Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ಯಾಸಂಸ್ಕಾರಕ್ಕೆ ಹವ್ಯಕ ಒಕ್ಕೂಟ...

ಕನ್ಯಾಸಂಸ್ಕಾರಕ್ಕೆ ಹವ್ಯಕ ಒಕ್ಕೂಟ ವಿರೋಧ: ರಾಘವೇಶ್ವರ ಶ್ರೀ ಪೀಠ ತ್ಯಜಿಸುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Aug 2017 9:28 PM IST
share
ಕನ್ಯಾಸಂಸ್ಕಾರಕ್ಕೆ ಹವ್ಯಕ ಒಕ್ಕೂಟ ವಿರೋಧ: ರಾಘವೇಶ್ವರ ಶ್ರೀ ಪೀಠ ತ್ಯಜಿಸುವಂತೆ ಆಗ್ರಹ

ಬೆಂಗಳೂರು, ಆ.22: ಇತ್ತೀಚಿಗೆ ಗಿರಿನಗರದ ರಾಮಚಂದ್ರಾಪುರ ಮಠದಲ್ಲಿ ‘ಕನ್ಯಾ ಸಂಸ್ಕಾರ’ ನಡೆಸಿದ್ದಕ್ಕೆ ಅಖಿಲ ಹವ್ಯಕ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದ್ದು, ಮಠದ ಪೀಠಾಧ್ಯಕ್ಷ ರಾಘವೇಶ್ವರ ಭಾರತಿ ಸ್ವಾಮೀಜಿ ಕೂಡಲೇ ಪೀಠವನ್ನು ತ್ಯಜಿಸಬೇಕು ಎಂದು ಹವ್ಯಕ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ಗಣೇಶ್ ಭಟ್, ಭಾರತಿ ಸ್ವಾಮೀಜಿ ಕನ್ಯಾ ಸಂಸ್ಕಾರದ ಹೆಸರಿನಲ್ಲಿ ಅಸಂಸ್ಕೃತಿಯನ್ನು ಪಾಲಿಸುತ್ತಿದ್ದಾರೆ. ಧಾರ್ಮಿಕ ಆಚರಣೆಗಳಿಗೆ ಹಾಗೂ ಮಠದ ಪಾರಂಪರಿಕತೆಗೆ ಧಕ್ಕೆ ತರುತ್ತಿದ್ದಾರೆ. ಹೀಗಾಗಿ ಅವರು ಪೀಠಾಧಿಪತಿಗಳಾಗಿ ಮುಂದುವರಿಯಲು ಅನರ್ಹರು ಎಂದು ಹೇಳಿದರು.

ಕನ್ಯಾ ಸಂಸ್ಕಾರದ ಹೆಸರಿನಲ್ಲಿ ಹದಿ ಹರೆಯದ ಬಾಲೆಯರೊಂದಿಗೆ ಗುಪ್ತವಾದ ಕೊಠಡಿಯಲ್ಲಿ ಏಕಾಂತವನ್ನು ಅನುಭವಿಸುವಂತೆ ಹೇಳುತ್ತಾರೆ. ಈ ಏಕಾಂತದಲ್ಲಿ ಏನು ನಡೆಯಿತು ಎಂದು ಯಾರೊಂದಿಗೂ ಹೇಳಬಾರದು ಎಂದು ಪ್ರಮಾಣ ಮಾಡಿಸಿಕೊಳ್ಳುತ್ತಾರೆ ಎಂದು ಕನ್ಯಾ ಸಂಸ್ಕಾರಕ್ಕೆ ಒಳಪಟ್ಟ ಹಲವು ಯುವತಿಯರು ಬಹಿರಂಗಪಡಿಸಿದ್ದಾರೆ. ಇಲ್ಲಿ ಹಲವು ಅನುಚಿತ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ ಎಂದು ಅವರು ತಿಳಿಸಿದರು.

