Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತೀ ಶಾಲೆಯ ಅಂಗಳದಲ್ಲಿಯೇ ತಾರಾ ಮಂಡಲ...

ಪ್ರತೀ ಶಾಲೆಯ ಅಂಗಳದಲ್ಲಿಯೇ ತಾರಾ ಮಂಡಲ ವೀಕ್ಷಣೆಗೆ ರಾಜ್ಯ ಸರಕಾರ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ23 Aug 2017 9:41 PM IST
share
ಪ್ರತೀ ಶಾಲೆಯ ಅಂಗಳದಲ್ಲಿಯೇ ತಾರಾ ಮಂಡಲ ವೀಕ್ಷಣೆಗೆ ರಾಜ್ಯ ಸರಕಾರ ಸಿದ್ಧತೆ

ಬೆಂಗಳೂರು, ಆ.23: ಸುಮಾರು 10 ಅಡಿ ಸುತ್ತಳತೆಯಲ್ಲಿ ಗೊಮ್ಮಟದ ಮಾದರಿಯಲ್ಲಿರುವ ಸಂಚಾರಿ ಡಿಜಿಟಲ್ ತಾರಾಲಯವು ಮುಂದಿನ ಆರು ತಿಂಗಳಲ್ಲಿ ರಾಜ್ಯದ ಪ್ರತೀ ಶಾಲೆಗೂ ಸಂಚರಿಸುವ ಮೂಲಕ ಶಾಲೆಯ ಅಂಗಳದಲ್ಲಿಯೇ ತಾರಾ ಮಂಡಲವನ್ನು ವೀಕ್ಷಿಸಲು ಅನುಕೂಲವಾಗುವಂತೆ ರಾಜ್ಯ ಸರಕಾರ ಕಾರ್ಯಕ್ರಮ ರೂಪಿಸಿದೆ.

ಬುಧವಾರ ಸಂಚಾರಿ ಡಿಜಿಟಲ್ ತಾರಾಲಯವನ್ನು ಪ್ರಾಯೋಗಿಕವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರದರ್ಶಿಸಲಾಯಿತು. ನಗರದ ವಿವಿಧ ಶಾಲೆಗಳಿಂದ ಬಂದಿದ್ದ ಸಾವಿರಾರು ವಿದ್ಯಾರ್ಥಿಗಳು ಸಂಚಾರಿ ಡಿಜಿಟಲ್ ತಾರಾಲಯದಲ್ಲಿ ಆಕಾಶಕಾಯ, ಮಾನವ ನಿರ್ಮಿತ ಉಪಗ್ರಹಗಳನ್ನು ಆಶ್ಚರ್ಯಚಕಿತದಿಂದ ನೋಡಿ ಸಂತಸ ವ್ಯಕ್ತಪಡಿಸಿದರು.

ಮುಂದಿನ ವಾರದಿಂದಲೇ ಡಿಜಿಟಲ್ ಸಂಚಾರಿ ತಾರಾಲಯ ಶಾಲೆಯಿಂದ ಶಾಲೆಗೆ ಸಂಚರಿಸಲಿದೆ. ಈ ತಾರಾಲಯದ ಮೂಲಕ ಬೆಂಗಳೂರಿನ ಜವಾಹರ್‌ಲಾಲ್ ನೆಹರೂ ತಾರಾಲಯದ ಮಾದರಿಯಲ್ಲೇ ಆಕಾಶಕಾಯಗಳ ಕುರಿತು ಚಿತ್ರ ಹಾಗೂ ಮಾಹಿತಿಯನ್ನು ಪ್ರದರ್ಶಿಸಲಾಗುವುದು.

ಪ್ರತೀ ಶಾಲೆಯಲ್ಲಿ ಒಂದು ಕೃತಕ ಹಾಗೂ ತಾತ್ಕಾಲಿಕ ಗೋಳಾಕಾರದ ಗೊಮ್ಮಟವನ್ನು ನಿರ್ಮಿಸಲಾಗುತ್ತದೆ. ಆ ಗೊಮ್ಮಟದಲ್ಲಿ ಸುಮಾರು 20ರಿಂದ 25ವಿದ್ಯಾರ್ಥಿಗಳು ಕುಳಿತುಕೊಳ್ಳುವಂತಹ ಅವಕಾಶವಿರುತ್ತದೆ. ನಂತರ ಅತ್ಯಾಧುನಿಕ ಪ್ರೊಜೆಕ್ಟರ್ ಸಹಾಯದಿಂದ ಗೋಳಾಕಾರದ ಗೊಮ್ಮಟದಲ್ಲಿ ಅದ್ಭುತವಾದ ಕಾಲ್ಪನಿಕ ಆಕಾಶವನ್ನು ಸೃಷ್ಟಿಸಲಾಗುತ್ತದೆ.

ಈ ಸಂಚಾರಿ ತಾರಾಲಯದಲ್ಲಿ ಪ್ರಮುಖವಾಗಿ 8ರಿಂದ 10ನೆ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಕ್ಕನುಗುಣವಾಗಿ ‘ನೋಡಿ ತಿಳಿ’ ಪರಿಕಲ್ಪನೆಯಡಿ ಪ್ರದರ್ಶನಗಳನ್ನು ರೂಪಿಸಲಾಗಿದ್ದು, ನೈಜತೆಯ ರೂಪದಲ್ಲಿ ವಿಶೇಷ ಅನುಭವವನ್ನು ಮಕ್ಕಳಲ್ಲಿ ಉಂಟು ಮಾಡಲಿದೆ. ವಿದ್ಯಾರ್ಥಿಗಳಿಗೆ ತೋರಿಸಿದ ನಂತರ ಮುಂದಿನ ಮಾರ್ಚ್ 2018ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುವವರೆಗೆ ಈ ತಾರಾಲಯಗಳನ್ನು ಆಯಾ ಜಿಲ್ಲೆಗಳ ಜನಸಾಮಾನ್ಯರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X