Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕನನ್ನು...

ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕನನ್ನು ಇನ್ನೊಂದು ರೈಲಿನೊಳಗೆ ಎಸೆದರು

ಗಂಭೀರ ಗಾಯಗೊಂಡ ವ್ಯಕ್ತಿ ಸಾವು

ವಾರ್ತಾಭಾರತಿವಾರ್ತಾಭಾರತಿ23 Aug 2017 11:05 PM IST
share
ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕನನ್ನು ಇನ್ನೊಂದು ರೈಲಿನೊಳಗೆ ಎಸೆದರು

ಮುಂಬೈ, ಆ.23: ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸ್ ಕಾನ್‌ಸ್ಟೇಬಲ್ ಚಲಿಸುತ್ತಿರುವ ರೈಲೊಂದರಿಂದ ಕೆಳಗೆ ಬಿದ್ದು ಗಾಯಗೊಂಡ ಪ್ರಯಾಣಿಕನಿಗೆ ಯಾವುದೇ ಪ್ರಥಮ ಚಿಕಿತ್ಸೆ ನೀಡದೆ, ಆಸ್ಪತ್ರೆಗೆ ದಾಖಲಿಸದೆ ಇನ್ನೊಂದು ರೈಲಿನಲ್ಲಿ ಎಸೆದು ಹೋದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಮುಂಬೈಯಲ್ಲಿ ಬೆಳಕಿಗೆ ಬಂದಿದೆ.

ಈ ಘಟನೆ ಸಿಸಿಟಿವಿ ದೃಶ್ಯಗಳಿಂದಾಗಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸ್ ಕಾನ್‌ಸ್ಟೆಬಲ್‌ರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಜುಲೈ 22 ಹಾಗೂ 23ರ ನಡುವೆ ರಾತ್ರಿ 12.59ಕ್ಕೆ ಮುಂಬೈಯ ಸನ್ಪಾಡ ರೈಲ್ವೆ ನಿಲ್ದಾಣದಲ್ಲಿ ಪನ್ವೇಲ್‌ನತ್ತ ಸಂಚರಿಸುತ್ತಿದ್ದ ರೈಲಿನಿಂದ ಅಪರಿಚಿತ ವ್ಯಕ್ತಿಯೋರ್ವ ಕೆಳಗೆ ಬಿದ್ದಿದ್ದ. ಗಂಭೀರ ಗಾಯಗೊಂಡಿದ್ದ ಆತನನ್ನು ಗೃಹ ರಕ್ಷಕ ದಳದ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸ ಕಾನ್‌ಸ್ಟೇಬಲ್ 1:55ಕ್ಕೆ ಆಗಮಿಸಿದ ಇನ್ನೊಂದು ರೈಲಿನ ಒಳಗಡೆ ಎಸೆದಿದ್ದಾರೆ. ಪನ್ವೇಲ್‌ನಲ್ಲಿ ಈ ರೈಲಿನ ನಿರ್ವಹಣೆಗಾಗಿ ದಿಕ್ಕು ಬದಲಾಯಿಸಲಾಗಿತ್ತು. ಮರುದಿನ ಮಧ್ಯಾಹ್ನ ಸ್ವಚ್ಛತಾ ಸಿಬ್ಬಂದಿ ಗಾಯಗೊಂಡ ಪ್ರಯಾಣಿಕನ್ನು ಗುರುತಿಸಿದ್ದರು.

ಗಾಯಗೊಂಡ ಪ್ರಯಾಣಿಕನನ್ನು ಪನ್ವೇಲ್ ಗ್ರಾಮೀಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅದಾಗಲೇ ಅವರು ಮೃತಪಟ್ಟಿದ್ದರು.

 ಪ್ರಕರಣಕ್ಕೆ ಸಂಬಂಧಿಸಿ ಗೃಹ ರಕ್ಷಕ ದಳದ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸ್ ಕಾನ್‌ಸ್ಟೇಬಲ್‌ರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆದರೆ, ಕೇಂದ್ರೀಯ ರೈಲ್ವೆ ಅವರ ಹೆಸರನ್ನು ಬಹಿರಂಗಗೊಳಿಸಿಲ್ಲ.

ಚಲನೆಯಿಲ್ಲದ ಪ್ರಯಾಣಿಕನ ಸಮೀಪ ಜಿಆರ್‌ಪಿ ಕಾನ್‌ಸ್ಟೇಬಲ್ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ 15 ನಿಮಿಷಗಳ ಕಾಲ ನಿಂತಿದ್ದು, ಮುಂದಿನ ರೈಲು ಆಗಮಿಸಿದಾಗ ಅವರನ್ನು ಪ್ರಥಮ ದರ್ಜೆ ಬೋಗಿಯಲ್ಲಿ ಎಸೆದು ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.

ಮುಂಬೈ ಉಪವಲಯದ ವಿಭಾಗದಲ್ಲಿ ಪ್ರತಿದಿನ ಸರಾಸರಿ 10 ಜನ ಸಾವನ್ನಪ್ಪುತ್ತಿದ್ದಾರೆ. ಅಷ್ಟೇ ಸಂಖ್ಯೆಯಲ್ಲಿ ಗಾಯಗೊಳ್ಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X