Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರದ ಮೂಲಸೌಕರ್ಯ ಹೆಚ್ಚಳಕ್ಕೆ ನೆರವು:...

ನಗರದ ಮೂಲಸೌಕರ್ಯ ಹೆಚ್ಚಳಕ್ಕೆ ನೆರವು: ಡಿ.ವಿ.ಸದಾನಂದಗೌಡ

ಉಪ ಸಾರಿಗೆ ಆಯುಕ್ತರ ಕಚೇರಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ19 Aug 2017 6:58 PM IST
share
ನಗರದ ಮೂಲಸೌಕರ್ಯ ಹೆಚ್ಚಳಕ್ಕೆ ನೆರವು: ಡಿ.ವಿ.ಸದಾನಂದಗೌಡ

ಬೆಂಗಳೂರು, ಆ.19: ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕೇಂದ್ರ ಹಾಗೂ ರಾಜ್ಯ ಸರಕಾರದ ಕರ್ತವ್ಯ. ನಮ್ಮ ಕಲ್ಪನೆಗೂ ಮೀರಿ ನಗರ ವೇಗವಾಗಿ ಬೆಳೆಯುತ್ತಿದೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.

ಶನಿವಾರ ಕೆ.ಆರ್.ಪುರ ಕ್ಷೇತ್ರದ ಕಸ್ತೂರಿ ನಗರದಲ್ಲಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಳೆದ ಒಂದು ದಶಕದ ಅವಧಿಯಲ್ಲಿ ಬೆಂಗಳೂರು ಸಾಕಷ್ಟು ಬದಲಾವಣೆಯಾಗಿದೆ. ಸುಮಾರು 1.20 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರಿನಲ್ಲಿ ಸುಮಾರು 69 ಲಕ್ಷ ವಾಹನಗಳಿವೆ. ಪ್ರತಿದಿನ ಸುಮಾರು 30 ಸಾವಿರ ವಾಹನಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ ಎಂದು ಸದಾನಂದಗೌಡ ಹೇಳಿದರು.

 ಬೆಂಗಳೂರು ನಗರದ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗಲು ಕನಿಷ್ಠ ಎರಡರಿಂದ ಮೂರು ಗಂಟೆ ಬೇಕಾಗುತ್ತದೆ. ವಾಹನಗಳ ಸಂಚಾರ ದಟ್ಟಣೆ ಯಿಂದಾಗಿ ಮನುಷ್ಯನ ಸಮಯ, ಇಂಧನ ವ್ಯರ್ಥವಾಗುತ್ತಿದೆ. ನಗರದ ಬೆಳವಣಿಗೆಗೆ ವಿಸ್ತೃತ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಸದಾನಂದಗೌಡ ತಿಳಿಸಿದರು.

ಕಳೆದ 10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಹಲವಾರು ಮೇಲ್ಸೆತುವೆಗಳ ನಿರ್ಮಾಣ, ರಸ್ತೆಗಳ ಅಗಲೀಕರಣವಾಗಿದೆ. ಆದರೂ, ಜನರ ನಿರೀಕ್ಷೆಯ ಹಂತ ತಲುಪಲು ನಮಗೆ ಸಾಧ್ಯವಾಗುತ್ತಿಲ್ಲ. ಬಿಎಂಟಿಸಿ, ಕೆಎಸ್ಸಾರ್ಟಿಸಿ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಿ ಸಾಮೂಹಿಕ ಸಾರಿಗೆ ವ್ಯವಸ್ಥೆಗೆ ಸರಕಾರ ಒತ್ತು ನೀಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

  ಮೆಟ್ರೋ ರೈಲು ಸಂಚಾರದ ಮೊದಲ ಹಂತ ಲೋಕಾರ್ಪಣೆಗೊಂಡಿದ್ದು, ಪ್ರತಿದಿನ ಸುಮಾರು 10 ಲಕ್ಷ ಜನರಿಗೆ ಅನುಕೂಲವಾಗುತ್ತಿದೆ. ದಿಲ್ಲಿಯ ಮೆಟ್ರೋದಲ್ಲಿ ಪ್ರತಿದಿನ ಸುಮಾರು 36-38 ಲಕ್ಷ ಜನ ಸಂಚರಿಸುತ್ತಿದ್ದಾರೆ. ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್‌ವರೆಗೆ ಉಪನಗರ ರೈಲು ಸೇವೆ ಒದಗಿಸುವ ಯೋಜನೆಗೂ ಚಾಲನೆ ನೀಡಲಾಗಿದೆ ಎಂದು ಸದಾನಂದಗೌಡ ಹೇಳಿದರು.

