Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಿಕ್ಕನಹಳ್ಳಿ: ಬಂಡೆ ಉದ್ಯಾನವನ...

ಚಿಕ್ಕನಹಳ್ಳಿ: ಬಂಡೆ ಉದ್ಯಾನವನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ20 Aug 2017 6:23 PM IST
share
ಚಿಕ್ಕನಹಳ್ಳಿ: ಬಂಡೆ ಉದ್ಯಾನವನ ಲೋಕಾರ್ಪಣೆ

ಬೆಂಗಳೂರು, ಆ.20: ಸಿಲಿಕಾನ್ ಸಿಟಿಯ ಬೊಮ್ಮನಹಳ್ಳಿ ವಾರ್ಡಿನ ದೇವರ ಚಿಕ್ಕನಹಳ್ಳಿಯಲ್ಲಿ ವಿಶಿಷ್ಟವಾಗಿ ನಿರ್ಮಾಣಗೊಂಡಿರುವ ದೇಶದ ಮೊದಲ ಬಂಡೆ ಉದ್ಯಾನವನವನ್ನು ಕೇಂದ್ರ ಸಚಿವ ಅನಂತ್‌ಕುಮಾರ್, ಬಿಬಿಎಂಪಿ ಮೇಯರ್ ಪದ್ಮಾವತಿ ಸೇರಿದಂತೆ ಇನ್ನಿತರ ಗಣ್ಯರು ಲೋಕಾರ್ಪಣೆ ಮಾಡಿದರು.

ಈ ವೇಳೆ ಮಾತನಾಡಿದ ಅನಂತ್‌ಕುಮಾರ್, ಸಾರ್ವಜನಿಕರ ಬಗ್ಗೆ ಕಾಳಜಿ, ಅವರಿಗಾಗಿ ಕೆಲಸ ಮಾಡಬೇಕೆಂಬ ಹಪಾಹಪಿತನ ಜನಪ್ರತಿನಿಧಿಗಳಲ್ಲಿದ್ದರೆ ಕಲ್ಲೂ ಕೂಡ ಮಾತನಾಡಬಲ್ಲದು ಎಂಬ ಮಾತಿಗೆ ಈ ಬಂಡೆ ಉದ್ಯಾನವನ ಧ್ಯೋತಕವಾಗಿ ನಿಂತಿದೆ ಎಂದು ಅಭಿಪ್ರಾಯಪಟ್ಟರು.

ಈ ಒಂದೂವರೆ ಎಕರೆ ಜಾಗದಲ್ಲಿ ಕಸದ ರಾಶಿ ಹಾಕಿದ್ದು, ಗಬ್ಬು ವಾಸನೆ ಬರುತ್ತಿತ್ತು. ಸಾರ್ವಜನಿಕರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಓಡಾಡುವ ಸ್ಥಿತಿ ಇತ್ತು. ಹೀಗಾಗಿ, ಇಲ್ಲಿ ವಿಶೇಷವಾಗಿ ಏನಾದರೂ ಮಾಡಬೇಕು ಎಂದಾಗ ಈ ಬಂಡೆ ಉದ್ಯಾನವನ ನೆನಪಿಗೆ ಬಂತು. ಅದರ ಭಾಗವಾಗಿ ನಾಲ್ಕು ತಿಂಗಳು ಕಾಲಾವಧಿಯಲ್ಲಿ ಅತ್ಯುತ್ತಮವಾದ ಉದ್ಯಾನವನ ನಿರ್ಮಾಣವಾಗಿದೆ ಎಂದು ಪಾಲಿಕೆ ಸದಸ್ಯ ಸಿ.ಆರ್.ಮೋಹನ್‌ರಾಜು ತಿಳಿಸಿದರು.

ಮಹಾಬಲಿಪುರದಿಂದ ಕಪ್ಪು ಕಲ್ಲುಗಳನ್ನು ತಂದು ನಿರ್ಮಾಣ ಮಾಡಲಾಗಿದೆ. ಆರಂಭದಲ್ಲಿ ಬಿಬಿಎಂಪಿ ಲೋಗೋ ಇರುವ ಬಂಡೆ ಎಲ್ಲರನ್ನೂ ಸ್ವಾಗತಿಸಲಿದೆ. ಬುದ್ಧನ ಪ್ರತಿಕೃತಿ, ಮಕ್ಕಳಿಗೆ ಮುದ ನೀಡುವ ಹಲವು ಪ್ರಾಣಿಗಳ ಪ್ರತಿಕೃತಿಗಳು ಇಲ್ಲಿವೆ. ಅಲ್ಲದೆ, ರೈತರು ವ್ಯವಸಾಯಕ್ಕೆ ಬಳಸುವ ಹಲವಾರು ಉಪಕರಣಗಳಿವೆ. ಜೊತೆಗೆ, ವಿಧಾನಸೌಧದಲ್ಲಿ ಅಳವಡಿಸಿರುವಂತಹ 12 ಅಡಿ ಎತ್ತರದ ಆರ್ನ ಮೆಂಟಲ್ ಫೆನ್ಸಿಂಗ್ ಸಿಸ್ಟಮ್ ಅಳವಡಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಶಾಸಕ ಸತೀಶ್ ರೆಡ್ಡಿ, ಮೇಯರ್ ಜಿ.ಪದ್ಮಾವತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X