Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗುಜರಾತ್ ಚುನಾವಣೆಯಲ್ಲಿ ಸ್ಪರ್ಧೆ:...

ಗುಜರಾತ್ ಚುನಾವಣೆಯಲ್ಲಿ ಸ್ಪರ್ಧೆ: ಜಿಗ್ನೇಶ್ ಮೆವಾನಿ

ವಾರ್ತಾಭಾರತಿವಾರ್ತಾಭಾರತಿ20 Aug 2017 8:16 PM IST
share
ಗುಜರಾತ್ ಚುನಾವಣೆಯಲ್ಲಿ ಸ್ಪರ್ಧೆ: ಜಿಗ್ನೇಶ್ ಮೆವಾನಿ

ಬೆಂಗಳೂರು, ಆ.20: ಬಿಜೆಪಿ, ಸಂಘಪರಿವಾರದ ವಿರುದ್ಧ ರಾಜಕೀಯ ಹೋರಾಟ ಶುರು ಮಾಡಲಿದ್ದು, ಪ್ರಸ್ತುತ ಸಾಲಿನ ಗುಜರಾತ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಗುಜರಾತ್‌ನ ಉನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೆವಾನಿ ಹೇಳಿದ್ದಾರೆ.

ರವಿವಾರ ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಫೈರೋಝ್ ಎಸ್ಟೇಟ್‌ನಲ್ಲಿ ಕೋಮು ಸೌಹಾರ್ದ ವೇದಿಕೆ ಸೇರಿದಂತೆ ಪ್ರಗತಿಪರರು ಏರ್ಪಡಿಸಿದ್ದ, ಗುಜರಾತ್ ರಾಜ್ಯದ ರಾಜಕಾರಣ ಮತ್ತು ಸಾಮಾಜಿಕ ಚಳವಳಿಗಳ ಸ್ಥಿತಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದಲಿತರ ಹಕ್ಕುಗಳ ಉಳಿಸುವ ಜೊತೆಗೆ ಅವರ ಶ್ವಾಶತ ಸಮಸ್ಯೆಗಳನ್ನು ಬಗೆಹರಿಸಲು ಹೋರಾಟ ಒಂದೇ ಸಾಲದು, ಇದರ ಜೊತೆಗೆ ರಾಜಕೀಯ ಶಕ್ತಿಯೂ ಅಗತ್ಯ. ಹೀಗಾಗಿಯೇ, ಗುಜರಾತ್‌ನಿಂದಲೇ ರಾಜಕೀಯ ಹೋರಾಟ ಶುರು ಮಾಡಲಾಗುವುದು. ಈ ಹೋರಾಟ ಕೇವಲ ರಾಜಕೀಯಕ್ಕೆ ಸೀಮಿತವಾಗುವುದಿಲ್ಲ್ಲ, ಬದಲಾಗಿ ದೇಶದಕ್ಕೆ ಹೊಸ ಬದಲಾವಣೆ ನೀಡಲಿದೆ ಎಂದು ನುಡಿದರು.

ಗುಜರಾತ್ ಅಭಿವೃದ್ಧಿ ದೇಶಕ್ಕೆ ಮಾದರಿ ಎಂದು ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ಆದರೆ, ಅಲ್ಲಿನ ಸತ್ಯಾಂಶ ಯಾರಿಗೂ ಗೊತ್ತಿಲ್ಲ. ಅಲ್ಲದೆ, ಉನಾದಲ್ಲಿ ನಡೆದ ದುರ್ಘಟನೆ ಬಗ್ಗೆ ಎಲ್ಲಿಯೂ ಪ್ರಧಾನಿ ಖಂಡಿಸಿಲ್ಲ ಎಂದ ಅವರು, ದಲಿತ ಮತ್ತು ಅಲ್ಪಸಂಖ್ಯಾತರನ್ನು ಗುರುತಿಸಿಕೊಂಡು ಹಲ್ಲೆ ನಡೆಸುವ ಹಿಂದೆ ಸಂಘಪರಿವಾರ, ಬಿಜೆಪಿಯ ಕೈವಾಡ ಇದೆ ಎಂದು ದೂರಿದರು.

ಭೂಮಿಗಾಗಿ ಹೋರಾಟ: ಕರ್ನಾಟಕದಲ್ಲಿ ದಲಿತರು, ಆದಿವಾಸಿಗಳಿಗೆ ಗ್ರಾಮ ಮಟ್ಟದಲ್ಲಿ ಭೂಮಿ ಮೀಸಲಿರಿಸಬೇಕು ಎಂಬ ಕಾಯಿದೆ ಇದ್ದರೂ ಕೂಡ ಅದು ಅವರಿಗೆ ಸಿಗುತ್ತಿಲ್ಲ. ಅದನ್ನು ಪಡೆಯುಲು ಸೂಕ್ತ ಹೋರಾಟ ರೂಪಿಸಬೇಕಾದ ಅಗತ್ಯ ಇದೆ ಎಂದರು.

 ದಲಿತರು, ಆದಿವಾಸಿಗಳಿಗೆ ಭೂಮಿ ನೀಡಬೇಕೆಂದು ಆಗ್ರಹಿಸಿ ಶೀಘ್ರದಲ್ಲಿಯೇ ರಾಷ್ಟ್ರ ಮಟ್ಟದ ಅಂದೋಲವನ್ನು ನಡೆಸಲಾಗುವುದು ಎಂದ ಅವರು, ಗುಜರಾತ್, ಕರ್ನಾಟಕ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಗೋರಕ್ಷಕರ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ದ ಪ್ರತಿಯೊಬ್ಬರು ಎಚ್ಚೆತ್ತುಕೊಂಡು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಸಂವಾದಲ್ಲಿ ಹಿರಿಯ ಪತ್ರಕರ್ತೆ ಗೌರಿಲಂಕೇಶ್, ಹೋರಾಟರಾದ ನೂರ್‌ಶ್ರೀಧರ್, ಸಿರಿಮನೆ ನಾಗರಾಜ್, ಕೋಮುಸೌಹಾರ್ದ ವೇದಿಕೆಯ ಅಮ್ಜದ್ ಪಾಶಾ, ವೆಂಕಟೇಶ್, ತ್ರಿಮೂರ್ತಿ ಸೇರಿ ಪ್ರಮುಖರಿದ್ದರು.

‘ಎಲ್ಲ ದಮನಿತರ ದನಿಯಾಗಬೇಕು’

ಇದೇ ವರ್ಷದಲ್ಲಿ ಗುಜರಾತ್‌ನಲ್ಲಿ ನಡೆಯುವ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ದಲಿತರ ಹಿತಕ್ಕೆ ದುಡಿಯುವ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ದೇಶದಲ್ಲಿರುವ ಪ್ರಗತಿಪರರು ದಮನಿತರ ದನಿಯಾಗಬೇಕು.

-ಜಿಗ್ನೇಶ್ ಮೆವಾನಿ ಉನಾ ದಲಿತ ಚಳವಳಿಯ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X