ಸೌದಿಯಲ್ಲಿ ರಸ್ತೆ ಅಪಘಾತ: ಕಾಸರಗೋಡು ಯುವಕ ಮೃತ್ಯು
ಕಾಸರಗೋಡು, ಆ. 22: ಸೌದಿಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ನಿವಾಸಿಯೋರ್ವರು ಮೃತಪಟ್ಟಿರುವುದಾಗಿ ಸಂಬಂಧಿಕರಿಗೆ ಮಾಹಿತಿ ಲಭಿಸಿದೆ.
ವಿದ್ಯಾನಗರ ಚಾಲಕುನ್ನು ನಿವಾಸಿ ಹರ್ಷಾದ್ (32) ಮೃತರು ಎಂದು ಗುರುತಿಸಲಾಗಿದೆ. ಸೌದಿಯ ಜುಬೈಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ಹರ್ಷಾದ್ ಚಲಾಯಿಸುತ್ತಿದ್ದ ವಾಹನ ಲಾರಿಗೆ ಢಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ.
ಐದು ವರ್ಷಗಳಿಂದ ದುಬೈಯಲ್ಲಿ ಉದ್ಯೋಗದಲ್ಲಿರುವ ಹರ್ಷಾದ್ ನಂತರ ಸೌದಿಯ ದಮಾಮ್ ನಲ್ಲಿ ಮೊಬೈಲ್ ಮಾರಾಟದ ವ್ಯವಹಾರ ನಡೆಸುತ್ತಿದ್ದರು. ಕಳೆದ ಎರಡು ತಿಂಗಳಿಂದ ಹರ್ಷಾದ್ ಆಹಾರ ಸಾಮಗ್ರಿ ಮಾರಾಟ ಮಾಡುತ್ತಿದ್ದರು. ಮಾರಾಟ ಮಾಡಲು ತೆರಳುತ್ತಿದ್ದಾಗ ವಾಹನ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಒಂದೂವರೆ ವರ್ಷಗಳ ಹಿಂದೆ ಹರ್ಷಾದ್ ವಿವಾಹವಾಗಿದ್ದರು. ಮೃತದೇಹವನ್ನು ಜುಬೈಲ್ ನ ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಊರಿಗೆ ತರುವ ಸಿದ್ಧತೆ ನಡೆಯುತ್ತಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
Next Story