Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರೆಬೆತ್ತಲೆ ಮೂಲಕ ಗ್ರಾಮೀಣ ಅಂಚೆ ನೌಕರರ...

ಅರೆಬೆತ್ತಲೆ ಮೂಲಕ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ: 4ನೇ ದಿನವು ಮುಂದುವರೆದ ಅನಿರ್ಧಿಷ್ಟವಧಿ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ19 Aug 2017 10:50 PM IST
share
ಅರೆಬೆತ್ತಲೆ ಮೂಲಕ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ: 4ನೇ ದಿನವು ಮುಂದುವರೆದ ಅನಿರ್ಧಿಷ್ಟವಧಿ ಮುಷ್ಕರ

ಹಾಸನ, ಆ. 19: 7ನೆ ವೇತನ ಆಯೋಗ ಶೀಘ್ರ ಜಾರಿಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಹಾಸನ ವಿಭಾಗದಿಂದ ಮುಖ್ಯ ಅಂಚೆ ಕಛೇರಿ ಮುಂದೆ ನಡೆಸಲಾಗುತ್ತಿರುವ ಅನಿರ್ಧಿಷ್ಟವಧಿ ಮುಷ್ಕರವನ್ನು 4ನೇ ದಿನ ಕಪ್ಪು ಪಟ್ಟಿಯೊಂದಿಗೆ ಅರೆಬೆತ್ತಲೆ ಆಗುವ ಮೂಲಕ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು.

  ಗ್ರಾಮೀಣ ಅಂಚೆ ನೌಕರರು, ಕೇಂದ್ರ ಸರಕಾರ ಖಾಯಂ ಮಾಡುವುದಕ್ಕೆ ಹಾಗೂ 7ನೇ ವೇತನ ಆಯೋಗ ಜಾರಿ ಮಾಡಲು ನಮ್ಮ ಆಗ್ರಹವಾಗಿದೆ. ದೇಶದಲ್ಲಿರುವ ಸುಮಾರು 100 ಕೋಟಿ ಜನರಿಗೆ ಸೇವೆಯನ್ನು ಒದಗಿಸಿದ್ದರೂ ಸ್ವಾತಂತ್ರ್ಯ ಬಂದು 71 ವರ್ಷ ಕಳೆದರೂ ಗ್ರಾಮೀಣ ಅಂಚೆ ನೌಕರರನ್ನು ಕೇಂದ್ರ ಸರಕಾರ ಇದುವರೆಗೂ ಖಾಯಂ ಮಾಡಿರುವುದಿಲ್ಲ. ಅಂಚೆ ಇಲಾಖೆಯಲ್ಲಿ ಇಲಾಖಾ ಅಧಿಕಾರಿ ವರ್ಗದವರು ಎರಡು ಇಲಾಖೆಯನ್ನು ಸೃಷ್ಠಿಸಿ ಗ್ರಾಮೀಣ ಅಂಚೆ ನೌಕರರನ್ನು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವುದಾಗಿ ದೂರಿದರು. ಇಲಾಖಾ ನೌಕರರು ಮತ್ತ ಇಲಾಖೇತರ ನೌಕರರು, ಇಲಾಖೆ ನೌಕರರಿಗೆ ಕೇಂದ್ರ ಸರಕಾರ ಖಾಯಂ ನೌಕರರೆಂದು ಕರೆದರೇ, ಗ್ರಾಮೀಣ ಅಂಚೆ ನೌಕರರಿಗೆ ಹಂಗಾಮಿ ನೌಕರರೆಂದು ಹೆಸರಿಟ್ಟು ಗ್ರಾಮೀಣ ಅಂಚೆ ನೌಕರರ ಭವಿಷ್ಯವನ್ನೇ ಇಲಾಖಾ ಅಧಿಕಾರ ವರ್ಗಗಳು ಹಾಳು ಮಾಡುತ್ತಿದ್ದಾರೆ.

