ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರ ತರಬೇತಿಯ ಅರ್ಜಿ ಆಹ್ವಾನ ಅವಧಿ ವಿಸ್ತರಣೆ
ಹಾಸನ, ಆ. 21: ಕರ್ನಾಟಕ ಮಾಧ್ಯಮ ಅಕಾಡಮಿ ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತ ಬರುತ್ತಿದೆ. ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದ್ದು, ಮಾಧ್ಯಮ ಕಚೇರಿಗಳ ಸಹಕಾರವನ್ನು ಪಡೆದು ಪತ್ರಕರ್ತರ ಕೌಶಲ್ಯಾಭಿವೃದ್ಧಿ ತರಬೇತಿ ಹಮ್ಮಿಕೊಳ್ಳುವುದು ಅಕಾಡಮಿ ರೂಪಿಸಿರುವ ಹೊಸ ಯೋಜನೆಯಾಗಿದೆ.
ಪ್ರಸಕ್ತ ವರ್ಷದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ 5 ಮಂದಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆಹಾಗೂ ಇತರ ವರ್ಗಗಳ 5 ಮಂದಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ(ಒಟ್ಟು 10 ಅಭ್ಯರ್ಥಿಗಳಿಗೆ) ಪ್ರಮುಖ ದಿನಪತ್ರಿಕೆ / ಇಲೆಕ್ಟ್ರಾನಿಕ್ ಮಾಧ್ಯಮಗಳ ಕಚೇರಿಯಲ್ಲಿ ತರಬೇತಿ ಕೊಡಿಸಲು ಉದ್ದೇಶಿಸಲಾಗಿದೆ. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 10 ತಿಂಗಳ ಕಾಲ ಮಾಸಿಕ ತಲಾರೂ. 10,000/- (ಹತ್ತು ಸಾವಿರ ರೂಪಾಯಿಗಳು ಮಾತ್ರ) ಗಳ ಗೌರವಧನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಸ್ವವಿವರ, ವಿದ್ಯಾರ್ಹತೆ ಪತ್ರ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಛಾಯಾ ಚಿತ್ರ ಸ್ಕ್ಯಾನ್ ಮಾಡಿ ಇಮೇಲ್ ವಿಳಾಸ ಸಂಖ್ಯೆ traineekma@gmail.com ಮೂಲಕ ಅಥವಾ ಅಂಚೆ ಮೂಲಕ ದಿನಾಂಕ 31-08-2017ರ ಒಳಗಾಗಿ ಕಳುಹಿಸಲು ಕೋರಿದೆ.
ಅಭ್ಯರ್ಥಿಗಳನ್ನು ಮೆರಿಟ್ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು ತಿಳಿಸಿದ್ದಾರೆ.





