Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿಯ...

ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ

ಮಾನವೀಯತೆಗೆ ಬೇಕಿಲ್ಲ ಧರ್ಮದ ಹಂಗು

ವಾರ್ತಾಭಾರತಿವಾರ್ತಾಭಾರತಿ22 Aug 2017 8:41 PM IST
share
ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ

ಮಂಗಳೂರು, ಆ. 22: ಮಾನವೀಯತೆ ಎಂಬುದು ಯಾವುದೇ ಧರ್ಮ, ಜಾತಿ, ಕಟ್ಟುಪಾಡುಗಳಿಗಿಂತಲೂ ಮಿಗಿಲಾದುದು ಎಂಬುದು ಜಿಲ್ಲೆಯ ಯುವಕರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಕೋಮು ಸಂಘರ್ಷದ ಮೂಲಕ ಸುದ್ದಿಯಾಗುವ ದ.ಕ. ಜಿಲ್ಲೆಯಲ್ಲಿ ಕೆಲ ಮುಸ್ಲಿಂ ಯುವಕರು ಹಿಂದೂ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಯನ್ನು ಮಾಡುವ ಮೂಲಕ ಸೌಹಾರ್ದತೆಯನ್ನು ಮೆರೆದಿದ್ದಾರೆ.

ಪರಮೇಶ್ವರ್ ಪೂಜಾರಿ ಎಂಬವರು ಮಂಗಳೂರು ಹೊರವಲಯದ ನೀರು ಮಾರ್ಗ ಎಂಬಲ್ಲಿನ ಪಡು ಬಿತ್ತ್‌ಪಾದೆ ಪರಿಸರ ದಲ್ಲಿ ಕಳೆದ 40 ವರ್ಷಗಳಿಂದ ಮೂರ್ತೆದಾರಿಕೆ, ಕೂಲಿ ಕೆಲಸ ಮಾಡಿಕೊಂಡಿದ್ದವರು. ಆದರೆ ಕಾರಣಾಂತರಿಂದ ಮನೆಯವರಿಂದ ದೂರವಾಗಿ ಒಂಟಿಯಾಗಿ ಜೀವನ ನಡೆಸುತ್ತಿದ್ದ ಪರಮೇಶ್ವರ್ ಕಳೆದ ಎರಡು ತಿಂಗಳಿಂದೀಚೆಗೆ ಅಸೌಖ್ಯಕ್ಕೆ ಬಿದ್ದು ಬಿತ್ತ್‌ಪಾದೆ ಬಸ್ ತಂಗುದಾಣವನ್ನೇ ಆಶ್ರಯ ತಾಣವಾಗಿಸಿದ್ದರು.

ಒಂದು ತಿಂಗಳ ಹಿಂದೆ ತೀವ್ರ ಅಸೌಖ್ಯಕ್ಕೀಡಾಗಿದ್ದ ಪರಮೇಶ್ವರ್‌ ರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ರವಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯ ಜವಾಬ್ದಾರಿಯನ್ನೂ ಮುಸ್ಲಿಂ ಯುವಕರು ನಿರ್ವಹಿಸುವ ಮೂಲಕ ಸಹೋದರತೆಗೆ ಹೊಸ ಭಾಷ್ಯವನ್ನು ಬರೆದಿದ್ದಾರೆ.

ಪರಮೇಶ್ವರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರಿಗೆ ಬೇಕಾದ ಸೊತ್ತುಗಳನ್ನು ಪೂರೈಸಿದ್ದ ಯುವಕರು, ಬಸ್ ತಂಗುದಾಣದಲ್ಲಿ ವಾಸ್ತವ್ಯವಿದ್ದ ಸಂದರ್ಭ ಪರಮೇಶ್ವರ್ ಅವರನ್ನು ಸ್ನಾನ ಮಾಡಿಸಿ, ಮದ್ದು ನೀಡಿ ಆರೈಕೆ ಮಾಡಿದ್ದಾರೆ. ಅನಾರೋಗ್ಯ ಕಾರಣದಿಂದ ಬಸ್ ತಂಗುದಾಣದಲ್ಲಿ ಆದ ಗಲೀಜನ್ನು ತಾವೇ  ಸ್ವಚ್ಛಗೊಳಿಸಿ ಆದರ್ಶತೆ ಮೆರೆದ್ದಿದ್ದಾರೆ.

