Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಚ್.ಡಿ.ಕುಮಾರಸ್ವಾಮಿ ವರ್ತನೆಗೆ...

ಎಚ್.ಡಿ.ಕುಮಾರಸ್ವಾಮಿ ವರ್ತನೆಗೆ ಶ್ರಮಿಕನಗರ ಮುಖಂಡರ ಖಂಡನೆ

ವಾರ್ತಾಭಾರತಿವಾರ್ತಾಭಾರತಿ18 Aug 2017 11:23 PM IST
share

ಮಂಡ್ಯ, ಆ.18: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಾಲಹಳ್ಳಿ ಶ್ರಮಿಕ ನಗರಕ್ಕೆ ಭೇಟಿ ನೀಡಿದ ಕಾಲಕ್ಕೆ ನಡೆದುಕೊಂಡ ರೀತಿಯನ್ನು ಕರ್ನಾಟಕ ಜನಶಕ್ತಿಯ ಅಂಗ ಸಂಘಟನೆ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದಅಧ್ಯಕ್ಷ ಪ್ರಕಾಶ್ ಹಾಗುಕರ್ನಾಟಕ ಜನಶಕ್ತಿ ಸಂಘಟನೆ ಕಾರ್ಯದರ್ಶಿ ಸಿದ್ದರಾಜು ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಾಲಹಳ್ಳಿಯ ಜೈಭಾರತ್ ಶ್ರಮಿಕ ನಗರದ ಮನೆಗಳಿಗೆ ಮಳೆ ನೀರು ನುಗ್ಗಿ ಅಲ್ಲಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿರುವುದನ್ನು ಮಾಧ್ಯಮಗಳು ತೋರಿಸಿದ ನಂತರಅಲ್ಲಿಗೆ ಭೇಟಿ ನೀಡಿದಕುಮಾರಸ್ವಾಮಿಅನಪೇಕ್ಷಣೀಯವಾಗಿ ನಡೆದುಕೊಂಡಿದ್ದಾರೆ ಎಂದಿದ್ದಾರೆ.

ಕಳೆದ ನಾಲ್ಕು ವರ್ಷಗಳಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ವಿಚಾರದಲ್ಲಿ ಪರಿಣಾಮಕಾರಿ ಹೋರಾಟ ನಡೆಸದ ಮತ್ತು ಶ್ರಮಿಕ ನಗರಗಳ ವಿಚಾರದಲ್ಲಿ ಸ್ಪಂದಿಸದ ಕುಮಾರಸ್ವಾಮಿ,ನಿರಂತರವಾಗಿ ಶ್ರಮಿಕ ನಗರಗಳ ಜನರ ಜತೆ ನಿಂತು ಶ್ರಮಿಸುತ್ತಿರುವಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ಮುಖಂಡ ಎನ್.ನಾಗೇಶ್ ಮತ್ತು ಇತರರ ಪ್ರಶ್ನೆಗೆ ಉತ್ತರಿಸದೆ ದಬಾಯಿಸಿದ ರೀತಿ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಯಲ್ಲಿರುವ ಎಲ್ಲರ ಬಿಡಿ ಬಿಡಿ ಸಮಸ್ಯೆಗಳನ್ನು ಅಧಿಕಾರದಲ್ಲಿಲ್ಲದ ಪಕ್ಷದ ರಾಜ್ಯಾಧ್ಯಕ್ಷರೆ ಕೇಳುತ್ತಾರೆಂದು ಭಾವಿಸುವುದು ಮೂರ್ಖತನವಾಗುತ್ತದಷ್ಟೆ. ಅವರ ಪಕ್ಷ ಪ್ರಬಲವಾಗಿದೆ ಎಂದು ಭಾವಿಸಲಾಗಿರುವ ಮಂಡ್ಯ ಜಿಲ್ಲೆಯಲ್ಲಿ ಕೆಳಗಿನ ಹಂತದ ಪದಾಧಿಕಾರಿಗಳು ಅಥವಾ ಕಾರ್ಯಕರ್ತರೇ ಇಲ್ಲವೆಂಬುದು ನಮ್ಮ ಪ್ರಶ್ನೆ. ಇದುವರೆಗೂ ನಿರಂತರವಾದ ಸಮಸ್ಯೆಯಲ್ಲಿ ಬಳಲುತ್ತಿದ್ದ ಶ್ರಮ ಜೀವಿಗಳ ಸಂಕಷ್ಟ ಗಮನಿಸದೇ ಇದ್ದ ಅವರುಗಳು ದನ ಕಾಯುತ್ತಿದ್ದಾರಾ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

  ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಮತ್ತು ಅದಕ್ಕೆ ಬೆಂಬಲಕ್ಕೆ ನಿಂತಿರುವ ಗೌರವ ಸಲಹೆಗಾರ ನಾಗೇಶ್ ಅವರು ಒಳಗೊಂಡಂತೆ ಸಂಘಟನೆಯ ಪದಾಧಿಕಾರಿಗಳ ಕಾರಣಕ್ಕೆ ಶ್ರಮಿಕರೆಲ್ಲರೂ ಎತ್ತಂಗಡಿಯಾಗದೆ ಉಳಿದುಕೊಂಡಿದ್ದಾರೆ ಎಂಬುದನ್ನು ಕುಮಾರಸ್ವಾಮಿ ಅವರು ತಮ್ಮ ಸ್ಥಳೀಯ ಬೆಂಬಲಿಗರಿಂದ ತಿಳಿದುಕೊಂಡರೆ ಒಳ್ಳೆಯದು.ಅದನ್ನು ಬಿಟ್ಟು, ಕನಿಷ್ಠ ತಾಳ್ಮೆ ಇಲ್ಲದೆ ಪ್ರಶ್ನೆ ಕೇಳಲು ಇನ್ನು ಆರಂಭಿಸುತ್ತಿದ್ದ ನಾಗೇಶ್ ಅವರ ಮೇಲೆ ರೇಗಿದ್ದನ್ನು ಸಂಘಟನೆಯು ಖಂಡಿಸುತ್ತದೆ ಎಂದಿದ್ದಾರೆ.

ಜನಪ್ರತಿನಿಧಿಗಳು ಮತ್ತು ಜನಪ್ರತಿನಿಧಿಗಳಾಗಲು ಬಯಸುವ ರಾಜಕಾರಣಿಗಳು ಜನರ ನಿಜವಾದ ಸಮಸ್ಯೆ ತಿಳಿದು ಅದಕ್ಕೆ ಪರಿಹಾರ ಕೊಡಿಸಲು ಯತ್ನಿಸಬೇಕು. ಅದನ್ನು ಬಿಟ್ಟು ಯಾವುದಾದರೂ ದುರಂತ ಸಂಭವಿಸಿದಾಗ ದಿಢೀರನೆ ಬಂದು ತಕ್ಷಣ ಪರಿಹಾರ ಕಲ್ಪಿಸಿ ಉಪಕಾರ ಮಾಡಿದಂತೆ ವರ್ತಿಸುವುದು ಸರಿಯಲ್ಲ. ಮಾನವೀಯವಾಗಿ ಸ್ಪಂದಿಸುವ ಯಾರದೇ ನೆರವಿಗೆ ನಮ್ಮ ಸ್ವಾಗವಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X