾ’: ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್

ಆಹಾರ ಸಂಸ್ಕರಣಾ ಸಾಮರ್ಥ್ಯ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ18 Aug 2017 11:21 PM IST
share
ನ.3ರಿಂದ ದಿಲ್ಲಿಯಲ್ಲಿ ‘ವರ್ಲ್ಡ್ ಫುಡ್ ಇಂಡಿಯಾ’: ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್

ಬೆಂಗಳೂರು, ಆ. 18: ಹೊಸದಿಲ್ಲಿಯಲ್ಲಿ ನವೆಂಬರ್ 3ರಿಂದ ಆರಂಭಗೊಳ್ಳಲಿರುವ ‘ವರ್ಲ್ಡ್ ಫುಡ್ ಇಂಡಿಯಾ-2017’ ಭಾರತದ ಆಹಾರ ಸಂಸ್ಕರಣಾ ಸಾಮರ್ಥ್ಯವನ್ನು ಪ್ರದರ್ಶನ, ಆಹಾರ ಸಂಸ್ಕರಣೆ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಮತ್ತು ಭಾರತೀಯ ಸಂಸ್ಥೆಗಳೊಂದಿಗೆ ಸಂಪರ್ಕ ಕಲ್ಪಿಸಲು ಅವಕಾಶ ಕಲ್ಪಿಸುವ ಉತ್ತಮ ವೇದಿಕೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಿದ್ದ ರೋಡ್ ಶೋನಲ್ಲಿ ಮಾತನಾಡಿದ ಅವರು, ಆಹಾರ ಸಂಸ್ಕರಣೆಯ ವಿಭಾಗದಲ್ಲಿ 10ಬಿಲಿಯನ್ ವಿದೇಶಿ ಹೂಡಿಕೆಯನ್ನು ನಾವು ಎದುರು ನೋಡುತ್ತಿದ್ದೇವೆ. ಮುಂಬರುವ ವರ್ಷಗಳಲ್ಲಿ ಆಹಾರ ಸಂಸ್ಕರಣಾ ಉದ್ಯಮವು ಅನೇಕ ಪಟ್ಟು ಬೆಳೆಯಲಿದೆ ಎಂದರು.

ಸರಕಾರವು ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಅನೇಕ ಯೋಜನೆಗಳನ್ನು ಪರಿಚಯಿಸಿದೆ. 42 ಬೃಹತ್ ಫುಡ್‌ಪಾರ್ಕ್‌ಗಳ ಸ್ಥಾಪನೆ, 5ಲಕ್ಷ ಜನರಿಗೆ ನೇರ ಉದ್ಯೋಗವನ್ನು ಒದಗಿಸಲಿದೆ. ಮಾತ್ರವಲ್ಲ, ಇದರಿಂದ 25ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಈ ಬೃಹತ್ ಫುಡ್ ಪಾರ್ಕ್‌ಗಳು ಹಾಗೂ ಸಂಪದ ಯೋಜನೆಯ ಗುರಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿದೆ ಎಂದರು.

ರೈತರ ಕಷ್ಟಗಳನ್ನು ಕಡಿಮೆ ಮಾಡಿ, ದೇಶವನ್ನು ಜಾಗತಿಕ ಆಹಾರ ಕಾರ್ಖಾನೆಯನ್ನಾಗಿ ಮಾಡುತ್ತಿರುವ ಕೇಂದ್ರವು ಕೃಷಿ ಯಂತ್ರ ಉತ್ಪಾದನಾ, ಸಂಸ್ಕರಣೆ ಹಾಗೂ ಕೃಷಿ ಸಂಸ್ಕರಣೆ ಸಮುಚ್ಛಯಗಳನ್ನು (ಸಂಪದ) ಪ್ರಾರಂಭಿಸಿದೆ ಹಾಗೂ ಇದು 2020ರ ವೇಳೆಗೆ ಶೇ.2.5ಪಟ್ಟು ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹೊಂದಿದೆ. ಪ್ರಸ್ತುತ ನಾವು ಒಟ್ಟು ಕಚ್ಚಾ ವಸ್ತುಗಳ ಕೇವಲ ಶೇ.10ರಷ್ಟಿನ್ನು ಮಾತ್ರ ಸಂಸ್ಕರಣೆ ಮಾಡುತ್ತಿರುವುದರಿಂದ ಆಹಾರ ಸಂಸ್ಕರಣಾ ವಲಯವು ಈ ಗುರಿಯನ್ನು ಸಾಧಿಸಲು ಸಹಾಯ ಮಾಡಬಹುದು ಎಂದರು.