ರವಿವಾರ ಮೃತಪಟ್ಟ ಪರಮೇಶ್ವರ್‌ರ  ಅಂತ್ಯಕ್ರಿಯೆಯನ್ನು ಸೋಮವಾರ ಬೆಳಗ್ಗಿನಿಂದಲೇ ಬಿತ್ತ್‌ಪಾದೆ ಪರಿಸರದಲ್ಲಿ ಮುಸ್ಲಿಂ ಯುವಕರು ಒಟ್ಟಾಗಿ ಹಿಂದೂಗಳ ಜತೆಗೂಡಿ ಅಂತ್ಯಕ್ರಿಯೆ ನಡೆಸಿದರು. ಆಸ್ಪತ್ರೆಯ ಶವಾಗಾರಕ್ಕೆ ಪರಮೇಶ್ವರ್ ಅವರ ಕುಟುಂಬದವರು ಬಂದ ಕಾರಣ ಮುಂದಿನ ಧಾರ್ಮಿಕ ವಿಧಿವಿಧಾನಗಳನ್ನು ಅವರ ನೇತೃತ್ವದಲ್ಲೇ ನಡೆಸಲಾಯಿತು.

ಮುಸ್ಲಿಂ ಯುವಕರು ತಾವೇ ಹೆಣವನ್ನು ಹೆಗಲ ಮೇಲೆ ಹೊತ್ತು ಬೋಳೂರು ರುದ್ರಭೂಮಿಗೆ ಒಯ್ದರಲ್ಲದೆ, ಮೃತ ದೇಹಕ್ಕೆ ಹಿಂದೂ ಸಂಪ್ರದಾಯದ ಪ್ರಕಾರ ತುಳುಸಿ ನೀರು ಬಿಟ್ಟರು. ಈ ಯುವಕರೊಂದಿಗೆ ಗುರುಪ್ರಸಾದ್, ಲಕ್ಷ್ಮಣ್ ನಾಯ್ಕೆ ಸೇರಿದಂತೆ ಕೆಲವು ಹಿಂದೂಗಳು ಸಾಥ್ ನೀಡಿದರು.

ಪರಮೇಶ್ವರ್ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಲ್ಲದೆ, ಕಳೆದ ಹಲವು ಸಮಯಗಳಿಂದ ಅವರ ಸೇವೆಯನ್ನು ಮುಸ್ಲಿಂ ಯುವಕರು ಮಾಡಿ ಮಾನವೀಯತೆಯನ್ನು ತೋರಿದ್ದಾರೆ. ನಾವು ಕೂಡಾ ಅವರ ಜತೆಗಿದ್ದು ಸಹಕಾರ ನೀಡಿದ್ದೇವೆ ಎಂದು ಬಿತ್ತ್‌ಪಾದೆಯ ಅಂಗಡಿ ಮಾಲಕ ಗುರುಪ್ರಸಾದ್ ಎಂಬವರು ಅಭಿಪ್ರಾಯಿಸಿದ್ದಾರೆ.

40 ವರ್ಷಗಳ ಹಿಂದೆ ಮನೆಬಿಟ್ಟು ಬಂದು ಬಿತ್ತ್‌ಪಾದೆಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹಲವು ಬಾರಿ ಮನೆಗೆ ಬರಲು ನಾವು ಒತ್ತಾಯಿಸಿದರೂ ಅವರು ಬರಲಿಲ್ಲ. ಜಾತಿ, ಧರ್ಮ ಬಿಟ್ಟು ಅವರ ಸೇವೆ ಮಾಡಿದ ಯುವಕರ ಕೆಲಸ ಶ್ಲಾಘನೀಯ. ಅವರಿಗೆ ನಾವೆಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದು ಮೃತರ ಪುತ್ರ ವಿಠಲ್ ಕೃತಜ್ಞತೆ ಸಲ್ಲಿಸಿದ್ದಾರೆ.

ಪರಮೇಶ್ವರ್ ಹಲವು ವರ್ಷಗಳಿಂದ ಬಿತ್ತ್‌ಪಾದೆಯಲ್ಲಿ ವಾಸಿಸುತ್ತಿದ್ದರು. ಎಲ್ಲರೊಂದಿಗೆ ಉತ್ತಮವಾಗಿ ಬೆರೆಯುತ್ತಿದ್ದರು. 2 ತಿಂಗಳಿನಿಂದ ತೀರಾ ಅಸೌಖ್ಯಕ್ಕೆ ಬಿದ್ದಿದ್ದು, ನಾವು ನಮ್ಮಿಂದಾದಷ್ಟು ಸಹಕಾರ ಮಾಡಿದ್ದೇವೆ. ಈ ರೀತಿ ಸಹಾಯ ಮಾಡುವುದು ನಿಜವಾದ ಧರ್ಮ ಎಂಬುದು ನಮ್ಮ ಭಾವನೆ ಎಂದು ಪರಮೇಶ್ವರವರ ಸೇವೆಯಲ್ಲಿ ಭಾಗಿಯಾಗಿದ್ದ ಇಲ್ಯಾಸ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X