ಕೇಂದ್ರ ಸರಕಾರವು ದೇಶದ 100 ನಗರಗಳನ್ನು ಸ್ಮಾರ್ಟ್ ಸಿಟಿಗಳನ್ನಾಗಿ ಅಭಿವೃದ್ಧಿಪಡಿಸುತ್ತಿದೆ. ಅಭಿವೃದ್ಧಿ ಏಕಮುಖದಿಂದ ಸಾಧ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಹಾಗೂ ಕೇಂದ್ರ ಎರಡು ನಡುವೆ ಸಹಕಾರ ಇರಬೇಕು. ಐಟಿಐ ಬಳಿ ಇರುವ ನಾಲ್ಕು ಎಕರೆ ಜಾಗವನ್ನು ಬಸ್ ನಿಲ್ದಾಣಕ್ಕಾಗಿ ರಾಜ್ಯ ಸರಕಾರಕ್ಕೆ ಹಸ್ತಾಂತರಿಸುವ ಕುರಿತು ಸಂಬಂಧಪಟ್ಟ ಕೇಂದ್ರ ಸಚಿವರೊಂದಿಗೆ ಚರ್ಚಿಸುವುದಾಗಿ ಅವರು ಭರವಸೆ ನೀಡಿದರು.

ಉದ್ಘಾಟನಾ ಭಾಷಣ ಮಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಗರದಲ್ಲಿ 11 ಪ್ರಾದೇಶಿಕ ಸಾರಿಗೆ ಕಚೇರಿಗಳಿವೆ. ಈ ಪೈಕಿ ನಾಲ್ಕು ಕಚೇರಿಗಳು ಮಾತ್ರ ಸ್ವಂತ ಕಟ್ಟಡ ಹೊಂದಿವೆ. ಈಗ ಬೆಂಗಳೂರು(ಪೂರ್ವ) ಪ್ರಾದೇಶಿಕ ಸಾರಿಗೆ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ್ದೇವೆ. ಇಲ್ಲದೆ, ಬೆಂಗಳೂರು (ಕೇಂದ್ರ) ಮತ್ತು ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಗಳ ನೂತನ ಕಟ್ಟಡಗಳು ಪೂರ್ಣಗೊಳ್ಳುವ ಹಂತದಲ್ಲಿವೆ ಎಂದರು.

ಸಾರಿಗೆ ಇಲಾಖೆಗೆ ಸಂಬಂಧಿಸಿದ ಸೇವೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಜನಸಾಮಾನ್ಯರ ದೂರುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಚಾಲನ ಪರವಾನಗಿ, ವಾಹನಗಳ ತೆರಿಗೆ ಪಾವತಿ ಸೇರಿದಂತೆ ಇನ್ನಿತರ ಸೇವೆಗಳನ್ನು ಆನ್‌ಲೈನ್‌ನಲ್ಲಿ ಒದಗಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥ ನಿರ್ಮಿಸಲಾಗುವುದು. ಈಗಾಗಲೆ, ಜ್ಞಾನಭಾರತಿಯಲ್ಲಿ ಇಂತಹ ಪಥವನ್ನು ನಿರ್ಮಾಣ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಿಸಲಾಗಿರುವ ಪಥವನ್ನು ಆ.30ರಂದು ಲೋಕಾರ್ಪಣೆಗೊಳಿಸಲಾಗುವುದು ಎಂದು ಅವರು ಹೇಳಿದರು.

ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ, ನೋಂದಣಿ ಹಾಗೂ ಮುದ್ರಾಂಕ ಇಲಾಖೆಯ ನಂತರ ಸಾರಿಗೆ ಇಲಾಖೆಯೆ ಅತೀ ಹೆಚ್ಚು ಆದಾಯವನ್ನು ರಾಜ್ಯ ಸರಕಾರದ ಬೊಕ್ಕಸಕ್ಕೆ ನೀಡುತ್ತಿದೆ. ಸುಮಾರು 6600 ಕೋಟಿ ರೂ.ಆದಾಯ ಸಾರಿಗೆ ಇಲಾಖೆಯಿಂದ ಸರಕಾರಕ್ಕೆ ಬರುತ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಭೈರತಿ ಬಸವರಾಜ ವಹಿಸಿದ್ದರು. ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತ ಬಿ.ದಯಾನಂದ, ಜಂಟಿ ಸಾರಿಗೆ ಆಯುಕ್ತ ಜೆ.ಜ್ಞಾನೇಂದ್ರಕುಮಾರ್, ಬಿಬಿಎಂಪಿ ಸದಸ್ಯರಾದ ಎಸ್.ರಾಜು, ಎಂ.ಎನ್.ಶ್ರೀಕಾಂತ್, ಸುರೇಶ್, ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X