ಈ ಪ್ರಕರಣವನ್ನು ಕೇಂದ್ರ ಸರಕಾರ ಶೀಘ್ರದಲ್ಲಿಯೇ ಸಿಬಿಐ ತನಿಖೆಗೆವಹಿಸುವಂತೆ ಆಗ್ರಹಿಸಿದರು. ಗ್ರಾಮೀಣ ಅಂಚೆ ನೌಕರರಿಗೆ ಕೆಲಸವೇ ಇಲ್ಲವೆಂದು ಇಲಾಖಾ ಅಧಿಕಾರಿಯವರು ಕೇಂದ್ರ ಸರಕಾರಕ್ಕೆ ಮತ್ತು ಅಂಚೆ ಇಲಾಖೆಗೆ ಸುಳ್ಳು ವರದಿಯನ್ನು ನೀಡುತ್ತಿರುವುದಾಗಿ ಆರೋಪಿಸಿದರು.

ಗ್ರಾಮೀಣ ಅಂಚೆ ನೌಕರರು 8 ಗಂಟೆಗಿಂತಲೂ ಅಧಿಕ ಕೆಲಸ ಮಾಡಿದರೂ ಕೇವಲ 3 ರಿಂದ 5 ಗಂಟೆಗಳ ವೇತನವನ್ನು ಮಾತ್ರ ಕೊಡಲಾಗುತ್ತಿದೆ. ಗ್ರಾಮೀಣ ಅಂಚೆ ನೌಕರರು ದೇಶದಲ್ಲಿ ಸುಮಾರು 50 ಸಾವಿರ ಕೂಟಿಗೂ ಅಧಿಕವಾಗಿ ಆರ್‍ಪಿಎಲ್‍ಐ ಮಾಡಿಸಿ ಇಲಾಖೆಗೆ ಆಧಾಯ ತಂದು ಕೊಟ್ಟರೂ ಕೂಡ ಗ್ರಾಮೀಣ ಅಂಚೆ ನೌಕರರನ್ನು ಖಾಯಂ ಮಾಡಿರುವುದಿಲ್ಲ. ಕೂಡಲೇ ಕೆಲಸ ಖಾಯಂ ಮಾಡಿ 7ನೇ ವೇತನವನ್ನು ಶೀಘ್ರದಲ್ಲಿಯೇ ಜಾರಿಗೊಳಿಸುವವರೆಗೂ ದೇಶದಲ್ಲಿರುವ 2 ಲಕ್ಷದ 80 ಸಾವಿರ ಗ್ರಾಮೀಣ ಅಂಚೆ ನೌಕರರು ಅನಿಧಿಷ್ಠವಧಿ ಮುಷ್ಕರದಲ್ಲಿ ತೊಡಗಲಿದ್ದಾರೆ ಎಂದು ಎಚ್ಚರಿಸಿದರು. ಆಗಸ್ಟ್ 21ರ ಸೋಮವಾರದಿಂದ ಹಾಸನ ವಿಭಾಗ ಸೇರಿದಂತೆ ರಾಜ್ಯಾಧ್ಯಂತ ಎಲಾ ಗ್ರಾಮೀಣ ಅಂಚೆ ನೌಕರರು ಬೆಂಗಳೂರಿನ ಸಿಪಿಎಂಜಿ ಕಛೇರಿ ಮುಂದೆ ಧರಣಿ ನಡೆಸಿ, ಕಪ್ಪು ಭಾವುಟ ಪ್ರದರ್ಶಿಸಿ ಅರೆಬೆತ್ತಲೆ ಮೆರವಣಿಗೆ, ಹೆದ್ದಾರಿ ರಸ್ತೆ ತಡೆ ಚಳುವಳಿ, ರಾಜಭವನ ಮುತ್ತಿಗೆ ಸೇರಿದಂತೆ ವಿಭಿನ್ನ ರೀತಿಯಲ್ಲಿ ಚಳುವಳಿ ಮಾಡುವುದಾಗಿ ಎಚ್ಚರಿಸಿದ್ದಾರೆ.

     ಮುಷ್ಕರದಲ್ಲಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಹಾಸನ ವಿಭಾಗದ ಅಧ್ಯಕ್ಷ ಜಿ.ಬಿ. ಕಾಳಿಂಗೇಗೌಡ, ಕಾರ್ಯದರ್ಶಿ ಕೆ.ಜೆ. ಶಿವಾಜಿ, ಗೌರವ ಸಲಹಾಧ್ಯಕ್ಷ ಯೋಗನರಸಿಂಹ, ಗೌರವಧ್ಯಕ್ಷ ಟಿ.ಡಿ. ರಂಗಯ್ಯ, ಖಜಾಂಚಿ ಜಯಕುಮಾರ್, ಶ್ರೀನಿವಾಸ್, ದೇವರಾಜು ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X