ಒಕ್ಕೂಟದ ಸದಸ್ಯ ಬೆಣ್ಣೆಗದ್ದೆ ನಾರಾಯಣ ಭಟ್ಟ ಮಾತನಾಡಿ, ಶಾಸ್ತ್ರಗಳ ಪ್ರಕಾರ ಕನ್ಯಾ ಸಂಸ್ಕಾರವನ್ನು 8 ನೆ ವಯಸ್ಸಿನ ಒಳಗಿನವರಿಗೆ ನೀಡಬೇಕು. ಆದರೆ, ಈ ಸ್ವಾಮೀಜಿ ಪ್ರಾಯಕ್ಕೆ ಬಂದವರಿಗೆ ಕನ್ಯಾ ಸಂಸ್ಕಾರ ಮಾಡುತ್ತಿರುವುದು ಎಷ್ಟು ಸರಿ. ಕನ್ಯಾ ಸಂಸ್ಕಾರ ಮೂಲತಃ ಉಪಶಮನಕ್ಕೆ ಸಮಾನವಾದದ್ದು. ಉಪಶಮನ ಗಂಡು ಮಕ್ಕಳಿಗೆ ನೀಡಿದರೆ, ಕನ್ಯಾ ಸಂಸ್ಕಾರ ಹೆಣ್ಣು ಮಕ್ಕಳಿಗೆ ನೀಡುತ್ತಾರೆ. ಆದರೆ, ಕನ್ಯಾ ಸಂಸ್ಕಾರವನ್ನು ತಂದೆ-ತಾಯಿ ಅಥವಾ ಪೋಷಕರು ನೀಡುವುದೇ ವಿನಹಃ, ಮಠಾಧಿಪತಿಗಳು ಮಾಡುವಂತಿಲ್ಲ ಎಂದು ಹೇಳಿದರು.

ಒಕ್ಕೂಟದ ಗೌರವಾಧ್ಯಕ್ಷ ಶ್ರೀಧರ್ ವಿ ಹೆಗ್ಡೆ ಮಾತನಾಡಿ, ರಾಘವೇಶ್ವರ ಭಾರತಿ ಸ್ವಾಮೀಜಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ವರದಿಯಾದ ಸಂದರ್ಭದಲ್ಲಿ ಮಠದ ಆಡಳಿತ ಮಂಡಳಿ ಹಾಗೂ ಅವರ ಬೆಂಬಲಿಗರು ಮಠದಲ್ಲಿ ಯಾವುದೇ ಕನ್ಯಾಸಂಸ್ಕಾರ ನಡೆದಿಲ್ಲ ಎಂದು ಹೇಳಿದ್ದರು. ಈಗ ಅದೇ ಆಡಳಿತ ಮಂಡಳಿ 2010 ರಿಂದ ಕನ್ಯಾ ಸಂಸ್ಕಾರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ, ಮಠದಲ್ಲಿ ಏಕಾಂತವಾಗಿ ಕನ್ಯಾ ಸಂಸ್ಕಾರ ನಡೆದಿರುವ ದಾಖಲೆಗಳಿದ್ದರೆ ಕೂಡಲೇ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಕನ್ಯಾ ಸಂಸ್ಕಾರ ಎಂಬುದು ರಾಜ್ಯದ ಯಾವುದೇ ಮಠಗಳಲ್ಲಿಯೂ ನಡೆಯುತ್ತಿಲ್ಲ. ಆದರೆ, ಈ ಮಠದ ಆಡಳಿತ ಮಂಡಳಿ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದೆ. ರಾಘವೇಶ್ವರ ಭಾರತಿ ಸ್ವಾಮೀಜಿಗಳ ಹಿಂದಿನ ಭೂ ಕಬಳಿಕೆ, ದೇವಾಲಯಗಳ ಕಬಳಿಕೆ, ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ದೇಶಿ ತಳಿ ಸಂರಕ್ಷಣೆ, ಗೋ ರಕ್ಷಣೆ, ಹಾಲು ಹಬ್ಬ ಹಾಗೂ ಕನ್ಯಾ ಸಂಸ್ಕಾರ ಮುಂದುವರಿಸಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ, ಸ್ವಾಮೀಜಿಯ ಅಕ್ರಮ ಚಟುವಟಿಕೆಗಳ ಕುರಿತು ಪ್ರಶ್ನಿಸುವವರ ಮೇಲೆ ತಮ್ಮ ಶಿಷ್ಯರ ಪ್ರಭಾವ ಬಳಸಿಕೊಂಡು ಹಲ್ಲೆ ಮಾಡಿಸುವುದು, ಬೆದರಿಕೆ ಹಾಕಿಸುವುದು ಹಾಗೂ ಸುಳ್ಳು ಮೊಕದ್ದಮೆಗಳನ್ನು ಹಾಕಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಸಿ.ಎಚ್.ಎಸ್.ಭಟ್, ನರಸಿಂಹಮೂರ್ತಿ ಸೇರದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X