Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್‌ನಿಂದ ಹಜ್ ಯಾತ್ರಿಗಳನ್ನು ಕರೆತರಲು...

ಕತರ್‌ನಿಂದ ಹಜ್ ಯಾತ್ರಿಗಳನ್ನು ಕರೆತರಲು ವಿಮಾನಗಳು ಸಿದ್ಧ

ಭೂಸ್ಪರ್ಶ ಅನುಮತಿ ಸಿಕ್ಕಿಲ್ಲ; ಸೌದಿ

ವಾರ್ತಾಭಾರತಿವಾರ್ತಾಭಾರತಿ21 Aug 2017 8:24 PM IST
share
ಕತರ್‌ನಿಂದ ಹಜ್ ಯಾತ್ರಿಗಳನ್ನು ಕರೆತರಲು ವಿಮಾನಗಳು ಸಿದ್ಧ

ದುಬೈ, ಆ. 21: ದೋಹಾ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ನಡೆಸಲು ತನಗೆ ಅನುಮತಿ ಲಭಿಸಿಲ್ಲ, ಹಾಗಾಗಿ ಕತರ್‌ನಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಕ್ಕೆ ಕರೆ ತರಲು ವಿಮಾನಗಳನ್ನು ಕಳುಹಿಸಲು ತನಗೆ ಸಾಧ್ಯವಾಗುತ್ತಿಲ್ಲ ಎಂದು ಸೌದಿ ಅರೇಬಿಯದ ಸರಕಾರಿ ಒಡೆತನದ ವಿಮಾನಯಾನ ಕಂಪೆನಿ ರವಿವಾರ ಹೇಳಿದೆ.

ಸೌದಿ ಅರೇಬಿಯ, ಯುಎಇ, ಬಹರೈನ್ ಮತ್ತು ಈಜಿಪ್ಟ್ ದೇಶಗಳು ಕತರ್ ವಿರುದ್ಧ ಜೂನ್ ತಿಂಗಳಲ್ಲಿ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿರುವುದನ್ನು ಸ್ಮರಿಸಬಹುದಾಗಿದೆ. ಅಂದಿನಿಂದ ಈ ದೇಶಗಳ ನಡುವೆ ಅಸಮಾಧಾನ ಹೊಗೆಯಾಡುತ್ತಿದೆ.

ವಾರ್ಷಿಕ ಹಜ್ ಯಾತ್ರೆಗೆ ಸೌದಿ ಅರೇಬಿಯಕ್ಕೆ ಬರುವ ಕತರ್ ಪ್ರಜೆಗಳ ಪ್ರಯಾಣಕ್ಕೆ ಏರ್ಪಾಡು ಮಾಡುವುದಾಗಿ ಸೌದಿ ಅರೇಬಿಯ ಕಳೆದ ವಾರ ಹೇಳಿತ್ತು.

ಕತರ್‌ನಿಂದ ಭೂಮಾರ್ಗವಾಗಿ ಬರುವ ಯಾತ್ರಿಕರಿಗಾಗಿ ಸೌದಿ ಅರೇಬಿಯ ಕಳೆದ ವಾರ ಕತರ್‌ನೊಂದಿಗಿನ ತನ್ನ ಗಡಿಯನ್ನು ತೆರೆದಿತ್ತು. ಅದೇ ವೇಳೆ, ಇತರ ಯಾತ್ರಿಗಳನ್ನು ಜಿದ್ದಾಗೆ ಕರೆತರಲು ಸೌದಿ ಅರೇಬಿಯ ಏರ್‌ಲೈನ್ಸ್‌ನ ವಿಮಾನಗಳನ್ನು ತನ್ನ ಸ್ವಂತ ಖರ್ಚಿನಲ್ಲಿ ದೋಹಾಕ್ಕೆ ಕಳುಹಿಸುವಂತೆಯೂ ದೊರೆ ಸಲ್ಮಾನ್ ಆದೇಶ ನೀಡಿದ್ದಾರೆ ಎಂದು ಸೌದಿ ಅರೇಬಿಯ ಹೇಳಿತ್ತು.

ಆದಾಗ್ಯೂ, ದೋಹಾ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಮತಿ ಇನ್ನೂ ಸಿಗದ ಕಾರಣ ದೋಹಾಕ್ಕೆ ಹೋಗಬೇಕಾಗಿದ್ದ ಮೊದಲ ವಿಮಾನ ಜಿದ್ದಾದಲ್ಲೇ ಬಾಕಿಯಾಗಿದೆ ಎರಂದು ವಿಮಾನಯಾನ ಕಂಪೆನಿಯ ಮಹಾನಿರ್ದೇಶಕ ಸಲೇಹ್ ಅಲ್-ಜಸೀರ್ ಹೇಳಿದ್ದಾರೆ ಎಂದು ಸೌದಿ ಸರಕಾರಿ ಸುದ್ದಿ ಸಂಸ್ಥೆ ಎಸ್‌ಪಿಎ ತಿಳಿಸಿದೆ.

ಭೂಸ್ಪರ್ಶ ಅನುಮತಿಗಾಗಿ ಹಲವಾರು ದಿನಗಳ ಹಿಂದೆಯೇ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಆರೋಪ ನಿರಾಕರಿಸಿದ ಕತರ್

ಆದರೆ, ಸೌದಿ ಅರೇಬಿಯ ಏರ್‌ಲೈನ್ಸ್ ವಿಮಾನಗಳಿಗೆ ದೋಹಾ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಮತಿ ನೀಡಲಾಗಿಲ್ಲ ಎಂಬ ವಿಮಾನಯಾನ ಸಂಸ್ಥೆಯ ಹೇಳಿಕೆಯನ್ನು ಕತರ್‌ನ ನಾಗರಿಕ ವಾಯುಯಾನ ಪ್ರಾಧಿಕಾರ (ಸಿಎಎ)ದ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ.

‘‘ಕತರ್ ಹಜ್ ಯಾತ್ರಿಕರನ್ನು ಸಾಗಿಸಲು ಅನುಮತಿ ಕೋರಿ ಸೌದಿ ಏರ್‌ಲೈನ್ಸ್ ಸಲ್ಲಿಸಿರುವ ಅರ್ಜಿ ಸಿಎಎಗೆ ಸಿಕ್ಕಿದೆ. ಈ ವಿಷಯದಲ್ಲಿ ಕತರ್ ಹಜ್ ನಿಯೋಗದ ಮೂಲಕ ನೀವು ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸಬೇಕು ಎಂಬುದನ್ನು ವಿವರಿಸಿ ಅವರಿಗೆ ಉತ್ತರಿಸಲಾಗಿದೆ. ಹಿಂದಿನಿಂದಲೂ ಅನುಸರಿಸಲಾಗುತ್ತಿರುವ ವಿಧಿವಿಧಾನಗಳಂತೆ ಅವರಿಗೆ ಈ ಮಾಹಿತಿ ನೀಡಲಾಗಿದೆ. ನಂತರವಷ್ಟೇ ಸಿಎಎ ಈ ವಿಷಯದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬಹುದಾಗಿದೆ’’ ಎಂದು ಆ ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X