Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತೀಯರಿಗೆ ಹಣ ಕೊಟ್ಟು ವಾಪಸ್ ಕಳುಹಿಸಿ

ಭಾರತೀಯರಿಗೆ ಹಣ ಕೊಟ್ಟು ವಾಪಸ್ ಕಳುಹಿಸಿ

ಬ್ರಿಟನ್‌ನ ಕಡು ಬಲಪಂಥೀಯ ಪಕ್ಷದ ನಾಯಕನಿಂದ ಸಲಹೆ

ವಾರ್ತಾಭಾರತಿವಾರ್ತಾಭಾರತಿ20 Aug 2017 7:05 PM IST
share
ಭಾರತೀಯರಿಗೆ ಹಣ ಕೊಟ್ಟು ವಾಪಸ್ ಕಳುಹಿಸಿ

ಲಂಡನ್, ಆ. 20: ಬ್ರಿಟನ್‌ನಲ್ಲಿರುವ ‘ಅನಗತ್ಯ’ ಜನರನ್ನು ತೆರವುಗೊಳಿಸಲು ಯುಕೆ ಇಂಡಿಪೆಂಡೆನ್ಸ್ ಪಾರ್ಟಿ (ಯುಕೆಐಪಿ) ಎಂಬ ವಲಸೆ ವಿರೋಧಿ ಹಾಗೂ ಕಡು ಬಲಪಂಥೀಯ ಪಕ್ಷದ ನಾಯಕರೊಬ್ಬರು ವಿಶಿಷ್ಟ ಯೋಜನೆಯೊಂದನ್ನು ಮುಂದಿಟ್ಟಿದ್ದಾರೆ. ಅದೆಂದರೆ, ಭಾರತೀಯರು ಸೇರಿದಂತೆ ವಲಸಿಗರು ತಮ್ಮ ತಮ್ಮ ದೇಶಗಳಿಗೆ ಹಿಂದಿರುಗಿ ಹೋಗಲು ಹಣ ಕೊಡುವುದು!

‘ತ್ವರಿತ ಗತಿಯ ರಫ್ತು-ಆಮದು ಯೋಜನೆ’ಯನ್ವಯ ಮುಖ್ಯವಾಗಿ ಭಾರತೀಯರು ಮತ್ತು ತಾಂಝಾನಿಯನ್ನರನ್ನು ವಾಪಸ್ ಕಳುಹಿಸಬೇಕು ಎಂಬುದಾಗಿ ಜಾನ್ ರೀಸ್-ಎವನ್ಸ್ ಅಭಿಪ್ರಾಯಪಟ್ಟಿದ್ದಾರೆ. ಅವರ ಪ್ರಕಾರ, ನಿರ್ದಿಷ್ಟ ಕಾಮನ್‌ವೆಲ್ತ್ ದೇಶಗಳ ವಲಸಿಗರು ಬ್ರಿಟನ್ ತೊರೆಯಲು 9,000 ಪೌಂಡ್ (ಸುಮಾರು 7.40 ಲಕ್ಷ ರೂಪಾಯಿ)ವರೆಗೆ ಹಣ ನೀಡಬಹುದಾಗಿದೆ.

‘‘ಇದೇನೂ ವಿನಾಶಕಾರಿಯಲ್ಲ, ಅಥವಾ ಫ್ಯಾಶಿಸ್ಟ್ ಧೋರಣೆಯೂ ಅಲ್ಲ. ಉತ್ತಮ ಮಾನವ ತಳಿಯನ್ನು ಹೊಂದುವ ಪ್ರಕ್ರಿಯೆಯಲ್ಲಿ ನನಗೆ ಆಸಕ್ತಿಯಿಲ್ಲ. ಆದಾಗ್ಯೂ, ವಲಸೆ ಪ್ರಮಾಣವನ್ನು ವರ್ಷಕ್ಕೆ 10 ಲಕ್ಷದಷ್ಟು ಕಡಿಮೆ ಮಾಡುವ ಗುರಿಯನ್ನು ತಲುಪಲು ಶ್ರಮಿಸಲು ನಾನು ಪ್ರಯತ್ನಿಸುತ್ತೇನೆ’’ ಎಂದು ಅವರು ಹೇಳಿದ್ದಾರೆನ್ನಲಾಗಿದೆ.

ಗ್ರೇಟರ್ ಮ್ಯಾಂಚೆಸ್ಟರ್‌ನಲ್ಲಿ ಈ ತಿಂಗಳ ಆದಿ ಭಾಗದಲ್ಲಿ ನಡೆದ ಸಭೆಯಲ್ಲಿ ಅವರು ಮಾಡಿದ ಭಾಷಣದ ವೀಡಿಯೊದಲ್ಲಿ ಈ ಮಾತುಗಳಿವೆ. ಈ ಸುದ್ದಿಯನ್ನು ‘ಡೇಲಿ ಮಿರರ್’ ಮೊದಲು ಪ್ರಸಾರಿಸಿದೆ.

‘‘ಬ್ರಿಟನ್ ಸರಕಾರದ ವಿದೇಶಿ ನೆರವು ನಿಧಿ ಬಜೆಟನ್ನು ಈಗಿನ ವರ್ಷಕ್ಕೆ 13 ಬಿಲಿಯ ಪೌಂಡ್ (1,06,821 ಕೋಟಿ ರೂಪಾಯಿ)ನಿಂದ 1 ಬಿಲಿಯ ಪೌಂಡ್ (8217 ಕೋಟಿ ರೂಪಾಯಿ)ಗೆ ಕಡಿತಗೊಳಿಸಬೇಕು. ಅದರಲ್ಲಿ ಉಳಿಯುವ ಹಣವನ್ನು ಬ್ರಿಟಿಶ್ ಭಾರತೀಯರು ಮತ್ತು ತಾಂಝಾನಿಯನ್ನರು ಸೇರಿದಂತೆ ಅವಳಿ ಪೌರತ್ವ ಹೊಂದಿರುವ ಬ್ರಿಟಿಶ್ ನಾಗರಿಕರಿಗೆ ಪರಿಹಾರ ರೂಪದಲ್ಲಿ ನೀಡಿ ವಾಪಸ್ ಕಳುಹಿಸಬೇಕು. ಅವರು ತಮ್ಮ ದೇಶಗಳಲ್ಲಿ ತಮ್ಮದೇ ಆದ ಉದ್ಯಮಗಳನ್ನು ನಡೆಸಬಹುದು’’ ಎಂಬ ಸಲಹೆಯನ್ನು ಕಡು ಬಲಪಂಥೀಯ ನಾಯಕ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X