ನಾವು ನಮ್ಮ ದೇಶದಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಕಟ್ಟುನಿಟ್ಟಾಗಿ ಪ್ರಯತ್ನಿಸಬೇಕು. ಪ್ರತಿವರ್ಷ ನಾವು 1ಲಕ್ಷ ಕೋಟಿ ರೂ.ಗಳ ಮೌಲ್ಯದ ಬೆಳೆಯನ್ನು ಕಳೆದುಕೊಳ್ಳುತ್ತಿದ್ದು, ಇದನ್ನು ನಾವು ದೇಶದಾದ್ಯಂತ ಸೂಕ್ತವಾದ ಆಹಾರ ಸಂಸ್ಕರಣಾ ಸೌಲಭ್ಯಗಳನ್ನು ಹೊಂದಿದಲ್ಲಿ ಉಳಿಸಬಹುದಾಗಿದೆ ಎಂದರು.

ಕರ್ನಾಟಕ ರಾಜ್ಯವು ‘ವರ್ಲ್ಡ್ ಫುಡ್ ಇಂಡಿಯಾ-2017’ರಲ್ಲಿ ಕೇಂದ್ರೀಕೃತ ರಾಜ್ಯವಾಗಿರಲಿದೆ. ಪ್ರಧಾನಿ ಮೋದಿ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನವೆಂಬರ್ 3ರಿಂದ ಆರಂಭಗೊಳ್ಳಲಿರುವ ವರ್ಲ್ಡ್ ಫುಡ್ ಇಂಡಿಯಾವನ್ನು ಉದ್ಘಾಟಿಸಲಿದ್ದಾರೆ ಎಂದರು.

80ಅಂತಾರಾಷ್ಟ್ರೀಯ ಕಂಪೆನಿಗಳು ವರ್ಲ್ಡ್‌ಫುಡ್ ಇಂಡಿಯಾದಲ್ಲಿ ಪಾಲ್ಗೊಳ್ಳಲಿದ್ದು, 30 ಜಾಗತಿಕ ಸಿಇಓಗಳು ಭಾಗವಹಿಸಲಿದ್ದಾರೆ. ಆಹಾರ ತಜ್ಞರು, ಆಹಾರ ಸಂಸ್ಕರಣಾ ಕಂಪೆನಿಗಳು ಸೇರಿದಂತೆ 25ಕ್ಕಿಂತ ಹೆಚ್ಚು ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹಾಜರಿದ್ದ ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಆಹಾರ ಸಂಸ್ಕರಣಾ ಸಚಿವಾಲಯದ ‘ವರ್ಲ್ಡ್ ಫುಡ್ ಇಂಡಿಯಾ’ವನ್ನು ಸ್ವಾಗತಿಸುತ್ತೇವೆ. ಕರ್ನಾಟಕವು ಇದರಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳಲಿದೆ. ಇದನ್ನು ಯಶಸ್ವಿಯಾಗಿಸಲು ಅಗತ್ಯ ಬೆಂಬಲವನ್ನೂ ನೀಡುತ್ತೇವೆ ಎಂದರು.

ವರ್ಲ್ಡ್ ಫುಡ್ ಇಂಡಿಯಾ ಆಹಾರ ಸಂಸ್ಕರಣಾ ವಲಯದ ಬಲ ಹಾಗೂ ಅವಕಾಶಗಳನ್ನು ಪ್ರದರ್ಶಿಸಲು ಒಂದು ವೇದಿಕೆ. ಕರ್ನಾಟಕವು ಆಹಾರ ಸಂಸ್ಕರಣಾ ಉದ್ಯಮದಲ್ಲಿ ವಿಫುಲ ಅವಕಾಶಗಳನ್ನು ಹೊಂದಿದೆ. ಏಕೆಂದರೆ ರಾಜ್ಯವು ಅನೇಕ ರೀತಿಯ ಹಣ್ಣುಗಳು, ತರಕಾರಿ, ಬೇಳೆಕಾಳುಗಳನ್ನು ಉತ್ಪಾದಿಸುತ್ತದೆ. ಮಾತ್ರವಲ್ಲ ಸೂರ್ಯಕಾಂತಿ, ಕಾಫಿ, ಈರುಳ್ಳಿ, ಅರಿಶಿನ, ದಾಲ್ಚಿನ್ನಿ, ಟೊಮಾಟೋ, ಲವಂಗ ಸೇರಿ ಇನ್ನಿತರ ಪದಾರ್ಥಗಳ ಉತ್ಪಾದನೆಯನ್ನು ಮುಂಚೂಣಿಯಲ್ಲಿದೆ ಎಂದು ವಿವರಿಸಿದರು.

ಆಹಾರದ ಸಗಟು ಮಾರಾಟವು ಸಂಘಟಿತವಾದಾಗ ರೈತರಿಗೆ ಲಾಭವಾಗುತ್ತದೆ ಹಾಗೂ ನಾವು ದೇಶದಲ್ಲಿ ಸಂಘಟಿತ ಆಹಾರ ಸಗಟು ಮಾರಾಟಕ್ಕೆ ಒತ್ತು ನೀಡಬೇಕು. ಆಹಾರ ಸಂಸ್ಕರಣೆ ಕಂಪೆನಿಗಳು ಈ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X