Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಲ್ಲವನ್ನೂ-ಎಲ್ಲರನ್ನೂ ಪ್ರೀತಿಸುವುದು...

ಎಲ್ಲವನ್ನೂ-ಎಲ್ಲರನ್ನೂ ಪ್ರೀತಿಸುವುದು ಭಾರತೀಯ ಸಂಸ್ಕೃತಿ : ಗಿರೀಶ್ ಭಟ್

‘ಕನ್ನಡವು ಭಾರತವೂ ಜಗವೆಲ್ಲವೂ ಒಂದೇ’ ಕೃತಿಯನ್ನು ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ18 Aug 2017 11:50 PM IST
share
ಎಲ್ಲವನ್ನೂ-ಎಲ್ಲರನ್ನೂ ಪ್ರೀತಿಸುವುದು ಭಾರತೀಯ ಸಂಸ್ಕೃತಿ : ಗಿರೀಶ್ ಭಟ್

ಪುತ್ತೂರು, ಆ. 18: ಹಿರಿಯರೆಲ್ಲ ನಮ್ಮ ನಾಡನ್ನು ಭಾಷೆಯನ್ನು ಹಾಗೂ ಸಂಸ್ಕೃತಿಯನ್ನು ಪ್ರೀತಿಸಿ ಎಂದು ಕರೆ ನೀಡಿದರೇ ಹೊರತು ಭಾಷೆ, ನಾಡನ್ನು ದ್ವೇಷಿಸಿ ಎನ್ನಲಿಲ್ಲ. ಯಾವುದನ್ನೂ ದ್ವೇಷಿಸದೇ ನಮ್ಮ ನಾಡನ್ನು ಪ್ರೀತಿಸುವ ಗುಣ ಭಾರತೀಯರ ವಿಶೇಷತೆಯಾಗಿದೆ ಎಂದು ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗಿರೀಶ್ ಭಟ್ ಅಜಕ್ಕಳ ಹೇಳಿದರು.

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳದ ಚಿಂತನ ಬಯಲು ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಕಾಲೇಜಿನ ಕನ್ನಡ ಉಪನ್ಯಾಸಕ ರೋಹಿಣಾಕ್ಷ ಶಿರ್ಲಾಲು ಅವರ ‘ಕನ್ನಡವು ಭಾರತವೂ ಜಗವೆಲ್ಲವೂ ಒಂದೇ’ ಕೃತಿಯನ್ನು ಲೋಕಾರ್ಪಣೆಗೈದು ಮಾತನಾಡಿದರು.

ದೇಶ ಪ್ರೇಮವೆಂದರೆ ಕೇವಲ ಭೂಪಟ ಪ್ರೇಮವಲ್ಲ. ದೇಶದ ಸಂಸ್ಕೃತಿ, ಸಂಪತ್ತನ್ನು ಪ್ರೀತಿಸಬೇಕು, ಅಂತೆಯೆ ಉಳಿಸಿ ಬೆಳೆಸಬೇಕು. ನಮ್ಮ ದೇಶದಷ್ಟು ವೈವಿಧ್ಯತೆ ಬೇರೆ ದೇಶಗಳಲ್ಲಿ ಕಾಣಸಿಗುವುದಿಲ್ಲ. ಕವಿಗಳ ನುಡಿ ಏಕೀಕರಣದ ಸಂದರ್ಭದಲ್ಲಿ ಜನರ ಸ್ವ ಪ್ರಜ್ಞೆಯನ್ನು ಜಾಗೃತಗೊಳಿಸಿದೆ. ಸಾಂಸ್ಕ್ರತಿಕವಾಗಿ, ಚಾರಿತ್ರಿಕವಾಗಿ ಬ್ರಿಟಿಷರು ನಡೆಸುತ್ತಿದ್ದ ದಬ್ಬಾಳಿಕೆಯನ್ನು ಸಾಹಿತ್ಯ ವಿರೋಧಿಸಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಮ್. ಕೃಷ್ಣ ಭಟ್ ಅವರು ಮಾತನಾಡಿ, ವಸುದೈವ ಕುಟುಂಬಕಂ ಎಂಬುದು ಒಂದು ಅಪ್ಪಟ ಭಾರತೀಯ ಕಲ್ಪನೆ. ಜಗತ್ತನ್ನು ಒಂದು ಕುಟುಂಬದಂತೆ ಕಾಣುವುದು ಕೇವಲ ಭಾರತೀಯರಿಂದ ಮಾತ್ರ ಸಾಧ್ಯ. ವಿಶ್ವ ಗ್ರಾಮದ ಪರಿಕಲ್ಪನೆ ಜಗತ್ತನ್ನು ಹತ್ತಿರ ತಂದಿದೆ. ಆದರೆ ಮನಸ್ಸುಗಳನ್ನು, ಮಾನವ ಸಂಬಂಧಗಳನ್ನು ದೂರ ಮಾಡಿದೆ ಎಂದರು.

ಗ್ರಾಮವೇ ವಿಶ್ವ ಎಂಬ ಗಾಂಧೀಜಿಯವರ ಪರಿಕಲ್ಪನೆ ಭೌತಿಕವಾಗಿ ದೂರವಿದ್ದರೂ ಮನುಷ್ಯ ಸಂಬಂಧಗಳನ್ನು ಹತ್ತಿರ ಎಂಬಂತೆ ತೋರಿಸುತ್ತದೆ. ಹಿಂದೆ ಸಾಹಿತ್ಯ ಎಂಬುದು ಒಗ್ಗಟ್ಟು, ಒಟ್ಟು ಸೇರಿಸುವಿಕೆಯ ಪ್ರತೀಕವಾದರೆ ರಾಜಕೀಯ ಒಡೆದು ಆಳುವ ವಿಚಾರ ಎಂಬ ಪ್ರತೀತಿ ಇತ್ತು. ಆದರೆ ಈಗ ರಾಜಕೀಯದಲ್ಲಿ ಸಾಹಿತ್ಯದ ಪ್ರಭಾವ ಹಾಗೆಯೆ ಸಾಹಿತ್ಯದಲ್ಲಿ ರಾಜಕೀಯ ಕಂಡುಬರುತ್ತಿರುವುದು ವಿಪರ್ಯಾಸ ಎಂದು ತಿಳಿಸಿದರು.

ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಎಮ್.ಟಿ. ಜಯರಾಮ್ ಭಟ್, ಪ್ರಾಂಶುಪಾಲ ಪೀಟರ್ ವಿಲ್ಸನ್ ಪ್ರಭಾಕರ್, ಶೈಕ್ಷಣಿಕ ನಿರ್ದೇಶಕ ವಿಘ್ನೇಶ್ವರ ವರ್ಮುಡಿ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಧರ್ ಹೆಚ್.ಜಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃತಿ ಕತೃ ಕನ್ನಡ ಉಪನ್ಯಾಸಕ ರೋಹಿಣಾಕ್ಷ ಶಿರ್ಲಾಲು ವಂದಿಸಿದರು. ಉಪನ್ಯಾಸಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X